Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Team Udayavani, Jun 30, 2024, 7:49 AM IST
ಕುಷ್ಟಗಿ: ಪಟ್ಟಣದ 1ನೇ ವಾರ್ಡಿನ ಕೃಷ್ಣಗಿರಿ ಕಾಲೋನಿಯಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಮುಂದೆ ನಿಲ್ಲಿಸಿದ್ದ ಹೊಂಡಾ ಎಕ್ಟೀವಾ ಸ್ಕೂಟಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಪ್ರಕರಣ ನಡೆದಿದೆ.
ಕುಮಾರ ರಾಠೋಡ್ ಅವರಿಗೆ ಸೇರಿದ ಹೊಂಡಾ ಎಕ್ಟೀವಾ ಸ್ಕೂಟಿಯನ್ನು ಎಂದಿನಂತೆ ಮನೆಯ ಮುಂದೆ ನಿಲ್ಲಿಸಿದ್ದರು. ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಧಗಧಗನೇ ಹೊತ್ತಿ ಉರಿಯುವ ವೇಳೆ ಭಾರಿ ಶಬ್ದಕ್ಕೆ ಅಕ್ಕಪಕ್ಕದವರಿಗೆ ಎಚ್ಚರವಾಯಿತು. ಕೂಡಲೇ ಅಗ್ನಿಶಾಮಕ ಠಾಣೆಗೆ ಕರೆ ಮಾಡಿದ್ದು, ಅಗ್ನಿಶಾಮಕ ವಾಹನ ಆಗಮಿಸಿ ಬೆಂಕಿ ನಂದಿಸಿತು. ಆ ಸಮಯಕ್ಕಾಗಲೇ ಹೊಂಡಾ ಎಕ್ಟೀವಾ ಸ್ಕೂಟಿ ಸುಟ್ಟು ಸಂಪೂರ್ಣ ಕರಕಲಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.