T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


Team Udayavani, Jun 30, 2024, 8:38 AM IST

T20 WC; This is my luck…..: Coach Rahul Dravid

ಬಾರ್ಬಡೋಸ್: ಹಲವು ಕಾಯುವಿಕೆಯ ಬಳಿಕ ಅಂದರೆ ಸುಮಾರು 17 ವರ್ಷಗಳ ಬಳಿಕ ಭಾರತವು ಟಿ20 ವಿಶ್ವಕಪ್ ಜಯಿಸಿದೆ. ಬ್ರಿಜ್ ಟೌನ್ ನ ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ರೋಹಿತ್ ಬಳಗವು ದಕ್ಷಿಣ ಆಫ್ರಿಕಾ ತಂಡವನ್ನು ಏಳು ರನ್ ಗಳ ಅಂತರದಿಂದ ಸೋಲಿಸಿತು. ಈ ಮೂಲಕ ಕೋಟಿ ಕೋಟಿ ಭಾರತೀಯರು ಕಾಯುತ್ತಿದ್ದ ಘಳಿಗೆಗೆ ಕೆರಿಬಿಯನ್ ದ್ವೀಪ ಸಾಕ್ಷಿಯಾಯಿತು.

ಕಳೆದ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್, ಏಕದಿನ ಫೈನಲ್ ಗೆ, ಇದೀಗ ಟಿ20 ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಭಾರತೀಯ ತಂಡದ ಪಯಣ ಕೂಡಾ ಈ ಗೆಲುವಿನೊಂದಿಗೆ ಅಂತ್ಯವಾಗಿದೆ. ಟಿ20 ವಿಶ್ವಕಪ್ ಅವರ ಕೊನೆಯ ಕೂಟವಾಗಿತ್ತು.

ಟಿ20 ವಿಶ್ವಕಪ್ 2024 ಗೆದ್ದ ಬಳಿಕ ಮಾತನಾಡಿದ ದ್ರಾವಿಡ್, “ಒಬ್ಬ ಆಟಗಾರನಾಗಿ, ನಾನು ಟ್ರೋಫಿ ಗೆಲ್ಲುವ ಅದೃಷ್ಟವನ್ನು ಹೊಂದಿರಲಿಲ್ಲ ಆದರೆ ನಾನು ನನ್ನ ಅತ್ಯುತ್ತಮವಾದುದನ್ನು ನೀಡಿದ್ದೆ. ಕೋಚ್ ಆಗಿ, ತಂಡ ಈ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗುವಂತೆ ಮಾಡಿದ್ದು ನನ್ನ ಅದೃಷ್ಟ ಇದು ಉತ್ತಮ ಪ್ರಯಾಣವಾಗಿದೆ … ” ಎಂದಿದ್ದಾರೆ.

“ಇದು 2 ವರ್ಷಗಳ ಪ್ರಯಾಣ, ಕೇವಲ ಈ ಟಿ20 ವಿಶ್ವಕಪ್ ನದ್ದು ಅಲ್ಲ. ಈ ತಂಡದ ನಿರ್ಮಾಣ, ಬಯಸಿದ್ದ ಕೌಶಲ್ಯಗಳು, ನಾವು ಬಯಸಿದ ಆಟಗಾರರು… ಇವೆಲ್ಲಾ ನಾನು 2021 ರಲ್ಲಿ ಹುದ್ದೆಗೆ ಬಂದಾಗ ಪ್ರಾರಂಭವಾದ ಚರ್ಚೆಗಳು. ಕೇವಲ ಈ ವಿಶ್ವಕಪ್‌ ನ ಸಿದ್ದತೆಯಲ್ಲ. ಇದು 2 ವರ್ಷಗಳ ಪ್ರಯಾಣದಂತೆ ಭಾಸವಾಗುತ್ತಿದೆ. ಎರಡು ವರ್ಷದಿಂದ ಏನೆಲ್ಲಾ ಮಾಡಿದ್ದೆವು ಅದೆಲ್ಲಾ ಈಗ ಬಾರ್ಬಡೋಸ್ ನಲ್ಲಿ ಬಂದು ಸಮ್ಮಿಳಿತವಾಗಿದೆ ಅಷ್ಟೇ” ಎಂದು ರಾಹುಲ್ ಹೇಳಿದರು.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ ನಿವೃತ್ತಿಯ ಕುರಿತು ಮಾತನಾಡಿದ ಅವರು, “ಒಬ್ಬ ವ್ಯಕ್ತಿಯಾಗಿ ನಾನು ಅವರನ್ನು ಮಿಸ್ ಮಾಡಿಕೊಳ್ಳುತ್ತೇನೆ… ಅವರು ಯಾವ ರೀತಿಯ ವ್ಯಕ್ತಿ ಎನ್ನುವುದು, ಅವರು ನನಗೆ ತೋರಿದ ಗೌರವ, ತಂಡಕ್ಕಾಗಿ ಅವರು ಹೊಂದಿದ್ದ ಕಾಳಜಿ ಮತ್ತು ಬದ್ಧತೆ ನನ್ನನು ಪ್ರಭಾವಿಸಿದೆ. ಅವರು ಎಂದಿಗೂ ಹಿಮ್ಮೆಟ್ಟಲಿಲ್ಲ, ಒಬ್ಬ ವ್ಯಕ್ತಿಯಾಗಿ ನಾನು ರೋಹಿತ್ ರನ್ನು ಮಿಸ್ ಮಾಡಿಕೊಳ್ಳುತ್ತೇನೆ” ಎಂದರು.

ಭಾರತೀಯ ಕ್ರಿಕೆಟ್ ತಂಡದಲ್ಲಿರುವ ಇಂದಿನ ಹುಡುಗರು ಅದ್ಭುತ ಪ್ರತಿಭೆಗಳಿದ್ದಾರೆ. ಈ ಸಮಯದಲ್ಲಿ ಅವರ ಶಕ್ತಿ ಮತ್ತು ಆತ್ಮವಿಶ್ವಾಸ ಮತ್ತೊಂದು ಹಂತದಲ್ಲಿದೆ. ಮುಂಬರುವ ದಿನಗಳಲ್ಲಿ ಭಾರತವು ಮುಂದಿನ 5-6 ವರ್ಷಗಳಲ್ಲಿ ಹಲವಾರು ಟ್ರೋಫಿಗಳನ್ನು ಗೆಲ್ಲುತ್ತದೆ. ಇಷ್ಟೆಲ್ಲಾ ಸಾಮರ್ಥ್ಯವಿದೆ, ಇಷ್ಟೆಲ್ಲಾ ಒಳ್ಳೆಯ ಕ್ರಿಕೆಟ್ ಆಡುತ್ತಿದ್ದೇವೆ, ಆದರೆ ದೊಡ್ಡ ಟ್ರೋಫಿ ಎಂಬ ಗೆರೆ ದಾಟಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರವೊಂದಿತ್ತು. ಆದರೆ ಮುಂದಿನ ದಿನಗಳಲ್ಲಿ ಹುಡುಗರು ಇದೇ ವಿಶ್ವಾಸದಲ್ಲಿ ತುಂಬಾ ಟ್ರೋಫಿ ಗೆಲ್ಲಲಿದ್ದಾರೆ ಎಂಬ ದೈರ್ಯವಿದೆ” ಎಂದು ಕೋಚ್ ರಾಹುಲ್ ದ್ರಾವಿಡ್ ಹೇಳಿದರು.

ಟಾಪ್ ನ್ಯೂಸ್

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.