![Hunsur ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್](https://www.udayavani.com/wp-content/uploads/2024/07/mo-407x315.jpg)
BJP ಕೇಂದ್ರ ಕಚೇರಿ ಬಳಿ ಎಎಪಿ ಬೃಹತ್ ಪ್ರತಿಭಟನೆ; ಗೋಪಾಲ್ ರಾಯ್, ಅತಿಶಿ ಭಾಗಿ
ಬಿಜೆಪಿಯಿಂದ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ನಾಶಮಾಡುವ ಅಭಿಯಾನ...
Team Udayavani, Jun 29, 2024, 6:54 PM IST
![1-AAP](https://www.udayavani.com/wp-content/uploads/2024/06/1-AAP-620x465.jpg)
ಹೊಸದಿಲ್ಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಬಿಜೆಪಿ ಪ್ರಧಾನ ಕಚೇರಿಯ ಮುಂದೆ ಆಮ್ ಆದ್ಮಿ ಪಕ್ಷ ಶನಿವಾರ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಸಚಿವರಾದ ಗೋಪಾಲ್ ರಾಯ್, ಅತಿಶಿ, ಆಮ್ ಆದ್ಮಿ ಪಕ್ಷದ ಸಂಸದರು, ಶಾಸಕರು, ಕೌನ್ಸಿಲರ್ಗಳು ಮತ್ತು ಪ್ರಮುಖರು ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿಭಟನಾಕಾರರು ಕೇಂದ್ರೀಯ ಸಂಸ್ಥೆಗಳ ದುರುಪಯೋಗ ಮತ್ತು ಸರ್ವಾಧಿಕಾರವನ್ನು ಕೊನೆಗಾಣಿಸುತ್ತೇವೆ ಎಂಬ ಫಲಕಗಳನ್ನು ಸಹ ಹಿಡಿದುಕೊಂಡಿದ್ದರು. ಪ್ರತಿಭಟನಾಕಾರರು ಡಿಡಿಯು ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿಯ ಎಎಪಿ ಕಚೇರಿಯಲ್ಲಿ ಜಮಾಯಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಗೆ ಯಾವುದೇ ಅನುಮತಿ ತೆಗೆದುಕೊಳ್ಳದ ಕಾರಣ ಬಿಜೆಪಿ ಕೇಂದ್ರ ಕಚೇರಿಯತ್ತ ಮೆರವಣಿಗೆ ನಡೆಸುವುದನ್ನು ತಡೆಯಲು ವ್ಯವಸ್ಥೆ ಮಾಡಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್ಗಳನ್ನು ಹಾಕಲಾಗಿದ್ದು, ಸ್ಥಳದಲ್ಲಿ ಅರೆಸೇನಾ ಪಡೆ ಸಿಬಂದಿ ಮತ್ತು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಪರಿಸರ ಸಚಿವ ಗೋಪಾಲ್ ರಾಯ್ ಮಾತನಾಡಿ ‘ನಮ್ಮ ಸಿಎಂ ಮತ್ತು ಸಚಿವರು ನಕಲಿ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದಾರೆ. ಇದು ಬಿಜೆಪಿ ಸರ್ಕಾರದ ಷಡ್ಯಂತ್ರ. ಸತ್ಯಾಂಶವೂ ಹೊರಬಿದ್ದಿದೆ. ಸಿಎಂಗೆ ಟ್ರಯಲ್ ಕೋರ್ಟ್ ಜಾಮೀನು ನೀಡಿದೆ. ಸಿಎಂ ವಿರುದ್ಧ ಯಾವುದೇ ಪುರಾವೆ ಇಲ್ಲ ಎಂದು ವಿಚಾರಣಾ ನ್ಯಾಯಾಲಯ ಹೇಳಿದ ಬಳಿಕ ಇಡಿ ಆದೇಶದ ಪ್ರತಿಯನ್ನು ತೆಗೆದುಕೊಳ್ಳದೆ ಹೈಕೋರ್ಟ್ಗೆ ಹೋಗಿದೆ.ಇದು ದೆಹಲಿ ಸರ್ಕಾರ ಮತ್ತು ಎಎಪಿಯನ್ನು ನಾಶಮಾಡುವ ಅಭಿಯಾನವಾಗಿದೆ. ಶೀಘ್ರದಲ್ಲೇ ನ್ಯಾಯಾಲಯದಿಂದ ಆಶಾದಾಯಕ ಫಲಿತಾಂಶಗಳನ್ನು ಪಡೆಯುತ್ತೇವೆ” ಎಂದಿದ್ದಾರೆ.
ಇದನ್ನೂ ಓದಿ: Excise Policy Case: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್
ನ್ಯಾಯಾಂಗ ಬಂಧನವನ್ನು ಕೋರಲು ಯಾವುದೇ ಆಧಾರವಿಲ್ಲ
ಅಬಕಾರಿ ನೀತಿ ವಿಚಾರಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು,ಈ ಕುರಿತು ಅವರ ಕುರಿತು ವಕೀಲ ರಿಷಿಕೇಶ್ ಕುಮಾರ್ ಅವರು ಪ್ರತಿಕ್ರಿಯಿಸಿ “ಅರವಿಂದ್ ಕೇಜ್ರಿವಾಲ್ ಅವರ ಮೂರು ದಿನಗಳ ಸಿಬಿಐ ಕಸ್ಟಡಿ ಇಂದು ಅಂತ್ಯಗೊಂಡಿದ್ದರಿಂದ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ಪೊಲೀಸ್ ಕಸ್ಟಡಿಗೆ ಕೋರಲಿಲ್ಲ, ಅವರು ನ್ಯಾಯಾಂಗ ಬಂಧನವನ್ನು ಕೋರಿದರು, ಅದನ್ನು ನಾವು ವಿರೋಧಿಸಿದ್ದೇವೆ, ಅವರು ನ್ಯಾಯಾಂಗ ಬಂಧನವನ್ನು ಕೋರಲು ಯಾವುದೇ ಆಧಾರವಿಲ್ಲ ಎಂದರು.
‘ಕೇಜ್ರಿವಾಲ್ ಅವರನ್ನು ಜುಲೈ 12 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ನಾವು ಅರ್ಜಿ ಸಲ್ಲಿಸಿದ್ದೇವೆ ಅವರ ಮಧುಮೇಹ ಔಷಧಗಳು, ಪರೀಕ್ಷಾ ಕಿಟ್ಗಳು ಮತ್ತು ಮನೆಯಲ್ಲಿಯೇ ಸಿದ್ದಪಡಿಸಿದ ಆಹಾರವನ್ನು ಒದಗಿಸಲು ನಮ್ಮ ಬೇಡಿಕೆಗಳಿಗೆ ನ್ಯಾಯಾಲಯವು ಸಮ್ಮತಿಸಿದೆ. ಸೋಮವಾರ ಅಥವಾ ಮಂಗಳವಾರ, ನಾವು ಜಾಮೀನು ಅರ್ಜಿಯನ್ನು ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
![Hunsur ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್](https://www.udayavani.com/wp-content/uploads/2024/07/mo-407x315.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
MUST WATCH
ಹೊಸ ಸೇರ್ಪಡೆ
![Hunsur ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್](https://www.udayavani.com/wp-content/uploads/2024/07/mo-148x115.jpg)
Hunsur ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Road Mishap: ಕೆಎಸ್ಆರ್ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು](https://www.udayavani.com/wp-content/uploads/2024/07/road-mishap-11-1-150x79.jpg)
Road Mishap: ಕೆಎಸ್ಆರ್ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು
![Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್](https://www.udayavani.com/wp-content/uploads/2024/07/pl-150x82.jpg)
Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್
![Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು](https://www.udayavani.com/wp-content/uploads/2024/07/PADDY-150x72.jpg)
Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.