![1-vijayendra](https://www.udayavani.com/wp-content/uploads/2024/07/1-vijayendra-415x277.jpg)
Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ
Team Udayavani, Jun 29, 2024, 11:03 AM IST
![ವಿಜಯೇಂದ್ರ](https://www.udayavani.com/wp-content/uploads/2024/06/vijayendra-1-1-620x342.jpg)
ಶಿವಮೊಗ್ಗ: ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಸರ್ಕಾರಿ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿ ಗಳು ಸಹ ರಾಜೀನಾಮೆ ಕೊಡಬೇಕಾಗುತ್ತದೆ. ಸಿಎಂ ಅವರೇ ಹಣಕಾಸಿನ ಸಚಿವರಾಗಿದ್ದಾರೆ. ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇಂತಹ ದೊಡ್ಡ ಹಗರಣ ನಡೆದಿಲ್ಲ. ಲೋಕಸಭಾ ಚುನಾವಣೆ ನಡೆಯುವ ಸಂದರ್ಭದಲ್ಲಿ ಇಷ್ಟೊಂದು ದೊಡ್ಡ ಹಗರಣವಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ದುರುಪಯೋಗವಾಗಿದೆ. ಲೋಕಸಭೆ ಚುನಾವಣೆಗೆ ಈ ಹಣ ಉಪಯೋಗ ಆಗಿದೆ ಎನ್ನುವ ಚರ್ಚೆ ಮಾಡಿದ್ದಾರೆ ಎಂದರು.
ಸಿಎಂ ನಿವಾಸಕ್ಕೆ ಮುತ್ತಿಗೆ
ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡಿಕೊಂಡು ಬಂದಿದೆ. ಹೋರಾಟದ ಫಲ ನಾಗೇಂದ್ರ ರಾಜೀನಾಮೆ ಕೊಡಬೇಕಾಯಿತು. ಚಂದ್ರಶೇಖರ ಡೇತ್ ನೋಟ್ ನಲ್ಲಿ ಅನೇಕ ಅಂಶ ಉಲ್ಲೇಖ ಆಗಿದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ನಿನ್ನೆ ಸಹ ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಿದ್ದೇವೆ. ಜುಲೈ 3 ರಂದು ಮಂಗಳವಾರ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.
ಸತ್ಯನಾರಾಯಣ ಶರ್ಮ ಅವರಿಗೆ ಕೊಲೆ ಬೆದರಿಕೆ ಬರುತ್ತಿದೆ ಎಂದಿದ್ದಾರೆ. ಸಾವಿರಾರು ಅಕೌಂಟ್ ಓಪನ್ ಮಾಡಿ ಹಣ ವರ್ಗಾವಣೆ ಮಾಡಿದ್ದಾರೆ. ಘಟನೆ ನಡೆದು ಇಷ್ಟು ದಿನವಾದರೂ ಎಸ್ಐಟಿ ತನಿಖೆಗೆ ಇಲ್ಲಿಯವರೆಗೆ ನೀಡಿಲ್ಲ. ಸಿಎಂ ತಮ್ಮ ಬುಡಕ್ಕೆ ಬರುತ್ತದೆಂದು ಅವರ ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ಸಮ್ಮತಿಯಿಲ್ಲದೆ ಇಲ್ಲದೆ ಇಷ್ಟೊಂದು ದೊಡ್ಡ ಹಗರಣ ನಡೆದಿದೆಯಾ ಎಂದು ವಿಜಯೇಂದ್ರ ಪ್ರಶ್ನಿಸಿದರು.
ಲೋಕಸಭಾ ಸಭೆ ತನಕ ಒಗ್ಗಟಿನ ಪ್ರದರ್ಶನ ಮಾಡುತ್ತಿದ್ದರು. ಈಗ ಹಾದಿ- ಬೀದಿಯಲ್ಲಿ ಸಿಎಂ – ಡಿಸಿಎಂ ಬಗ್ಗೆ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಬದಲಾಗಬೇಕು ಎಂದು ಚರ್ಚೆಯಾಗುತ್ತಿದೆ. ರಾಜ್ಯದ ಜನರ ಪಾಲಿಗೆ ಸರ್ಕಾರ ಶಾಪವಾಗಿದೆ. ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ. ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
ಟಾಪ್ ನ್ಯೂಸ್
![1-vijayendra](https://www.udayavani.com/wp-content/uploads/2024/07/1-vijayendra-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.