Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?


Team Udayavani, Jun 29, 2024, 10:35 AM IST

1

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ(Renuka Swamy Case) ಪ್ರಕರಣದಲ್ಲಿ ನಟ ದರ್ಶನ್‌(Darshan Thoogudeepa) ಹಾಗೂ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ದರ್ಶನ್‌ ಆಪ್ತೆ ಪವಿತ್ರಾ ಗೌಡ (Pavithra Gowda) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಮೆಸೇಜ್‌ ಮಾಡುತ್ತಿದ್ದ  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಅಪಹರಿಸಿ, ಶೆಡ್‌ ವೊಂದರಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ, ಆ ಬಳಿಕ ಭೀಕರವಾಗಿ ಹತ್ಯೆಗೈದು ಮೋರಿಯೊಂದಕ್ಕೆ ಎಸೆಯಲಾಗಿತ್ತು.

ಮೊದಲಿಗೆ ಇದೊಂದು ಹಣಕಾಸು ವಿಚಾರಕ್ಕೆ ನಡೆದ ಕೊಲೆ, ಇದನ್ನು ನಾವೇ ಮಾಡಿದ್ದೇವೆ ಎಂದು ಇಬ್ಬರು ಆರೋಪಿಗಳು ಠಾಣೆಗೆ ಬಂದು ಶರಣಾಗಿದ್ದರು. ಆ ಬಳಿಕ ತೀವ್ರ ವಿಚಾರಣೆ ನಡೆಸಿದ ಬಳಿಕ ದರ್ಶನ್‌ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದು ತಪ್ಪೋಪ್ಪಿಕೊಂಡಿದ್ದಾರೆ.

ಈ ಪ್ರಕರಣದ ಸಂಬಂಧ ತೀವ್ರ ವಿಚಾರಣೆ ನಡೆಸಿದ ಬಳಿಕ ಎ1 ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 18 ಮಂದಿಯನ್ನು ಮೊದಲಿಗೆ ಬಂಧಿಸಲಾಗಿತ್ತು. ಇದರಲ್ಲಿ ಸದ್ಯ 14 ಜನ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣ ದೇಶದಲ್ಲೇ ಸದ್ದು ಮಾಡುತ್ತಿರುವ ಬೆನ್ನಲ್ಲೇ ಇದೀಗ ಕಿರುತೆರೆಯಲ್ಲಿ ಈ ಘಟನೆಯನ್ನು ಆಧರಿಸಿಯೇ ಎಪಿಸೋಡ್‌ ವೊಂದರ ಪ್ರೋಮೊ ರಿಲೀಸ್‌ ಆಗಿ ಸದ್ದು ಮಾಡಿದೆ.

ಖಾಸಗಿ ವಾಹಿನಿಯ ‘ಶಾಂತಂ ಪಾಪಂ’ ಎನ್ನುವ ಕ್ರೈಮ್‌ ಕಥಾನಕದ ಕಾರ್ಯಕ್ರಮವೊಂದಲ್ಲಿ ರೇಣುಕಾಸ್ವಾಮಿ ಪ್ರಕರಣವನ್ನು ಹೋಲುವ ಎಪಿಸೋಡ್‌ ವೊಂದು ಪ್ರಸಾರ ಆಗಲಿದೆ.

ಈ ಡೇಡ್ ಡೆವಿಲ್ ದೇವದಾಸ್‌ ಎನ್ನುವ  ಎಪಿಸೋಡ್‌ ಇದಾಗಿದ್ದು, ಇದರಲ್ಲಿ ಒಬ್ಬ ಶ್ರೀಮಂತನನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗುತ್ತದೆ. ಪ್ರಭಾವಿಗಳ ಒತ್ತಡ ಕೇಳಿಬಂದರೂ ಪೊಲೀಸರು ಆತನನ್ನು ಬಂಧಿಸುತ್ತಾರೆ. ಈತನಿಗೆ ಸಂಸಾರಯಿದ್ದರೂ ಈತ ಒಂದು ಹೆಣ್ಣಿನ ಜೊತೆ ಸಂಬಂಧವನ್ನಿಟ್ಟುಕೊಂಡಿರುತ್ತಾನೆ. ಆ ಹೆಣ್ಣಿಗೆ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಮೆಸೇಜ್‌ ಗಳನ್ನು ಮಾಡುತ್ತಾನೆ. ಇದನ್ನರಿತ ಶ್ರೀಮಂತ ವ್ಯಕ್ತಿ ತನ್ನ ಪ್ರಭಾವವನ್ನು ಬಳಸಿಕೊಂಡು ಕೆಟ್ಟದಾಗಿ ಮೆಸೇಜ್‌ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ತನ್ನ ಸಹಚರರೊಂದಿಗೆ ಸೇರಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡುವ ದೃಶ್ಯವನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಇಲ್ಲಿ ಗರ್ಭಿಣಿ ಪತ್ನಿ ನೋವು, ಅಕ್ರಮ ಸಂಬಂಧದ ಹಿನ್ನೆಲೆ ಮುಂತಾದ ಸನ್ನಿವೇಶವನ್ನು ತೋರಿದಸಲಾಗಿದ್ದು, ಇದು ರೇಣುಕಾಸ್ವಾಮಿ ಕೇಸ್‌ ಎಂದು ಅನೇಕ ವೀಕ್ಷಕರು ಪ್ರೋಮೊ ಕೆಳಗೆ ಕಾಮೆಂಟ್‌ ಮಾಡಿದ್ದಾರೆ.

ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ಆಧಾರಿಸಿ ‘ಶಾಂತಂ ಪಾಪಂ’ ನಲ್ಲಿ ಸಿರೀಸ್‌ ರೀತಿ ಪ್ರಸಾರ ಮಾಡಲಾಗುತ್ತದೆ. ಸೋಮ – ಶುಕ್ರ ರಾತ್ರಿ 10:30ಕ್ಕೆ ಕಾರ್ಯಕ್ರಮ ಪ್ರಸಾರವಾಗುತ್ತದೆ.

 

ಟಾಪ್ ನ್ಯೂಸ್

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

4

ಇಬ್ಬರು ಪತ್ನಿಯರೊಂದಿಗೆ ಬಿಗ್‌ ಬಾಸ್‌ ಮನೆಗೆ ಬಂದ ಯೂಟ್ಯೂಬರ್:‌ ಯಾರು ಈ ಅರ್ಮಾನ್ ಮಲಿಕ್?

Bigg Boss OTT: ಓಟಿಟಿಯಲ್ಲಿ ಶುರುವಾಯಿತು ಮಿನಿ ಬಿಗ್‌ ಬಾಸ್; ಇಲ್ಲಿದೆ ಸ್ಪರ್ಧಿಗಳ ವಿವರ

Bigg Boss OTT: ಓಟಿಟಿಯಲ್ಲಿ ಶುರುವಾಯಿತು ಮಿನಿ ಬಿಗ್‌ ಬಾಸ್; ಇಲ್ಲಿದೆ ಸ್ಪರ್ಧಿಗಳ ವಿವರ

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

OTT release: ರಿಲೀಸ್‌ ಆದ 15 ದಿನಕ್ಕೆ ಓಟಿಟಿಗೆ ಬರಲಿದೆ ʼಗ್ಯಾಂಗ್ಸ್‌ ಆಫ್‌ ಗೋದಾವರಿʼ

OTT release: ರಿಲೀಸ್‌ ಆದ 15 ದಿನಕ್ಕೆ ಓಟಿಟಿಗೆ ಬರಲಿದೆ ʼಗ್ಯಾಂಗ್ಸ್‌ ಆಫ್‌ ಗೋದಾವರಿʼ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.