![1-PTI](https://www.udayavani.com/wp-content/uploads/2024/07/1-PTI-415x252.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
Team Udayavani, Jun 29, 2024, 8:52 AM IST
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-620x382.jpg)
ಪಾಟ್ನಾ: ಬಿಹಾರದಲ್ಲಿ ಸೇತುವೆ ಕುಸಿತ ಪ್ರಕರಣಗಳ ಸಂಖ್ಯೆ ಏರುತ್ತಿದೆ, ಶುಕ್ರವಾರ ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದ್ದು ಇದರೊಂದಿಗೆ ಕಳೆದ ಒಂಬತ್ತು ದಿನಗಳಲ್ಲಿ ಬಿಹಾರದಲ್ಲಿ ಒಟ್ಟು ಐದು ಸೇತುವೆಗಳು ಬಿದ್ದಂತಾಗಿದೆ.
ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಸುಮಾರು 75 ಮೀ ಉದ್ದದ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಈ ವೇಳೆ ಒಂದು ಭಾಗ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮಾರು ಮೂರೂ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆಯು 2021 ರಿಂದ ನಿರ್ಮಾಣ ಆರಂಭಗೊಂಡಿದ್ದು ಇದುವರೆಗೂ ಪೂರ್ಣಗೊಂಡಿಲ್ಲ ಅಲ್ಲದೆ ಬಿಹಾರ ಸರ್ಕಾರದ ಗ್ರಾಮೀಣ ಕಾಮಗಾರಿ ಇಲಾಖೆಯು ಸೇತುವೆ ನಿರ್ಮಿಸುತ್ತಿದೆ ಎನ್ನಲಾಗಿದೆ.
ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಎರಡು ಪಿಲ್ಲರ್ ಗಾಲ ನಡುವೆ ಇರುವ ಉದ್ದನೆಯ ಗರ್ಡರ್ನ ಭಾಗ ಕುಸಿದು ಬಿದ್ದಿದೆ ಘಟನೆ ನಡೆಯುತ್ತಿದ್ದಂತೆ ಅಧಿಕಾರಿಗಳು ಸೇತುವೆಯ ಭಾಗಕ್ಕೆ ಪ್ಲಾಸ್ಟಿಕ್ ಹೊದಿಸಿ ಏನು ಆಗಿಲ್ಲ ಎಂಬಂತೆ ನಟಿಸಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿ ಮಾಹಿತಿ ನೀಡಿದ ಅಧಿಕಾರಿಗಳು ಜೂನ್ 24 ರ ಮೊದಲೇ ಈ ಸೇತುವೆ ಕುಸಿದಿರುವುದಾಗಿ ಹೇಳಿಕೊಂಡಿದ್ದಾರೆ. ಅಂದಿನಿಂದಲೇ ಸೇತುವೆ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಶಿಶ್ ಪಾಸ್ವಾನ್ ಅವರು ಗುತ್ತಿಗೆದಾರ ಅಮರನಾಥ್ ಝಾ ಅವರಿಗೆ ಪತ್ರದ ಮೂಲಕ ತಿಳಿಸಿದ್ದು ಪುನರ್ ನಿರ್ಮಾಣ ಕಾರ್ಯ ನಡೆಸಬೇಕಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಗುತ್ತಿಗೆದಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಸೇತುವೆಯ ಗರ್ಡರ್ ಕುಸಿದಿದೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಇತ್ತೀಚಿಗೆ ನಡೆದ ಸೇತುವೆ ಕುಸಿತ ಪ್ರಕರಣಗಳು ಇಲ್ಲಿನ ಭ್ರಷ್ಟಾಚಾರವನ್ನು ಎತ್ತಿ ತೋರಿಸುವಂತಿದೆ. ಕಳೆದ ಒಂಬತ್ತು ದಿನಗಳಲ್ಲಿ ಐದು ಸೇತುವೆಗಳು ಕುಸಿದಿರುವುದು ಸೇತುವೆ ನಿರ್ಮಾಣದಲ್ಲಿನ ಗುಣಮಟ್ಟದ ಕುರಿತು ಅನುಮಾನ ಮೂಡಿಸುವಂತಿದೆ.
ಇದನ್ನೂ ಓದಿ: Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
𝟗 दिन के अंदर बिहार में यह 𝟓वाँ पुल गिरा है।
मधुबनी-सुपौल के बीच भूतही नदी पर वर्षों से निर्माणाधीन पुल गिरा। क्या आपको पता लगा? नहीं तो, क्यों? बूझो तो जाने? #Bihar #Bridge pic.twitter.com/IirnmOzRSo
— Tejashwi Yadav (@yadavtejashwi) June 28, 2024
ಟಾಪ್ ನ್ಯೂಸ್
![1-PTI](https://www.udayavani.com/wp-content/uploads/2024/07/1-PTI-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
![1993 Mumbai riot accused arrested after 31 years](https://www.udayavani.com/wp-content/uploads/2024/07/riot-150x83.jpg)
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
![Annamalai to resign as Tamil Nadu BJP president?](https://www.udayavani.com/wp-content/uploads/2024/07/annamalai-150x83.jpg)
Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
MUST WATCH
ಹೊಸ ಸೇರ್ಪಡೆ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
![Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000](https://www.udayavani.com/wp-content/uploads/2024/07/Bombay-150x89.jpg)
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000
![Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್](https://www.udayavani.com/wp-content/uploads/2024/07/9-2-150x90.jpg)
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
![Queen’s Premier League: ಕ್ವೀನ್ಸ್ ಪ್ರೀಮಿಯರ್ ಲೀಗ್ ಜೆರ್ಸಿ ಬಿಡುಗಡೆ](https://www.udayavani.com/wp-content/uploads/2024/07/8-2-150x90.jpg)
Queen’s Premier League: ಕ್ವೀನ್ಸ್ ಪ್ರೀಮಿಯರ್ ಲೀಗ್ ಜೆರ್ಸಿ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.