T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು


Team Udayavani, Jun 30, 2024, 2:41 PM IST

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ಅಫ್ಘಾನಿಸ್ತಾನ ವಿರುದ್ಧ ಸೋತ ಆಸ್ಟ್ರೇಲಿಯಾ

2021ರ ಟಿ20 ವಿಶ್ವಕಪ್‌ ಚಾಂಪಿಯನ್‌ ಆಸ್ಟ್ರೇಲಿಯಾ, ಈ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಅನಿರೀಕ್ಷಿತವಾಗಿ ಸೋತು ಟೂರ್ನಿಯಿಂದಲೇ ಹೊರಬೀಳುವ ಸಂಕಟಕ್ಕೀಡಾಯಿತು. ಮೊದಲು ಬ್ಯಾಟಿಂಗ್‌ ಮಾಡಿದ ಆಘ್ಘನ್‌, 148 ರನ್‌ ಬಾರಿಸಿತ್ತು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ಬ್ಯಾಟರ್‌ಗಳ ಬೆಂಬಲವೇ ಸಿಗಲಿಲ್ಲ. ಇದರೊಂದಿಗೆ ಗುಲ್ಬದಿನ್‌ ನೈಬ್‌ 4,  ನವೀನ್‌ ಉಕ್‌ ಹಕ್‌ 3 ವಿಕೆಟ್‌ ಉರುಳಿಸಿ ಆಸೀಸ್‌ ಸೋಲಿಗೆ ಕಾರಣರಾಗಿದ್ದರು.

ಸೂಪರ್‌ ಓವರಲ್ಲಿ ಪಾಕ್‌ ವಿರುದ್ಧ ಗೆದ್ದ ಅಮೆರಿಕ

2009ರ ಟಿ20 ವಿಶ್ವಕಪ್‌ ಚಾಂಪಿಯನ್‌ ಪಾಕಿಸ್ತಾನಕ್ಕೆ ದುರ್ಬಲ ಅಮೆರಿಕ ಆಘಾತವಿತ್ತ ಅಪರೂಪದ ಪಂದ್ಯವಿದು. ಡಲ್ಲಾಸ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ 20 ಓವರ್‌ಗಳಲ್ಲಿ 159 ರನ್‌ ಗಳಿಸಿದ್ದರೆ, ಆತಿಥೇಯ ಅಮೆರಿಕ ಕೂಡ 159 ರನ್‌ ಬಾರಿಸಿ ಪಾಕ್‌ ತಂಡವನ್ನು ದಂಗುಬಡಿಸಿತ್ತು. ಅಷ್ಟೇ ಅಲ್ಲ,     ಸೂಪರ್‌ ಓವರ್‌ನಲ್ಲೂ ಗೆದ್ದ ಅಮೆರಿಕ, ಪಾಕಿಸ್ತಾನ ತಂಡ ಮುಖಭಂಗಕ್ಕೆ ಈಡಾಗುವಂತೆ ಮಾಡಿತ್ತು.

ಪಾಕ್‌ ವಿರುದ್ಧ ಭಾರತಕ್ಕೆ 6 ರನ್‌ಗಳ ವಿಜಯ

ಜೂ.9ರ ಈ ಪಂದ್ಯಕ್ಕಾಗಿ ವಿಶ್ವ ಕ್ರಿಕೆಟ್‌ ಜಗತ್ತೇ ಕಾತರದಿಂದ ಕಾಯುತ್ತಿತ್ತು. ಏಕೆಂದರೆ ಈ ಪಂದ್ಯದಲ್ಲಿ ಬದ್ಧ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖೀಯಾ ಗಿದ್ದವು. ತೀವ್ರ ಕುತೂಹಲ ಮೂಡಿಸಿದ್ದ ಈ ಪಂದ್ಯದಲ್ಲಿ ಭಾರತ ಕೇವಲ 119 ರನ್‌ ಬಾರಿಸಿ ಸೋಲಿನ ಭೀತಿ ಅನುಭವಿಸಿತ್ತು. ಆದರೆ ಪಾಕ್‌ ಬ್ಯಾಟರ್‌ಗಳನ್ನು ಭಾರ ತೀಯ ಬೌಲರ್‌ಗಳು ನಿಯಂತ್ರಿಸಿದ್ದರಿಂದ 113 ರನ್‌ ಮಾತ್ರ ಗಳಿಸಿದ ಪಾಕಿಸ್ತಾನ,    6 ರನ್‌ ಸೋಲನುಭವಿಸಿತು.

ನೇಪಾಳ ವಿರುದ್ಧ 1 ರನ್ನಿಂದ ಗೆದ್ದ ದ.ಆಫ್ರಿಕಾ

ಈ ಟೂರ್ನಿಯಲ್ಲಿ ಗ್ರೂಪ್‌ ಹಂತದಲ್ಲಿ ಸೋಲಿಲ್ಲದ ತಂಡವಾಗಿ ಮುಂದುವರೆದಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ದುರ್ಬಲ ನೇಪಾಳ ಚಮಕ್‌ ಕೊಟ್ಟಿತ್ತು. ಕಿಂಗ್ಸ್‌ಟೌನ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 115 ರನ್‌ ಬಾರಿಸಿದ್ದರೆ, ನೇಪಾಳ ಕೂಡ ಗೆಲುವಿಗೆ ತೀರಾ ಸನಿಹಕ್ಕೆ ಬಂದು ಹರಿಣಗಳ ಎದೆಬಡಿತ ಹೆಚ್ಚಿಸಿತ್ತು. ಆದರೆ ನೇಪಾಳಕ್ಕೆ ಮೊದಲ ಗೆಲುವು ಸಿಗಲಿಲ್ಲ. ಅಂತಿಮವಾಗಿ ರೋಚಕ 1 ರನ್‌ನಿಂದ ನೇಪಾಳ ಸೋಲೊಪ್ಪಿಕೊಂಡಿತು.

ಇಂಗ್ಲೆಂಡ್‌ಗೆ 7 ರನ್‌ ರೋಚಕ ಸೋಲು

ಸೇಂಟ್‌ ಲೂಸಿಯಾದಲ್ಲಿ ನಡೆದಿದ್ದ ಈ ಸೂಪರ್‌ 8 ಗ್ರೂಪ್‌-2ರ ಪಂದ್ಯದಲ್ಲ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ ಮಧ್ಯೆ ಜಿದ್ದಾಜಿದ್ದಿ ಕದನ ಏರ್ಪಟ್ಟಿತು. ದಕ್ಷಿಣ ಆಫ್ರಿಕಾ 163 ರನ್‌ ಬಾರಿಸಿದ್ದರೆ, ಇಂಗ್ಲೆಂಡ್‌ ಕೂಡ ಗೆಲುವಿಗೆ ಹತ್ತಿರವಾಗಿತ್ತು. ಆದರೆ ಅಂತಿಮ ಓವರ್‌ನಲ್ಲಿ ಹ್ಯಾರಿ ಬ್ರೂಕ್‌ ಔಟಾಗಿದ್ದರಿಂದ 156 ರನ್‌ ಬಾರಿಸಿದ್ದ ಜೋಸ್‌ ಬಟ್ಲರ್‌ ಪಡೆ ಕೇವಲ 7 ರನ್‌ನಿಂದ ಪಂದ್ಯ ಕೈಚೆಲ್ಲಿತ್ತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.