Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

ಏನೇನು ಮಾಡಿದರೂ ಅದೊಂದು ಮಾತ್ರ ಅವನ ಬಳಿ ಬರುತ್ತಲೇ ಇರಲಿಲ್ಲ

Team Udayavani, Jun 29, 2024, 2:20 PM IST

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

ಬುದ್ಧ ಮತ್ತು ಕಿಸಾಗೌತಮಿಯ ಕಥೆಯನ್ನು ನೀವು ಕೇಳಿರಬಹುದು, ಓದಿರಬಹುದು. ಪರಿಪೂರ್ಣ ಸುಖ, ಸಂತೋಷ ಎಂಬುದು ಯಾರಿಗೂ ಇಲ್ಲ ಎಂಬುದು ಅದು ತಿಳಿಸಿಕೊಡುವ ಸತ್ಯ. ನಾವು ಮರ್ತ್ಯರು. ಅಂದರೆ ಮರಣವನ್ನು ನಮ್ಮ ಬೆನ್ನಲ್ಲೇ ಕಟ್ಟಿಕೊಂಡವರು. ಸಾವು ಮತ್ತು ಬದುಕು ಒಂದೇ ನಾಣ್ಯದ ಎರಡು ಮುಖಗಳು ಕೂಡ ಅಲ್ಲ; ಒಂದರ ಬದಿಯಲ್ಲಿ ಇನ್ನೊಂದು. ಸುಖ-ದುಃಖ, ಸಂತೋಷ ಮತ್ತು ಬೇಸರ ಕೂಡ ಹೀಗೆಯೇ. ಒಂದರ ಪಕ್ಕದಲ್ಲಿ ಇನ್ನೊಂದು ಇರುತ್ತವೆ. ಯಾವುದಕ್ಕೂ ಬಗ್ಗಬಾರದು, ಬೆದರಬಾರದು. ಜೀವನ ಮುಂದುವರಿಯ ಬೇಕು, ಮುಂದುವರಿಯುತ್ತದೆ ಅಷ್ಟೇ.

ಇದು ಆಫ್ರಿಕ ದೇಶದ ಒಂದು ಕಥೆ. ಸಾವಿರಾರು ವರ್ಷಗಳ ಹಿಂದೆ ಉತ್ತರ ಆಫ್ರಿಕದ ಒಂದು ಊರಿನಲ್ಲಿ ಶ್ರೀಮಂತನೊಬ್ಬ ಇದ್ದನಂತೆ. ಹಲವು ಹೆಂಡತಿಯರು, ಮಕ್ಕಳು, ಮರಿಗಳಿಂದ ತುಂಬಿದ ದೊಡ್ಡ ಸಂಸಾರ, ಭಾರೀ ದೊಡ್ಡದಾದ ಮನೆ, ಬೇಕಾದಷ್ಟು ಆಳುಕಾಳುಗಳು ಎಲ್ಲವೂ ಇದ್ದ ಸಿರಿವಂತ ಅವನು. ಇಷ್ಟೆಲ್ಲ ಇದ್ದರೂ ಸಂತೋಷ ಎಂಬುದು ಅವನ ಹತ್ತಿರ ಸುಳಿಯುತ್ತಿರಲಿಲ್ಲ. ಯಾವಾಗ ನೋಡಿದರೂ ಉಗ್ರ ಮುಖ, ಕೆಂಪು ಸಿಡಿಯುವ ಕಣ್ಣುಗಳು, ಸದಾ ಸಿಡುಕು. ನಿಜಕ್ಕಾದರೆ ಅವನು ಸುಖ-ಸಂತೋಷಗಳಿಂದ ಇರಬೇಕಿತ್ತು. ಆದರೆ ಹಾಗಿರಲಿಲ್ಲ.

ತನ್ನ ಈ ಪರಿಸ್ಥಿತಿಯ ಬಗ್ಗೆ ಸ್ವತಃ ಶ್ರೀಮಂತನಿಗೂ ಅರಿವಿತ್ತು. ಖುಷಿಯಾಗಿರಬೇಕು ಎಂದು ಹಂಬಲಿಸುತ್ತಿದ್ದ. ಆದರೆ ಅದಾಗುತ್ತಲೇ ಇರಲಿಲ್ಲ. ಏನೇನು ಮಾಡಿದರೂ ಅದೊಂದು ಮಾತ್ರ ಅವನ ಬಳಿ ಬರುತ್ತಲೇ ಇರಲಿಲ್ಲ. ಒಂದು ಬಾರಿ ಆತ ತನಗೆ ಆಪ್ತರಾದ ಕೆಲವು ಸೇವಕರನ್ನು ಕರೆದು ಖುಷಿ ಕೊಡಬಲ್ಲ ಕೆಲವು ವಿಧಾನಗಳ ಸಲಹೆ ಕೇಳಿದ. ಅದಕ್ಕೆ ಒಬ್ಬ, “ಒಡೆಯಾ, ಆಕಾಶವನ್ನು ನೋಡಿ. ಅಲ್ಲಿರುವ ಸೂರ್ಯ, ಚಂದ್ರ, ನಕ್ಷತ್ರಗಳನ್ನು ವೀಕ್ಷಿಸಿ. ಇದರಿಂದ ನಿಮಗೆ ಖುಷಿಯಾಗಬಹುದು’ ಎಂದ.

ಶ್ರೀಮಂತನಿಗೆ ಸಂತೋಷವಾಗುವ ಬದಲು ಸಿಟ್ಟು ಬಂತು. “ಆಗಸ ನೋಡಿದರೆ ಸಂತೋಷವಾಗುವುದು ಹೇಗೆ? ಅಲ್ಲಿರುವ ನಕ್ಷತ್ರಗಳು ಕೈಗೆಟಕುವುದಿಲ್ಲವಲ್ಲ ಎಂದು ದುಃಖವಾಗುತ್ತದೆ’ ಎಂದನಾತ. ಇನ್ನೊಬ್ಬ ಸೇವಕ, “ಸಂಗೀತ ಕೇಳಿದರೆ ಹೇಗೆ?’ ಎಂದ. ಈಗ ಶ್ರೀಮಂತನಿಗೆ ಸಿಟ್ಟೇ ಬಂತು. “ಇಡೀ ದಿನ ಸಂಗೀತ ಕೇಳುತ್ತ ಇರುವುದಕ್ಕಾಗುತ್ತದೆಯೇ’ ಎಂದು ಗರ್ಜಿಸಿದ. ಸೇವಕರೆಲ್ಲರೂ ಬಾಯಿ ಮುಚ್ಚಿಕೊಂಡು ಹೊರಟು ಹೋದರು. ಸ್ವಲ್ಪ ಹೊತ್ತು ಕಳೆದ ಮೇಲೆ ಇನ್ನೊಬ್ಬ ಸೇವಕ ಮೆಲ್ಲನೆ ಸಿರಿವಂತನ ಬಳಿಗೆ ಬಂದು, “ಒಡೆಯಾ, ಒಂದು ಉಪಾಯವಿದೆ.

ಈ ಪ್ರಾಂತದಲ್ಲಿ ಅತ್ಯಂತ ಸಂತೋಷವಾಗಿರುವ ಮನುಷ್ಯನನ್ನು ಹುಡುಕಬೇಕು. ಅವನನ್ನು ಕರೆತಂದು ಅವನ ಅಂಗಿಯನ್ನು ನೀವು ಧರಿಸಿದರೆ ಅವನ ಸಂತೋಷವೂ ನಿಮ್ಮದಾಗುತ್ತದೆ’ ಎಂದು ಹೊಸ ಉಪಾಯ ಸೂಚಿಸಿದ. ಸಿರಿವಂತನಿಗೆ ಇದಾಗಬಹುದು ಎನ್ನಿಸಿತು. ಸೇವಕರನ್ನು ಕರೆದು ಅತೀವ ಸಂತೋಷದಿಂದಿರುವ ಮನುಷ್ಯನನ್ನು ಹುಡುಕಿ ಕರೆತರುವಂತೆ ಹೇಳಿದ. ಸೇವಕರು ಹಲವು ದಿನಗಳ ಕಾಲ ಊರೂರು ಸುತ್ತಿದರೂ ಸಂತುಷ್ಟ ಮನುಷ್ಯ ಸಿಗಲೇ ಇಲ್ಲ.

ಕೊನೆಗೆ ಒಂದು ಸಣ್ಣ ಹಳ್ಳಿಯಲ್ಲಿ ಒಬ್ಬ ಖುಷಿ ಖುಷಿ ವ್ಯಕ್ತಿ ಅವರ ಕಣ್ಣಿಗೆ ಬಿದ್ದ. ಆತ ಸದಾ ನಗು ನಗುತ್ತ ಹಾಡು ಹೇಳುತ್ತ ಇದ್ದ. ಸೇವಕರು ಅವನನ್ನು ಸಿರಿವಂತನ ಅರಮನೆಗೆ ಕರೆತಂದರು. ಅದಾಗಲೇ ಸುದ್ದಿ ತಿಳಿದಿದ್ದ ಸಿರಿವಂತ ತನ್ನ ವಿಲಾಸಿ ಕೊಠಡಿಯಲ್ಲಿ ಅಂಗಿ ಬಿಚ್ಚಿಕೊಂಡು ಕುಳಿತಿದ್ದ. ಇನ್ನಾದರೂ ಖುಷಿಯಾಗಿರಬಹುದು ಎಂದುಕೊಂಡ ಶ್ರೀಮಂತ, “ಬಾರಯ್ಯ’ ಎಂದು ಸ್ವಾಗತಿಸಿದ. ಕಪ್ಪನೆಯ, ಕುಳ್ಳು ಬಡವನೊಬ್ಬ ಮೆಲ್ಲನೆ ಸಿರಿವಂತನ ಕೊಠಡಿಯೊಳಕ್ಕೆ ಹೊಕ್ಕ. ಆ ಅತ್ಯಂತ ಸುಖೀ ಮನುಷ್ಯನಿಗೆ ಅಂಗಿಯೇ ಇರಲಿಲ್ಲ.!

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.