Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ


Team Udayavani, Jun 29, 2024, 1:20 PM IST

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

ದೋಹಾ:ಕತಾರ್‌ನಲ್ಲಿರುವ ಏಷ್ಯನ್‌ ಕ್ರಿಕೆಟ್‌ ಆಟದ ಮೈದಾನದಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ 10ನೇ ಆವೃತ್ತಿಯನ್ನು ಕತಾರ್‌ನ ಭಾರತೀಯ ರಾಜದೂತಾವಾಸದ ನೇತೃತ್ವದಲ್ಲಿ ಭಾರತೀಯ ಕ್ರೀಡಾ ಕೇಂದ್ರದ ಸಹಯೋಗದೊಂದಿಗೆ ನಡೆಸಲಾಯಿತು.

ಕತಾರ್‌ನ ಭಾರತೀಯ ಸಮುದಾಯಗಳು, ಭಾರತೀಯ ಸಾಂಸ್ಕೃತಿಕ ಕೇಂದ್ರ ಐಸಿಸಿ ಭಾರತೀಯ ಸಮುದಾಯ ಹಿತೈಷಿ ವೇದಿಕೆ ಐಸಿಬಿಎಫ್‌ ಹಾಗೂ ಭಾರತೀಯ ವ್ಯಾಪಾರಿಗಳ ಹಾಗೂ ವೃತ್ತಿಪರ ಸಮಿತಿಗಳ ಐಬಿಪಿಸಿ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಚಿತ್ರ ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಭಾರತೀಯ ರಾಯಭಾರಿಗಳಾದ ವಿಫುಲ್‌ ಅವರು ಮಾತನಾಡಿ, ಸ್ವಯಂ ಹಾಗೂ ಸಮಾಜಕ್ಕೆ ಯೋಗ ಎಂಬುದರ ಬಗ್ಗೆ ಒತ್ತು ನೀಡಿ ಮಾನವನ ಸಂಪೂರ್ಣ ಪ್ರಗತಿಗೆ ಭಾರತದ ಪುರಾತನ ಸಾಂಪ್ರದಾಯದ ಯೋಗವು ಮಹತ್ತರ ಕೊಡುಗೆ ನೀಡುತ್ತದೆ. ನಿರಂತರವಾಗಿ ಯೋಗಾಭ್ಯಾಸ ಹಾಗೂ ಧ್ಯಾನ ಪ್ರಾಣಾಯಾಮಗಳನ್ನು ಮಾಡುವುದರ ಮೂಲಕ ಮನುಷ್ಯನ ಮನಸ್ಸು ಹಾಗೂ ಶರೀರಕ್ಕೆ ಸಕಾರಾತ್ಮಕ ಪರಿವರ್ತನೆ ಆಗುತ್ತದೆ ಹಾಗೂ ಪ್ರಕೃತಿಯ ಸಮೀಪ ಕರೆದುಕೊಂಡು ಹೋಗುವುದಲ್ಲದೇ ಸಮಾಜದಲ್ಲಿ ಸೌಹಾರ್ದತೆಯನ್ನು ಪಸರಿಸುವಲ್ಲಿ ಕಾರಣವಾಗುತ್ತದೆ ಎಂದು ಹೇಳಿದರು.

ಯೋಗಾಭ್ಯಾಸ ಕಾರ್ಯಕ್ರಮದ ಮುಖ್ಯ ಅಂಶವೆಂದರೆ ಆಗಮಿಸಿದ್ದ 2,000ಕ್ಕೂ ಹೆಚ್ಚು ಯೋಗ ಪಟುಗಳು ಹಾಗೂ ಆಸಕ್ತರು, ಇವರಲ್ಲಿ ಮಕ್ಕಳು, ಯುವಜನರು ಹಾಗೂ ಮಹಿಳೆಯರು ಸೇರಿ ಸಮಾಜದ ವಿವಿಧ ಭಾಗದ ಜನರು ಇದ್ದರು. ಆಗಮಿಸಿದ್ದ ಎಲ್ಲರೂ ಒಂದೇ ಮೂಲ ಮಾರ್ಗದರ್ಶನದ ಆಧಾರದ ಮೇಲೆ ಯೋಗಾಭ್ಯಾಸವನ್ನು ಮಾಡಿದ್ದು ವಿಶೇಷ. ಹಿರಿಯರು ಹಾಗೂ ಕಿರಿಯರು ಸೇರಿ ಉತ್ಸಾಹ ಹಾಗೂ ಉಲ್ಲಾಸದಿಂದ ಯೋಗಾಭ್ಯಾಸವನ್ನು ಮಾಡಿದರು. ಕಾರ್ಯಕ್ರಮಕ್ಕೆ ಕಾರಣಿಕರ್ತರಾದ ಭಾರತೀಯ ಕ್ರೀಡಾ ಕೇಂದ್ರ, ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಹಿತೈಷಿ ವೇದಿಕೆ ಮತ್ತು ಭಾರತೀಯ ವ್ಯಾಪಾರ ಹಾಗೂ ವೃತ್ತಿಪರ ಸಮಿತಿಯ ಅಧ್ಯಕ್ಷರುಗಳನ್ನು ಸಮ್ಮಾನಿಸಿ ಕಾರ್ಯಕ್ರಮವನ್ನು ಪೂರ್ಣಗೊಳಿಸಲಾಯಿತು.

ಯೋಗಾಭ್ಯಾಸದ ಮಹತ್ತರ ಕಾರ್ಯಕ್ರಮದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 20 ಗುಂಪುಗಳನ್ನಾಗಿ ವಿಂಗಡಿಸಿ ಕಾರ್ಯಕರ್ತರನ್ನು ಒಳಗೊಂಡು ಆಗಮಿಸಿದ್ದ 2,000ಕ್ಕೂ ಹೆಚ್ಚು ಜನರಿಗೆ ಯೋಗಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಥಳದಲ್ಲಿ ಕೇಳಲಾಯಿತು ಹಾಗೂ ಕಿರು ಉಡುಗೊರೆಗಳನ್ನು ವಿತರಿಸಲಾಯಿತು. ಬೈಂದೂರು ಮೂಲದ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಟಾಗಿಲು, ಹಾಗೂ ಸಾವಿರಾರು ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.