![1-mofdd](https://www.udayavani.com/wp-content/uploads/2024/07/1-mofdd-415x270.jpg)
Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್
Team Udayavani, Jun 29, 2024, 11:41 AM IST
![ಸಂತೋಷ್ ಲಾಡ್](https://www.udayavani.com/wp-content/uploads/2024/06/santosh-lad-620x342.jpg)
ಹುಬ್ಬಳ್ಳಿ: ಶಿಗ್ಗಾವಿ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಪಕ್ಷಕ್ಕೆ ಬಿಟ್ಟ ವಿಚಾರ. ಈ ಕುರಿತು ಪಕ್ಷವೂ ಕೂಡ ಸಮೀಕ್ಷೆ ಮಾಡಲಿದೆ. ಯಾರು ಗೆಲ್ಲುವ ಅಭ್ಯರ್ಥಿ ಎಂದು ಗುರುತಿಸಿ ಟಿಕೆಟ್ ನೀಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಈ ಕುರಿತು ಸಭೆ ಕರೆದಿದ್ದರು. ಹೋಗಲಿಕ್ಕೆ ಆಗಿರಲಿಲ್ಲ. ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಅವರಲ್ಲಿ ಯಾರು ಗೆಲ್ಲುವ ಅಭ್ಯರ್ಥಿ ಎಂದು ಪರಿಗಣಿಸಿ ಪಕ್ಷ ನಿರ್ಧರಿಸಲಿದೆ. ಈ ಕುರಿತು ಇನ್ನೊಂದು ವಾರದಲ್ಲಿ ಸಮಿತಿ ಸಭೆಯಾಗಲಿದೆ. ಸಭೆಯಲ್ಲಿ ಚರ್ಚಿಸಿ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಸಿಎಂ ಬದಲಾವಣೆ ಕುರಿತು ಸ್ವಾಮೀಜಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಹುದ್ದೆ ಶಾಸಕರ ಅಭಿಪ್ರಾಯ ಪಡೆದು ಹಾಗೂ ಪಕ್ಷದ ಹೈಕಮಾಂಡ್ ನಿರ್ಧಾರದ ಮೇಲೆ ಆಯ್ಕೆಯಾಗುತ್ತಾರೆ. ಯಾಕೆ ಈ ರೀತಿ ಹೇಳಿದರು ಎಂದು ಸ್ವಾಮೀಜಿ ಅವರನ್ನು ಕೇಳಿದರೆ ಒಳಿತು ಎಂದರು.
ಬಿಜೆಪಿ ಅವರಿಗೆ ಮಾತನಾಡಲು ಯಾವುದೇ ವಿಚಾರಗಳಿಲ್ಲ. ವಿರೋಧ ಪಕ್ಷವಾಗಿ ಸಕರಾತ್ಮಕ ವಿರೋಧ ಹಾಗೂ ಟೀಕೆ ಮಾಡಬೇಕು. ಆದರೆ ಬೆಳಕಾದರೆ ಒಂದಲ್ಲಾ ಒಂದು ಪ್ರತಿಭಟನೆ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಆಗುತ್ತಿದೆ. ಇವರ ಅವಧಿಯಲ್ಲಿ ಬೆಲೆ ಏರಿಕೆ ಆಗಲಿಲ್ಲವೇ? ಕೇಂದ್ರದಲ್ಲಿ ಮ್ಯಾಜಿಕಲ್ ಮ್ಯಾನ್ ನರೇಂದ್ರ ಮೋದಿ ಬಂದ ನಂತರ ಸಾಲ ಎಷ್ಟಾಗಿದೆ ಎಂಬುವುದು ಇಡೀ ದೇಶಕ್ಕೆ ಗೊತ್ತಾಗಿದೆ. ಅಧಿಕಾರ ತಪ್ಪಿದ ಮೇಲೆ ಕೇವಲ ಮಾಧ್ಯಮಗಳ ಮುಂದೆ ಮಾತನಾಡುವುದೇ ಇವರ ಕೆಲಸವಾಗಿದೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
![1-mofdd](https://www.udayavani.com/wp-content/uploads/2024/07/1-mofdd-415x270.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
![1-mofdd](https://www.udayavani.com/wp-content/uploads/2024/07/1-mofdd-150x98.jpg)
Remote control ಎಂದು ಸೋನಿಯಾ ಟೀಕಿಸಿದ ಪ್ರಧಾನಿ: ವಿಪಕ್ಷಗಳಿಂದ ಸಭಾತ್ಯಾಗ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.