![koo](https://www.udayavani.com/wp-content/uploads/2024/07/koo-1-415x234.jpg)
Bengaluru: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್ಐಗೆ 2 ರೂ. ಲಕ್ಷ ದಂಡ
Team Udayavani, Jun 29, 2024, 11:56 AM IST
![Bengaluru: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್ಐಗೆ 2 ರೂ. ಲಕ್ಷ ದಂಡ](https://www.udayavani.com/wp-content/uploads/2024/06/5-17-620x372.jpg)
ಬೆಂಗಳೂರು: ಆರೋಪಿತನಲ್ಲದ ವ್ಯಕ್ತಿ ಮೇಲೆ ತಮ್ಮ ಕೆಳ ಹಂತದ ಸಿಬ್ಬಂದಿ ಜತೆ ಸೇರಿ ಹಲ್ಲೆ ನಡೆಸಿದ ಪಿಎಸ್ಐ ವಿರುದ್ಧ ತನಿಖೆ ಪೂರ್ಣಗೊಳಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ, ಸಂತ್ರಸ್ತನಿಗೆ ಒಂದು ತಿಂಗಳ ಒಳಗಾಗಿ ಪರಿಹಾರವಾಗಿ 2 ಲಕ್ಷ ರೂ. ನೀಡಬೇಕು ಎಂದು ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಗೆ ಶಿಫಾರಸು ಮಾಡಿದೆ.
ಕೆ.ಟಿ.ಸತೀಶ್ ಆರೋಪಿತ ಪಿಎಸ್ಐ. ಜೋಲಿ ಮೊಹಲ್ಲಾ ನಿವಾಸಿ ಸುನೀಲ್ ಕುಮಾರ್ ಎಂಬುವರ ಕಚೇರಿಗೆ ನುಗ್ಗಿ ಪಾರ್ಸೆಲ್ ಸರ್ವೀಸ್ ಬಗ್ಗೆ ವಿಚಾರಣೆ ನಡೆಸಿ ಆತನ ಮೇಲೆ ತಮ್ಮ ಸಿಬ್ಬಂದಿ ಜತೆ ಸೇರಿ ಹಲ್ಲೆ ನಡೆಸಿದ್ದರು. ಬಳಿಕ ಈತ ತಮಗೆ ಬೇಕಾಗಿರುವ ವ್ಯಕ್ತಿ ಅಲ್ಲ ಎಂದು ತಿಳಿದು, ಆತನನ್ನು ಕಳುಹಿಸಿದ್ದರು. ಈ ಸಂಬಂಧ ಸುನೀಲ್ ಕುಮಾರ್, ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.
ಈ ಸಂಬಂಧ ಸುಮಾರು ಎರಡೂವರೆ ವರ್ಷಗಳ ಕಾಲ ಸುದೀರ್ಘ ತನಿಖೆ ನಡೆಸಿದ ರಾಜ್ಯ ಮಾನವ ಹಕ್ಕುಗಳ ಆಯೋಗ, ಇದೀಗ ಪಿಎಸ್ಐ ಅಧಿಕಾರ ದುರ್ಬಳಕೆ ಹಾಗೂ ಅಮಾಯಕ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವುದು ಸಾಬೀತಾಗಿದೆ ಎಂದು ವರದಿಯಲ್ಲಿ ಉಲ್ಲೇಖೀಸಿದೆ.
ಜತೆಗೆ ಪಿಎಸ್ಐ ವಿರುದ್ಧ ಇಲಾಖಾ ತನಿಖೆ ನಡೆಸಿ, ಬಳಿಕ ಪರಿಹಾರ ರೂಪದಲ್ಲಿ ನೀಡುವ 2 ಲಕ್ಷ ರೂ. ಪಿಎಸ್ಐ ವೇತನದಿಂದ ವಸೂಲಿ ಮಾಡ ಬೇ ಕೆಂದು ಶಿಫಾರಸು ಪತ್ರದಲ್ಲಿ ತಿಳಿಸಿದೆ. ಜತೆಗೆ ಇಲಾಖೆ ವಿಚಾರಣೆ ನಡೆಸಿದ ಬಳಿಕ ಅನುಪಾಲನಾ ವರದಿ ಯನ್ನು ಒಂದು ತಿಂಗಳೊಳಗೆ ಸಲ್ಲಿಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆಯೋಗವು ನಿರ್ದೇಶಿಸಿದೆ.
ಏನಿದು ಘಟನೆ?: 2021ರಲ್ಲಿ ಬಸವೇಶ್ವರನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ಐ ಕೆ.ಟಿ. ಸತೀಶ್ ಮತ್ತು ತಂಡ ಪ್ರಕರಣವೊಂದರಲ್ಲಿ ಸುನೀಲ್ ಎಂಬಾತನಿಗಾಗಿ ಶೋಧ ನಡೆಸುತ್ತಿತ್ತು. ಈ ವೇಳೆ ಜೋಲಿ ಮೊಹಲ್ಲಾ ನಿವಾಸಿಯಾಗಿರುವ ಸುನೀಲ್ ಕುಮಾರ್ ಅವರನ್ನೇ ತಾನು ಹುಡುಕುತ್ತಿರುವ ವ್ಯಕ್ತಿ ಎಂದು ತಪ್ಪಾಗಿ ಭಾವಿಸಿದ್ದ ಪಿಎಸ್ಐ, ಆತ ಕೆಲಸ ಮಾಡುತ್ತಿದ್ದ ಪಾರ್ಸೆಲ್ ಕಚೇರಿಗೆ ಇಬ್ಬರು ಕಾನ್ ಸ್ಟೇಬಲ್ರೊಂದಿಗೆ ಹೋಗಿ ಆತನನ್ನು ಠಾಣೆಗೆ ಕರೆದೊಯ್ದು ಹÇÉೆ ನಡೆಸಿ ಗಾಯಗೊಳಿಸಿದ್ದರು. ಬಳಿಕ ತಾನು ಶೋಧಿಸುತ್ತಿರುವ ವ್ಯಕ್ತಿ ಈತನಲ್ಲ ಎಂಬುದು ಗೊತ್ತಾಗಿ, ವಾಪಸ್ ಕಳುಹಿಸಿದ್ದರು.
ಟಾಪ್ ನ್ಯೂಸ್
![koo](https://www.udayavani.com/wp-content/uploads/2024/07/koo-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು](https://www.udayavani.com/wp-content/uploads/2024/07/6-2-150x90.jpg)
Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು
![Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ](https://www.udayavani.com/wp-content/uploads/2024/07/5-2-150x90.jpg)
Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
![Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ](https://www.udayavani.com/wp-content/uploads/2024/07/4-2-150x90.jpg)
Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ
![3](https://www.udayavani.com/wp-content/uploads/2024/07/3-3-150x90.jpg)
Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್
![ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು](https://www.udayavani.com/wp-content/uploads/2024/07/2-2-150x90.jpg)
ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು
MUST WATCH
ಹೊಸ ಸೇರ್ಪಡೆ
![koo](https://www.udayavani.com/wp-content/uploads/2024/07/koo-1-150x84.jpg)
Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.