Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ


Team Udayavani, Jun 29, 2024, 12:35 AM IST

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರ ಸೂಚನೆಯಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಸುವ ಕಾರ್ಯವನ್ನು ಪಾಲಿಕೆ ವಿದ್ಯುತ್‌ ಸರಬರಾಜು ವಿಭಾಗದ ಅಧಿಕಾರಿಗಳು ಮೆಸ್ಕಾಂ ಸಹಕಾರದೊಂದಿಗೆ ಕೈಗೊಂಡಿದ್ದಾರೆ.

ಸ್ಟೇಟ್‌ಬ್ಯಾಂಕ್‌ ಬಳಿಯ ರೊಸಾರಿಯೋ ಶಾಲೆಯ ಹಿಂಭಾಗದಲ್ಲಿ ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ವಿದ್ಯುತ್‌ ಪ್ರವಹಿಸಿ ಆಟೋ ಚಾಲಕರಿಬ್ಬರು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಬೀದಿದೀಪ ಕಂಬಗಳಿಗೂ ಟ್ರಿಪ್ಪರ್‌ ಅಳವಡಿಸುವಂತೆ ಜಿಲ್ಲಾಧಿಕಾರಿ ಪಾಲಿಕೆ ಅಧಿಕಾರಿಗಳಿಗೆ ಗುರುವಾರವೇ ಸೂಚನೆ ನೀಡಿದ್ದರು.

ಅದರಂತೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರದಿಂದ ನಗರದ ಹಲವೆಡೆ ಸ್ಟ್ರೀಟ್‌ ಲೈಟ್ ಮೀಟರ್‌ ಬಾಕ್ಸ್‌ಗಳಲ್ಲಿ ಟ್ರಿಪ್ಪರ್‌ಗಳನ್ನು ಅಳವಡಿಸುವ ಕೆಲಸ ಆರಂಭಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 1,600ಕ್ಕೂ ಅಧಿಕ ಫ್ಯೂಸ್‌ಗಳಿರುವ ಮೀಟರ್‌ ಬಾಕ್ಸ್‌ಗಳಿದ್ದು, ಮುಂದಿನ 3-4 ದಿನದೊಳಗೆ ಎಲ್ಲ ಕಡೆಗಳಲ್ಲಿ ಟ್ರಿಪರ್‌ಗಳನ್ನು ಅಳವಡಿಸಲಾಗುವುದು. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ಬಿದ್ದಾಗ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ. ವಿದ್ಯುತ್‌ ತಂತಿ ತುಂಡಾಗಿ ಬಿದ್ದಿರುವುದು, ಜೋತಾಡುವುದು ಕಂಡು ಬಂದರೆ ಬಂದರೆ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತೆ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತೀಕ್ಷಾ ಶೆಟ್ಟಿ ಸಾವು ಪ್ರಕರಣ: ವಿದ್ಯುತ್‌ ಕಂಬ ಸ್ಥಳಾಂತರ
ಬೆಳ್ತಂಗಡಿ: ಶಿಬಾಜೆ ಬರ್ಗುಳ ಸಮೀಪ ಗುರುವಾರ ಸಂಜೆ ವಿದ್ಯುತ್‌ ಸ್ಪರ್ಶಿಸಿ ಪ್ರತೀಕ್ಷಾ ಶೆಟ್ಟಿ ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಘಟನೆಗೆ ಕಾರಣವಾದ ವಿದ್ಯುತ್‌ ಕಂಬವನ್ನು ಮೆಸ್ಕಾಂ ಇಲಾಖೆ ಜೂ. 28ರಂದು ಸ್ಥಳಾಂತರಿಸಿದೆ.

ಪ್ರತೀಕ್ಷಾ ಸಾವಿಗೀಡಾಗುವ ಮೊದಲು ಆನ್‌ಲೈನ್‌ ಡೆಲಿವರಿಗೆ ಬಂದಿದ್ದ ಯುವಕ ತೋಡಿನಲ್ಲಿ ನೀರಿನಹರಿವು ಹೆಚ್ಚಿದ್ದರಿಂದ ರಸ್ತೆಯಲ್ಲಿ ನಿಂತಿದ್ದ. ಮನೆಗೆ ಬರುತ್ತಿದ್ದರೆ ಆತನಿಗೆ ವಿದ್ಯುತ್‌ ಆಘಾತವಾಗುವ
ಸಾಧ್ಯತೆ ಇತ್ತು.

ಧರ್ಮಸ್ಥಳ ಸಬ್‌ ಸ್ಟೇಶನ್‌ನಿಂದ ಶಿಶಿಲ ವಿದ್ಯುತ್‌ ಪರಿವರ್ತಕಗಳಿಗೆ ಸಾಗುವ ಈ ಎಚ್‌.ಟಿ. ಮತ್ತು ಎಲ್‌. ಟಿ. ಲೈನ್‌ ಬಹಳಷ್ಟು ಅಪಾಯಕಾರಿ ಯಾಗಿದೆ. ಇದರ ನಿರ್ವಹಣೆಯೆಡೆಗೆ ಒತ್ತು ನೀಡುತ್ತಿದ್ದರೆ ಪ್ರತೀಕ್ಷಾ ಬದುಕುಳಿಯುತ್ತಿದ್ದಳು. ಇದೇ ಮಾರ್ಗವಾಗಿ ಇನ್ನಷ್ಟು ಅಪಾಯಕಾರಿ ವಿದ್ಯುತ್‌ ಕಂಬಗಳಿದ್ದು, ಅವುಗಳನ್ನೂ ಸ್ಥಳಾಂತರಿಸುವಂತೆ ಹಾಗೂ ಸೂಕ್ತ ನಿರ್ವಹಣೆ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇಂದು ಶಾಸಕ ಪೂಂಜ ಭೇಟಿ
ಶಾಸಕ ಹರೀಶ್‌ ಪೂಂಜ ಅವರು ಕಾರ್ಯನಿಮಿತ್ತ ಬೆಂಗಳೂರಿನಲ್ಲಿದ್ದು, ಜೂ.29ರಂದು ಘಟನಾ ಸ್ಥಳಕ್ಕೆ ಹಾಗೂ ಪ್ರತೀಕ್ಷಾ ಮನೆಗೆ ಭೇಟಿ ನೀಡಲಿರುವರು.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.