ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..


ಸುಹಾನ್ ಶೇಕ್, Jun 29, 2024, 3:25 PM IST

10

ಬಾಲಿವುಡ್‌ ನಟಿ ಹಿನಾ ಖಾನ್‌ ಅವರು ತನಗೆ ಸ್ತನ ಕ್ಯಾನ್ಸರ್‌ (Breast Cancer) ಇದೆಯೆಂದು ಹೇಳಿಕೊಂಡಿದ್ದಾರೆ. ತಾನು ಅದನ್ನು ಧೈರ್ಯವಾಗಿಯೇ ಎದುರಿಸಿ ಬೇಗ ಗುಣಮುಖರಾಗಿ ಬರುತ್ತೇನೆ ಎಂದು ಹೇಳಿದ್ದಾರೆ.

ಅಭಿಮಾನಿಗಳ ಹಿನಾ ಖಾನ್‌(Hina Khan) ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿಯೆಂದು ಹಾರೈಸಿದ್ದಾರೆ. ಸ್ತನ ಕ್ಯಾನ್ಸರ್‌ ಹೆಚ್ಚಾಗಿ ಕಂಡುಬರುವ ದೇಶಗಳಲ್ಲಿ ಭಾರತದ ಹೆಸರೂ ಕೂಡ ಮುಂಚೂಣಿಯಲ್ಲಿದೆ. ಕಳೆದ ಕೆಲ ವರ್ಷಗಳಲ್ಲಿ 30ರ ವಯಸ್ಸು ದಾಟಿದ ಮಹಿಳೆಯರು ಸ್ತನ ಕ್ಯಾನ್ಸರ್‌ ಕಾಯಿಲೆ ಹೆಚ್ಚಾಗಿ ಕಂಡು ಬರುತ್ತಿದೆ.

ಪ್ರತಿ 28 ಭಾರತೀಯ ಮಹಿಳೆಯರಿಗೆ  1 ಬಾರಿ ಸ್ತನ ಕ್ಯಾನ್ಸರ್ ಎದುರಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ, ಸ್ತನ ಕ್ಯಾನ್ಸರ್ ನ ಅಪಾಯವು 30 ರ ಹರೆಯಕ್ಕೆ ಪ್ರವೇಶಿಸಿದ ತಕ್ಷಣ ಪ್ರಾರಂಭವಾಗುತ್ತದೆ ಮತ್ತು ಆಕೆಯು 50 ಮತ್ತು 60 ಗಳನ್ನು ಮೀರಿದ ನಂತರ ಅದು ಕೊನೆಗೊಳ್ಳುತ್ತದೆ ಎಂದು ಒಮೆಗಾ ಆಸ್ಪತ್ರೆಯ ವರದಿಯೊಂದು ತಿಳಿಸಿದೆ.

ಆತಂಕಕಾರಿ ಸಂಗತಿಯೆಂದರೆ ಸ್ತನ ಕ್ಯಾನ್ಸರ್‌ನಿಂದ ಹೆಚ್ಚು ಸಾವನ್ನಪ್ಪುವ ದೇಶಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ಭಾರತದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬ ಮಹಿಳೆ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ  ಎಂದು ವರದಿಯೊಂದು ತಿಳಿಸಿದೆ.

2022 ರ ಅಂತ್ಯದ ವೇಳೆಗೆ  ಐದು ವರ್ಷಗಳ ಅವಧಿಯಲ್ಲಿ 5.25 ಲಕ್ಷಕ್ಕೂ ಹೆಚ್ಚು ಮಹಿಳೆಯರು ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಇಂಡಿಯಾ ಟಿವಿಯ ವರದಿ ತಿಳಿಸಿದೆ.

ಕಳೆದ ದಶಕದಲ್ಲಿ, 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಸಂಭವವು ಶೇಕಡಾ 3 ರಿಂದ 8 ಕ್ಕೆ ಏರಿದೆ. ಅನುವಂಶಿಕ ರೂಪಾಂತರಗಳಿಂದ ಅನಾರೋಗ್ಯಕರ ಜೀವನಶೈಲಿಯವರೆಗೆ, ಹದಿಹರೆಯದವರು ಎಂದಿಗಿಂತಲೂ ಹೆಚ್ಚು ಸ್ತನ ಕ್ಯಾನ್ಸರ್ ಗೆ ಗುರಿಯಾಗುತ್ತಿದ್ದಾರೆ.

ಸ್ತನ ಕ್ಯಾನ್ಸರ್‌ ಬಗ್ಗೆ ಮುಕ್ತವಾಗಿ ಮಾತಾಡಿ ಆ ಬಗ್ಗೆ ಜಾಗ್ರತೆಯನ್ನು ವಹಿಸಲು ಸಲಹೆ – ಸೂಚನೆ ನೀಡುವವರು ತೀರಾ ಕಡಿಮೆ. ಬಣ್ಣದ ಲೋಕದ ಖ್ಯಾತ ನಟಿಯರಿಗೆ ಸ್ತನ ಕ್ಯಾನ್ಸರ್‌ ಕಾಡಿದೆ. ಈ ಬಗ್ಗೆ ನಟಿಯರು ಧ್ವನಿ ಎತ್ತಿ ಇತರರಿಗೆ ಧೈರ್ಯವನ್ನು ತುಂಬಿದ್ದಾರೆ.

ತಾಹಿರಾ ಕಶ್ಯಪ್ (Tahira Kashyap): ಬಾಲಿವುಡ್‌ ನಟ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ತಮಗೆ ಸ್ತನ ಕ್ಯಾನ್ಸರ್‌ ವಾದ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. 2018 ರಲ್ಲಿ ಅವರಿಗೆ ಸ್ತನ ಕ್ಯಾನ್ಸರ್‌ ಕಾಣಿಸಿಕೊಂಡಿತು. 2019 ರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. 0 ಸ್ಟೇಜ್‌ ನಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು, ಸ್ತನಛೇದನ ಪ್ರಕ್ರಿಯೆಗೆ ಒಳಗಾಗಿ ಕ್ಯಾನ್ಸರ್‌ ನಿಂದ ಗೆದ್ದು ಬಂದಿದ್ದರು. ಆಗ ಅವರಿಗೆ 35 ವರ್ಷ ವಯಸ್ಸಾಗಿತ್ತು.

ಮಹಿಮಾ ಚೌಧರಿ (Mahima Chaudhry): ಬಾಲಿವುಡ್‌ ನಟಿ ಮಹಿಮಾ ಚೌಧರಿ ಅವರಿಗೆ 2021ರಲ್ಲಿ ಸ್ತನ ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು. ಮೊದಲಿಗೆ ಅವರಿಗೆ ಇದರ ಬಗ್ಗೆ ಅರಿವಿರಲಿಲ್ಲ. ಸಾಮಾನ್ಯ ಚೆಕ್‌ ಅಪ್‌ ಗೆಂದು ಹೋಗಿದ್ದಾಗ ಅವರಿಗೆ ವರ್ಷದಿಂದ ಸ್ತನ ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು.  ಇದಾದ ಬಳಿಕ ವರ್ಷಗಳ ಹೋರಾಡಿ ಆರಂಭಿಕ ಹಂತಗಳಲ್ಲೇ ಕ್ಯಾನ್ಸರ್‌ ನಿಂದ ಗೆದ್ದು ಬಂದಿದ್ದರು.

ಮಮ್ತಾಜ್ (Mumtaz):‌  2002 ರಲ್ಲಿ ತನ್ನ 52ನೇ ವಯಸ್ಸಿನಲ್ಲಿ ಹಿರಿಯ ನಟಿ ಮಮ್ತಾಜ್‌ ಅವರಿಗೆ ಸ್ತನ ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು. ಮುಮ್ತಾಜ್ ರೋಗದೊಂದಿಗೆ ಹೋರಾಡಿ ನೂರಾರು  ಸ್ತನ ಕ್ಯಾನ್ಸರ್ ರೋಗಿಗಳಿಗೆ ಸ್ಫೂರ್ತಿ ಆಗಿದ್ದರು. ವರದಿಗಳ ಪ್ರಕಾರ ಮುಮ್ತಾಜ್ ಆರು ಕೀಮೋಥೆರಪಿಗಳನ್ನು ಮತ್ತು ಒಟ್ಟು 35 ರೇಡಿಯೇಷನ್ ಚಿಕಿತ್ಸೆಗಳಿಗೆ ಒಳಗಾಗಿದ್ದರು.‌

ಹಂಸ ನಂದಿನಿ (Hamsa Nandini): ಟಾಲಿವುಡ್‌ ನಟಿ ಹಂಸ ನಂದಿನಿ ಅವರಿಗೆ ಸ್ತನ ಕ್ಯಾನ್ಸರ್‌ ಇರುವುದು 2021 ರಲ್ಲಿ ಪತ್ತೆಯಾಗಿತ್ತು. ಮೊದಲಿಗೆ ಗಡ್ಡೆಯೊಂದು ಪತ್ತೆಯಾಗಿತ್ತು. ಅದನ್ನು ಸರ್ಜರಿ ಮೂಲಕ ತೆಗೆಯಲಾಗಿತ್ತು. ಇದಾದ ನಂತರ ಟೆಸ್ಟ್‌ ಮಾಡಿಸಿದಾಗ ಅವರಿಗೆ ಸ್ತನ ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು. ತಿಂಗಳುಗಟ್ಟಲೇ ಸಂಕಷ್ಟದ ಸಮಯದಲ್ಲಿ ಹೋರಾಡುತ್ತಾ, ಗುಣಮುಖನಾಗುತ್ತೇನೆ ಎನ್ನುವ ವಿಶ್ವಾಸದಲ್ಲಿ ಅವರು ನಗುಮುಖದಿಂದಲೇ ಕಾಯಿಲೆಯನ್ನು ಎದುರಿಸಿದರು. ಕೊನೆಗೂ ಅವರ ಸ್ತನ ಕ್ಯಾನ್ಸರ್‌ ಗುಣಮುಖವಾಯಿತು. ಇದಾದ ಬಳಿಕ ಅವರು ಅನೇಕರಿಗೆ ಈ ಬಗ್ಗೆ ಅರಿವು ಮೂಡಿಸಿದ್ದಾರೆ.

ಛವಿ ಮಿತ್ತಲ್ (Chhavi Mittal): ಖ್ಯಾತ ಕಿರುತೆರೆ ನಟಿ ಛವಿ ಮಿತ್ತಲ್ ಅವರಿಗೆ ಸ್ತನ ಕ್ಯಾನ್ಸರ್‌ ಇರುವುದು 2022 ರ ಏಪ್ರಿಲ್‌ ನಲ್ಲಿ ಪತ್ತೆಯಾಗಿತ್ತು. ಜಿಮ್‌ ಮಾಡುವಾಗ ಅವರಿಗೆ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ವೇಳೆ ವೈದ್ಯರು ಅವರಿಗೆ ಎಆರ್ ಐ ಸ್ಕ್ಯಾನ್‌ ಮಾಡಲು ಸಲಹ ನೀಡಿದ್ದರು. ಸ್ಕ್ಯಾನ್‌ ಬಳಿಕ ಅವರ ಸ್ತನದಲ್ಲಿ ಗಡ್ಡೆಯೊಂದು ಇರುವುದು ಪತ್ತೆಯಾಗಿತ್ತು. ಇದಾದ ಬಳಿಕ ಅವರು ಚಿಕಿತ್ಸೆ ಪಡೆಯಲು ಆರಂಭಿಸಿದ್ದರು. ಸುದೀರ್ಘ ಅವಧಿಯ ಕಾಲ ಹೋರಾಡಿದ ಬಳಿಕ ಅವರು ಕೊನೆಗೂ ಕ್ಯಾನ್ಸರ್‌ ಗೆದ್ದು ಬಂದಿದ್ದರು. ಇಂದಿಗೂ ಅವರು ಅನೇಕರಿಗೆ ಸ್ಪೂರ್ತಿಯಾಗಿದ್ದಾರೆ.

ಗೌತಮಿ: ಸೌತ್‌ ನಟಿ ಗೌತಮಿ ಅವರಿಗೆ 2005ರಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗಿತ್ತು. ದಿಟ್ಟವಾಗಿ ಇದನ್ನು ಎದುರಿಸಿದ ಅವರು ವೈದ್ಯರ ಸಲಹೆಯನ್ನು ಪಾಲಿಸಿ, ಕೊನೆಗೂ ಕ್ಯಾನ್ಸರ್‌ ಗೆದ್ದು ಬಂದಿದ್ದರು.

ಟಾಪ್ ನ್ಯೂಸ್

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.