ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ; ಕೃಷಿಕರಲ್ಲಿ ಆತಂಕ


Team Udayavani, Jun 30, 2024, 1:35 AM IST

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ

ಸುಳ್ಯ: ಎಳೆ ಅಡಿಕೆ ಉದುರುವ ಸಮಸ್ಯೆ ತೀವ್ರಗೊಂಡಿದ್ದು, ಇದು ಈ ಬಾರಿಯ ಫಸಲಿನ ಮೇಲೆ ತೀವ್ರ ಪರಿಣಾಮ ಬೀರಲಿದೆ.

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲೂ ಈ ಸಮಸ್ಯೆ ತೀವ್ರವಾಗಿದೆ. ಮಳೆ ಆರಂಭಗೊಂಡ ಕೆಲವು ದಿನಗಳ ಬಳಿಕ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಈಗಾಗಲೇ ಶೇ.50ರಷ್ಟು ಎಳೆ ಅಡಿಕೆ ಬಿದ್ದಿರುವ ಸಾಧ್ಯತೆ ಇದೆ ಎಂದು ಕೃಷಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಅಡಿಕೆ ಕೃಷಿಗೆ ಯಥೇತ್ಛ ನೀರು ಅಗತ್ಯ. ಈ ಬಾರಿಯ ಬೇಸಗೆಯಲ್ಲಿ ಬಿಸಿಲು ತೀವ್ರವಾಗಿದ್ದು, ಹೆಚ್ಚಿನ ಕಡೆಗಳಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಇದು ಈ ಸಮಸ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಬೇಸಗೆಯಲ್ಲಿ ಅಡಿಕೆ ಹಿಂಗಾರ ಕರಟುವ ಸಮಸ್ಯೆ ಕಾಣಿಸಿಕೊಂಡಿತ್ತು.

ಬೇಸಗೆಯಲ್ಲಿ ಬಾರೀ ಪ್ರಮಾಣದಲ್ಲಿ ತಾಪಮಾನ ಹೆಚ್ಚಳಗೊಂಡಿತ್ತು. ಜತೆಗೆ ಮೇ ಅಂತ್ಯದವರೆಗೂ ಸರಿಯಾಗಿ ಮಳೆಯಾ ಗಿರಲಿಲ್ಲ. ಬಳಿಕ ಮಳೆ ಆಗಿದ್ದು, ಆಗ ಎಳೆ ಅಡಿಕೆ ಉದುರಲು ಆರಂಭಗೊಂಡಿತ್ತು.

ಮಳೆ ಬಿದ್ದ ಬಳಿಕ ಅಲ್ಪ ಪ್ರಮಾಣದಲ್ಲಿ ಎಳೆ ಅಡಿಕೆ ಉದು ರುವುದು ಕಡಿಮೆಯಾಗಿತ್ತು. ಅನಂತರ ಮಳೆ ಹಾಗೂ ಬಿಸಿಲ ವಾತಾವರಣದಲ್ಲಿ ಉಷ್ಣತೆ ಏರಿಕೆ ಯಾಗಿ ಹಲವೆಡೆ ಎಳೆ ಅಡಿಕೆ ಉದುರುತ್ತಿರುವುದು ಕಂಡು ಬರುತ್ತಿದೆ. ಮಳೆ ಆರಂಭವಾದ ಕೆಲವು ದಿನಗಳಲ್ಲಿ ಮತ್ತೆ ಬಿಸಿಲಿನ ವಾತಾ ವರಣ ಇರುವು ದರಿಂದ ಶಿಲೀಂಧ್ರಗಳು ಎಳೆ ಅಡಿಕೆ ರಸವನ್ನು ಹೀರುವುದರಿಂದ ಅವು ಉದುರುತ್ತವೆ ಎನ್ನುತ್ತಾರೆ ಕೃಷಿಕರು.

ಈಗಾಗಲೇ ಅಡಿಕೆಗೆ ಔಷಧ ಸಿಂಪಡಣೆ ಆರಂಭಿಸಲಾಗಿದೆ. ಸಾಮಾನ್ಯ ವಾಗಿ ಮೊದಲ ಹಂತದಲ್ಲಿ ಅಡಿಕೆ ಫಸಲು ನಿಲ್ಲಲು ಔಷಧ ಸಿಂಪಡಿಸಲಾಗುತ್ತದೆ. ಕೆಲವರು ಪ್ರತಿ ತಿಂಗಳು ಅಥವಾ 2-3 ತಿಂಗಳಿಗೊಮ್ಮೆ ಔಷಧ ಸಿಂಪಡಿಸುತ್ತಾರೆ. ಎಳೆ ಅಡಿಕೆ ಉದುರುವುದನ್ನು ತಡೆ ಯಲೂ ಔಷಧ ಸಿಂಪಡಿಸುತ್ತಿದ್ದಾರೆ. ಇದರಿಂದ ಕೆಲವೆಡೆ ಮಾತ್ರ ಸಮಸ್ಯೆ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ ಎನ್ನುತ್ತಾರೆ ರೈತರು.

ಕೀಟ ರಸ ಹೀರುವುದರಿಂದ ಎಳೆ ಅಡಿಕೆ ಉದುರುತ್ತದೆ. ಮಳೆಗಾಲ ಸಂದರ್ಭದಲ್ಲಿ ಇದು ಅಲ್ಲಲ್ಲಿ ಕಂಡುಬರುತ್ತದೆ. ಔಷಧ ಸಿಂಪಡಣೆ ಮೂಲಕ ನಿಯಂತ್ರಣ ಸಾಧ್ಯವಿದೆ. ಸ್ಪಷ್ಟವಾಗಿ ಯಾವ ಕಾರಣದಿಂದ ಎಳೆ ಅಡಿಕೆ ಉದುರುತ್ತಿದೆ, ಅದಕ್ಕೆ ಯಾವ ಔಷಧ ಮೂಲಕ ನಿಯಂತ್ರಣ ಸಾಧ್ಯ ಎಂಬುದನ್ನು ಸ್ಥಳಕ್ಕೆ ಭೇಟಿ ನೀಡಿ ಅಥವಾ ಉದುರಿದ ಎಳೆ ಅಡಿಕೆಯನ್ನು ಪರಿಶೀಲಿಸಿ ತಿಳಿಯಬಹುದು.
– ಡಾ| ನಾಗರಾಜ್‌ ವಿಜ್ಞಾನಿ, ಸಿ.ಪಿ.ಸಿ.ಐ. ವಿಟ್ಲ

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Sullia ಜಾಲ್ಸೂರು: ಐರಾವತ ಬಸ್‌ – ರಿಕ್ಷಾ ಢಿಕ್ಕಿ

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

Uppinangady ಚರಂಡಿಗೆ ಎಸೆಯುತ್ತಿದ್ದಾರೆ ಅಕ್ಷರ ದಾಸೋಹದ ಅನ್ನ !

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.