![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Sullia ಪಂಜ: ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ
ಬಾವಿಯ ರಿಂಗ್ ಬದಿಗೆ ಮಣ್ಣು ತುಂಬುವ ವೇಳೆ ಘಟನೆ
Team Udayavani, Jun 30, 2024, 12:44 AM IST
![Sullia ಪಂಜ: ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ](https://www.udayavani.com/wp-content/uploads/2024/06/sulya-620x403.jpg)
ಸುಳ್ಯ: ಬಾವಿಯ ರಿಂಗ್ನ ಬದಿಗೆ ಮಣ್ಣು ತುಂಬಿಸುತ್ತಿದ್ದಾಗ ಮಣ್ಣಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿದ ಘಟನೆ ನಡೆದಿದ್ದು, ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ರಕ್ಷಿಸಿದ ಘಟನೆ ಶನಿವಾರ ಸಂಜೆ ತಾಲೂಕಿನ ಪಂಜದಲ್ಲಿ ಸಂಭವಿಸಿದೆ.
ಪಂಜದ ಅಡ್ಡತ್ತೋಡು ಸಮೀಪ ಮನೆಯೊಂದರ ಬಾವಿಯ ರಿಂಗ್ನ ಹೊರಗಿನ ಬದಿಗೆ ಮಣ್ಣು ತುಂಬುವ ಕೆಲಸವನ್ನು ಕೇರಳದ ಕಾರ್ಮಿಕರು ನಿರ್ವಹಿಸುತ್ತಿದ್ದರು. ಆಗ ರಿಂಗ್ನ ಬದಿಯ ಮಣ್ಣು ಒಮ್ಮಿಂದೊಮ್ಮೆಲೆ ಕೆಳಕ್ಕೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಭುಜದ ವರೆಗೂ ಮಣ್ಣಿನಲ್ಲಿ ಹೂತು ಹೋಗಿದ್ದರು.
ತತ್ಕ್ಷಣ ಅಲ್ಲಿದ್ದವರು ಮತ್ತು ಜೆಸಿಬಿ ಸಹಾಯದಿಂದ ಅವರ ಮೇಲಿಂದ ಮಣ್ಣು ತೆಗೆದು ಅವರನ್ನು ರಕ್ಷಿಸಿ ಅಂಬ್ಯುಲೆನ್ಸ್ನಲ್ಲಿ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.