Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!


Team Udayavani, Jun 29, 2024, 12:10 PM IST

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

ಬೆಂಗಳೂರು: ಅಧಿಕ ಬಡ್ಡಿಗೆ ಬೇಸತ್ತ ಸಿನಿಮಾ ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಅವರು ಸಹಕಾರ ಸಂಘಗಳ ಉಪನಿಬಂಧಕರಿಗೆ ನೀಡಿದ್ದ ದೂರು ಆಧರಿಸಿ ಸಿಸಿಬಿ ಪೊಲೀಸರು ನಾಲ್ವರು ಆರೋ ಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಲ್ಲಿಕಾರ್ಜುನಯ್ಯ ಮೊದಲು ಸಹಕಾರ ಸಂಘಗಳ ಉಪ ನಿಬಂಧಕ ಕಿಶೋರ್‌ ಕುಮಾರ್‌ ಅವರಿಗೆ ದೂರು ನೀಡಿದ್ದರು. ಅದನ್ನು ಅವರು ಪೊಲೀಸರಿಗೆ ವರ್ಗಾಯಿಸಿ ದ್ದರು. ಆ ದೂರು ಆಧರಿಸಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಲಹಂಕ ನಿವಾಸಿ ಡಿ.ಬಿ.ಆದರ್ಶ, ಸಿ.ಹರ್ಷ, ಶಿವು, ಡಿ.ಬಿ.ಹರ್ಷ ವಿರುದ್ಧ ಕರ್ನಾಟಕ ಲೇವಾ ದೇವಿದಾರರ ಕಾಯ್ದೆ ಮತ್ತು ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯ್ದೆಯಡಿ ಎಫ್ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ದೂರಿನಲ್ಲಿ ಏನಿದೆ?: ನಿರ್ಮಾಪಕ ಪುಷ್ಕರ್‌ ನೀಡಿದ ದೂರಿನಲ್ಲಿ ನಾನು ಬಸವೇಶ್ವರನಗರದಲ್ಲಿ ಪುಷ್ಕರ್‌ ಫಿಲಂ ಸಂಸ್ಥೆ ಹೊಂದಿದ್ದು, ಗೋಧಿಬಣ್ಣ ಸಾಧಾರಣ ಮೈಕಟ್ಟು, ಕಿರಿಕ್‌ ಪಾರ್ಟಿ, ಅವನೇಶ್ರೀಮನ್‌ ನಾರಾಯಣ ಸೇರಿ 12 ಸಿನಿಮಾಗಳನ್ನು ನಿರ್ಮಿಸಿದ್ದೇನೆ. ಅವನೇ ಶ್ರೀಮನ್‌ ನಾರಾಯಣ, ಅವತಾರ ಪುರುಷ-1, ಅವತಾರ ಪುರುಷ-2 ಸಿನಿಮಾಗಳು ಹಾಗೂ ಕೋವಿಡ್‌ನಿಂದ ಸಾಕಷ್ಟು ಹಣ ಕಳೆದುಕೊಂಡು ಆರ್ಥಿಕ ನಷ್ಟ ಹೊಂದಿದ್ದೆ. ಹೀಗಾಗಿ 2019ರಲ್ಲಿ ನನ್ನ ಸಂಬಂಧಿ ಡಿ.ಬಿ.ಆದರ್ಶ ಬಳಿ ಸಾಲಕ್ಕೆ ಹಣ ಕೇಳಿದೆ. ಅದಕ್ಕೆ ಆತನಿಂದ ತಿಂಗಳಿಗೆ ಶೇ.5ರ ಬಡ್ಡಿಯಂತೆ 2019ರಿಂದ 2023ರ ವರೆಗೆ ಹಂತ ಹಂತವಾಗಿ 5 ಕೋಟಿ ರೂ. ಸಾಲ ಪಡೆದಿದ್ದೆ. ಈ ಸಾಲಕ್ಕೆ ಭದ್ರತೆಯಾಗಿ 10 ಖಾಲಿ ಚೆಕ್‌ಗಳನ್ನು ನೀಡಿದ್ದೆ ಎಂದು ಪುಷ್ಕರ್‌ ದೂರಿನಲ್ಲಿ ಉಲ್ಲೇಖೀಸಿದ್ದರು.

ಅಸಲು-ಬಡ್ಡಿ ಸೇರಿ 11.5 ಕೋಟಿ ಕೊಟ್ಟಿದ್ದೇನೆ: ಆದರ್ಶ್‌ನಿಂದ ಪಡೆದಿದ್ದ 5 ಕೋಟಿ ರೂ. ಸಾಲಕ್ಕೆ ಪ್ರತಿ ತಿಂಗಳು ಬಡ್ಡಿ ಪಾವತಿಸಿದ್ದೇನೆ. ಬಳಿಕ ಅದರ್ಶ್‌ ಹಾಗೂ ಆತ ಹೇಳಿದ ಇತರೆ ವ್ಯಕ್ತಿಗಳಿಗೆ ವಿವಿಧ ಹಂತಗಳಲ್ಲಿ ಅಸಲು ಮತ್ತು ಬಡ್ಡಿ ರೂಪದಲ್ಲಿ ಒಟ್ಟು 11.50 ಕೋಟಿ ರೂ. ನೀಡಿದ್ದೇನೆ. ಆದರೂ ಆದರ್ಶ್‌ ಹಾಗೂ ಇತರರು, ನೀನು ನೀಡಿರುವ ಹಣ ಬಡ್ಡಿ ಮತ್ತು ಚಕ್ರ ಬಡ್ಡಿಗೆ ಸರಿಯಾಗಿದೆ. ಹೀಗಾಗಿ ಇನ್ನೂ ನೀನು ನಮಗೆ 13 ಕೋಟಿ ರೂ. ಹಣ ನೀಡಬೇಕು ಎಂದು ಬೇಡಿಕೆ ಇರಿಸಿದ್ದಾರೆ. ಅಲ್ಲದೆ, ಆದರ್ಶ್‌, ಹರ್ಷ ಹಾಗೂ ಸಚಹರರು ನನ್ನ ಮನೆ ಮತ್ತು ಕಚೇರಿಗೆ ಹುಡುಗರನ್ನು ಕಳುಹಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.

ಜತೆಗೆ ಆದರ್ಶ್‌ ಮತ್ತು ಹರ್ಷ ಲೇವಾದೇವಿ ವ್ಯವಹಾರ ಮಾಡಲು ಸಹಕಾರ ಇಲಾಖೆಯಿಂದ ಯಾವುದೇ ಪರವಾನಗಿ ಪಡೆದುಕೊಂಡಿಲ್ಲ. ಆದರೂ ಸಾರ್ವಜನಿಕರಿಂದ ಭದ್ರತೆಗೆ ಖಾಲಿ ಚೆಕ್‌ಗಳು, ಆಸ್ತಿ ಪತ್ರಗಳನ್ನು ಪಡೆದು ಸಾಲ ನೀಡುತ್ತಿದ್ದಾರೆ. ಮಾಸಿಕ ಶೇ.5ರಿಂದ ಶೇ.15ರಷ್ಟು ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಬಡ್ಡಿ ಹಣ ನೀಡಿದ ಸಾಲಗಾರರ ಮನೆ ಬಳಿ ಹುಡುಗರನ್ನು ಕಳುಹಿಸಿ ಹೆದರಿಸುವುದು, ನಿಂದಿಸುವುದು ಹಾಗೂ ಪ್ರಾಣ ಬೆದರಿಕೆ ಹಾಕಿಸುತ್ತಾರೆ. ನಾನು ಬಡ್ಡಿ ಸಮೇತ ಅಸಲು ತೀರಿಸಿದ್ದರೂ ಅಧಿಕ ಬಡ್ಡಿಗೆ ಬೇಡಿಕೆ ಇರಿಸಿ, ಕೊಲೆ ಬೆದರಿಕೆ ಹಾಕಿರುವ ಆದರ್ಶ ಹಾಗೂ ಆತನ ಸಹಚರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ಮಾಪಕ ದೂರಿನಲ್ಲಿ ಕೋರಿದ್ದರು.

ಅದನ್ನು ಸಹಕಾರ ಸಂಘಗಳ ನಿಬಂಧಕ ಕಿಶೋರ್‌ ಕುಮಾರ್‌ ಸಿಸಿಬಿಗೆ ದೂರು ನೀಡಿದ್ದಾರೆ. ಈ ಸಂಬಂಧ ನಾಲ್ವರ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.