Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…


Team Udayavani, Jun 29, 2024, 12:35 PM IST

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

ಸೈಕಾಲಜಿ ಉಪನ್ಯಾಸಕರೊಬ್ಬರು “ಒತ್ತಡ ನಿವಾರಿಸುವುದು ಹೇಗೆ’ ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳುವ ಪ್ರಯತ್ನ ಮಾಡುತ್ತಿದ್ದರು. ಕೈಯಲ್ಲಿ ಹಿಡಿದಿದ್ದ ಗಾಜಿನ ಲೋಟದಲ್ಲಿ ಇರುವ ನೀರನ್ನು ತೋರಿಸುತ್ತಾ ಅವರು ಮಾತನಾಡಲು ಪ್ರಾರಂಭಿಸಿದಾಗ ಎಲ್ಲರೂ, “ಓ ಇವರು ಮತ್ತದೇ ಪ್ರಶ್ನೆ, ಈ ಲೋಟ ಅರ್ಧ ತುಂಬಿದೆಯೋ ಅರ್ಧ ಖಾಲಿಯೋ?’ ಎಂದು ಕೇಳುತ್ತಾರೆಂದು ನಿರೀಕ್ಷಿಸಲಾರಂಭಿಸಿದರು. ಆದರೆ ಉಪನ್ಯಾಸಕರು ಕೇಳಿದ ಪ್ರಶ್ನೆ ಬೇರೆಯೇ ಆಗಿತ್ತು. ‘ಈ ಲೋಟ ಎಷ್ಟು ಭಾರವಿದೆ ಹೇಳಬಲ್ಲಿರಾ’? ವಿದ್ಯಾರ್ಥಿಗಳೆಲ್ಲ ಉತ್ತರವನ್ನು ಕೂಗಿ ಹೇಳಲು ಪ್ರಾರಂಭಿಸಿದರು. 100 ಮಿ.ಲೀ., 200 ಮಿ.ಲೀ. ಹೀಗೆ ಸಾಗಿತ್ತು ಉತ್ತರಗಳ ಸಂಖ್ಯೆ.

ಒಂದೆರಡು ನಿಮಿಷ ಮೌನದ ಅನಂತರ, ‘ನನ್ನ – ಪ್ರಕಾರ ನೀರಿನ ಲೋಟದ ಭಾರ ಈಗ ಅಷ್ಟು ದೊಡ್ಡ ವಿಷಯವಲ್ಲ, ಈ ಲೋಟವನ್ನು ನಾನೆಷ್ಟು ಹೊತ್ತು ಹಿಡಿದಿರುತ್ತೇನೆ ಎನ್ನುವುದರ ಮೇಲೆ ಭಾರ ನಿರ್ಧರಿತವಾಗುತ್ತದೆ. ನಾನು ಇದನ್ನು ಒಂದೆರಡು ನಿಮಿಷ ಹಿಡಿದರೆ ಇದು ಹಗುರವಾದ ಲೋಟವೇ ಸರಿ. ನಾನು ಈ ನೀರಿನ ಲೋಟವನ್ನು 1 ಗಂಟೆ ಹಿಡಿಯಬೇಕೆಂದರೆ ನನ್ನ ಕೈ ನೋಯಲು ಆರಂಭಿಸುತ್ತದೆ. ಇದೇ ಲೋಟವನ್ನು ಒಂದಿಡೀ ದಿನ ಹೀಗೆ ಹಿಡಿದಿರಬೇಕು ಎಂದಾದರೆ ಕೈಗೆ ಜೋಮು ಹಿಡಿದು, ನೋವಿನಿಂದ ಕೊನೆಗೆ ಈ ಲೋಟವನ್ನು ಹಿಡಿಯಲಾಗದೆ ಕೆಳಗೆ ಬಿಟ್ಟು ಬಿಡಬಹುದೇನೋ. ಪ್ರತೀಬಾರಿಯೂ ಲೋಟದ ಭಾರವೇನೂ ಬದಲಾಗುವುದಿಲ್ಲ. ಆದರೆ ಅದನ್ನು ಹೆಚ್ಚು ಹೊತ್ತು ಹಿಡಿದಷ್ಟೂ ಅದು ಹೆಚ್ಚು ಭಾರವಾಗುತ್ತಾ ಹೋಗುತ್ತದೆ’ ಎಂದರು.

ವಿದ್ಯಾರ್ಥಿಗಳೆಲ್ಲಾ ಹೌದು ಎನ್ನುತ್ತಾ ತಲೆಯಾಡಿಸಲು ಆರಂಭಿಸಿದಾಗ, ‘ನಮ್ಮ ಒತ್ತಡಗಳು, ಯೋಚನೆಗಳು ಕೂಡ ಒಂದು ಲೋಟ ನೀರಿನಂತೆ. ಅವುಗಳ ಬಗ್ಗೆ ಕೆಲಹೊತ್ತು ಮಾತ್ರ ಯೋಚಿಸಿದಾಗ ಏನೂ ಆಗುವುದಿಲ್ಲ. ಹೆಚ್ಚು ಹೊತ್ತು ಯೋಚಿಸಿದರೆ ನೋವು ಪ್ರಾರಂಭವಾಗುತ್ತದೆ. ದಿನವೆಲ್ಲ ಒತ್ತಡದಲ್ಲಿದ್ದರೆ ನಮ್ಮ ಮೆದುಳು ಕೂಡ ಅತಿಯಾದ ನೋವಿನಿಂದ, ಒದ್ದಾಡುತ್ತಾ ಕೊನೆಗೆ ಅದರ ಮೇಲೂ ಗಮನವೇ ಇಲ್ಲದಂತಾಗುತ್ತದೆ. ಅವತ್ತು ಬಂದ ನಮ್ಮ ಮನಸ್ಸಿನಿಂದ ದೂರ ಮಾಡುವವರೆಗೂ ನಾವು ಮತ್ತೇನನ್ನೂ ಮಾಡಲಾಗುವುದಿಲ್ಲ’ ಎಂದು ಉಪನ್ಯಾಸಕರು ತಿಳಿಸಿದರು.

ಈ ಸಂಗತಿ ಚಿಕ್ಕದಾದರೂ ಅದು ನೀಡುವ ಸಂದೇಶ ಎಷ್ಟು ದೊಡ್ಡದಲ್ಲವೇ? ನಮ್ಮ ದೈನಂದಿನ ಜೀವನದಲ್ಲಿ ಅನೇಕ ರೀತಿಯ ಒತ್ತಡ, ಖಿನ್ನತೆ, ಯೋಚನೆಗಳು ನಮ್ಮನ್ನು ಕಾಡುತ್ತವೆ. ಅವುಗಳನ್ನು ನಾವು ಎಷ್ಟು ಹಚ್ಚಿಕೊಳ್ಳುತ್ತೇವೋ ಅಷ್ಟೇ ಅವುಗಳು ನಮ್ಮನ್ನು ಆವರಿಸಿಕೊಳ್ಳುತ್ತಾ ಹೋಗುತ್ತವೆ. ಅದೆಂಥ ಒತ್ತಡವೇ ಇರಲಿ, ಅದನ್ನು ಪಕ್ಕಕ್ಕಿಟ್ಟು ಆ ದಿನದ ಮಟ್ಟಿಗೆ ಏನು ಆಗಬೇಕು, ಅದರ ಕಡೆಗೆ ನಮ್ಮ ಗಮನವನ್ನು ಹರಿಸಿದಾಗ, ಆ ಒತ್ತಡಕ್ಕೂ ಕೂಡ ವಿರಾಮ ಸಿಕ್ಕಂತಾಗಿ ಮನಸ್ಸಿಗೆ ಒಂದಿಷ್ಟು ಉಸಿರಾಡಲು ಅವಕಾಶವಾಗುತ್ತದೆ. ಹಗುರಾದ ಮನಸ್ಸಿನಿಂದ ಯೋಚಿಸಿದಾಗ ಮಾತ್ರ ನಮಗೆ ಏನಾದರೂ ಪರಿಹಾರ ಸಿಗಲು ಸಾಧ್ಯ. ಆದ್ದರಿಂದಲೇ ಜೀವನದಲ್ಲಿ ಆದಷ್ಟು ಸಮಾಧಾನದಿಂದಿರಿ. ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ. ಅದನ್ನು ಅತಿಯಾಗಿ ಯೋಚಿಸುವುದರಿಂದ ಯಾವ ಒಳಿತೂ ಆಗುವುದಿಲ್ಲ, ಆರೋಗ್ಯವೂ ಹಾಳು. ಅದೇನೇ ಆಗಲಿ ಒತ್ತಡಗಳು ಜೀವನದಲ್ಲಿ ಇದ್ದೇ ಇರುತ್ತವೆ. ಆದರೆ ಅವುಗಳನ್ನು ಅದೆಷ್ಟು ಹಚ್ಚಿಕೊಳ್ಳಬೇಕು, ಎಷ್ಟು ಮರೆತು ಮುನ್ನಡೆಯಬೇಕು ಎಂಬ ನಿರ್ಧಾರ ಮಾಡುವ ಜಾಣೆ ನಮ್ಮಲ್ಲಿರಬೇಕು.

ಟಾಪ್ ನ್ಯೂಸ್

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.