T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು


Team Udayavani, Jun 30, 2024, 2:41 PM IST

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ಅಫ್ಘಾನಿಸ್ತಾನ ವಿರುದ್ಧ ಸೋತ ಆಸ್ಟ್ರೇಲಿಯಾ

2021ರ ಟಿ20 ವಿಶ್ವಕಪ್‌ ಚಾಂಪಿಯನ್‌ ಆಸ್ಟ್ರೇಲಿಯಾ, ಈ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಅನಿರೀಕ್ಷಿತವಾಗಿ ಸೋತು ಟೂರ್ನಿಯಿಂದಲೇ ಹೊರಬೀಳುವ ಸಂಕಟಕ್ಕೀಡಾಯಿತು. ಮೊದಲು ಬ್ಯಾಟಿಂಗ್‌ ಮಾಡಿದ ಆಘ್ಘನ್‌, 148 ರನ್‌ ಬಾರಿಸಿತ್ತು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ಬ್ಯಾಟರ್‌ಗಳ ಬೆಂಬಲವೇ ಸಿಗಲಿಲ್ಲ. ಇದರೊಂದಿಗೆ ಗುಲ್ಬದಿನ್‌ ನೈಬ್‌ 4,  ನವೀನ್‌ ಉಕ್‌ ಹಕ್‌ 3 ವಿಕೆಟ್‌ ಉರುಳಿಸಿ ಆಸೀಸ್‌ ಸೋಲಿಗೆ ಕಾರಣರಾಗಿದ್ದರು.

ಸೂಪರ್‌ ಓವರಲ್ಲಿ ಪಾಕ್‌ ವಿರುದ್ಧ ಗೆದ್ದ ಅಮೆರಿಕ

2009ರ ಟಿ20 ವಿಶ್ವಕಪ್‌ ಚಾಂಪಿಯನ್‌ ಪಾಕಿಸ್ತಾನಕ್ಕೆ ದುರ್ಬಲ ಅಮೆರಿಕ ಆಘಾತವಿತ್ತ ಅಪರೂಪದ ಪಂದ್ಯವಿದು. ಡಲ್ಲಾಸ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ 20 ಓವರ್‌ಗಳಲ್ಲಿ 159 ರನ್‌ ಗಳಿಸಿದ್ದರೆ, ಆತಿಥೇಯ ಅಮೆರಿಕ ಕೂಡ 159 ರನ್‌ ಬಾರಿಸಿ ಪಾಕ್‌ ತಂಡವನ್ನು ದಂಗುಬಡಿಸಿತ್ತು. ಅಷ್ಟೇ ಅಲ್ಲ,     ಸೂಪರ್‌ ಓವರ್‌ನಲ್ಲೂ ಗೆದ್ದ ಅಮೆರಿಕ, ಪಾಕಿಸ್ತಾನ ತಂಡ ಮುಖಭಂಗಕ್ಕೆ ಈಡಾಗುವಂತೆ ಮಾಡಿತ್ತು.

ಪಾಕ್‌ ವಿರುದ್ಧ ಭಾರತಕ್ಕೆ 6 ರನ್‌ಗಳ ವಿಜಯ

ಜೂ.9ರ ಈ ಪಂದ್ಯಕ್ಕಾಗಿ ವಿಶ್ವ ಕ್ರಿಕೆಟ್‌ ಜಗತ್ತೇ ಕಾತರದಿಂದ ಕಾಯುತ್ತಿತ್ತು. ಏಕೆಂದರೆ ಈ ಪಂದ್ಯದಲ್ಲಿ ಬದ್ಧ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖೀಯಾ ಗಿದ್ದವು. ತೀವ್ರ ಕುತೂಹಲ ಮೂಡಿಸಿದ್ದ ಈ ಪಂದ್ಯದಲ್ಲಿ ಭಾರತ ಕೇವಲ 119 ರನ್‌ ಬಾರಿಸಿ ಸೋಲಿನ ಭೀತಿ ಅನುಭವಿಸಿತ್ತು. ಆದರೆ ಪಾಕ್‌ ಬ್ಯಾಟರ್‌ಗಳನ್ನು ಭಾರ ತೀಯ ಬೌಲರ್‌ಗಳು ನಿಯಂತ್ರಿಸಿದ್ದರಿಂದ 113 ರನ್‌ ಮಾತ್ರ ಗಳಿಸಿದ ಪಾಕಿಸ್ತಾನ,    6 ರನ್‌ ಸೋಲನುಭವಿಸಿತು.

ನೇಪಾಳ ವಿರುದ್ಧ 1 ರನ್ನಿಂದ ಗೆದ್ದ ದ.ಆಫ್ರಿಕಾ

ಈ ಟೂರ್ನಿಯಲ್ಲಿ ಗ್ರೂಪ್‌ ಹಂತದಲ್ಲಿ ಸೋಲಿಲ್ಲದ ತಂಡವಾಗಿ ಮುಂದುವರೆದಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ದುರ್ಬಲ ನೇಪಾಳ ಚಮಕ್‌ ಕೊಟ್ಟಿತ್ತು. ಕಿಂಗ್ಸ್‌ಟೌನ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 115 ರನ್‌ ಬಾರಿಸಿದ್ದರೆ, ನೇಪಾಳ ಕೂಡ ಗೆಲುವಿಗೆ ತೀರಾ ಸನಿಹಕ್ಕೆ ಬಂದು ಹರಿಣಗಳ ಎದೆಬಡಿತ ಹೆಚ್ಚಿಸಿತ್ತು. ಆದರೆ ನೇಪಾಳಕ್ಕೆ ಮೊದಲ ಗೆಲುವು ಸಿಗಲಿಲ್ಲ. ಅಂತಿಮವಾಗಿ ರೋಚಕ 1 ರನ್‌ನಿಂದ ನೇಪಾಳ ಸೋಲೊಪ್ಪಿಕೊಂಡಿತು.

ಇಂಗ್ಲೆಂಡ್‌ಗೆ 7 ರನ್‌ ರೋಚಕ ಸೋಲು

ಸೇಂಟ್‌ ಲೂಸಿಯಾದಲ್ಲಿ ನಡೆದಿದ್ದ ಈ ಸೂಪರ್‌ 8 ಗ್ರೂಪ್‌-2ರ ಪಂದ್ಯದಲ್ಲ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ ಮಧ್ಯೆ ಜಿದ್ದಾಜಿದ್ದಿ ಕದನ ಏರ್ಪಟ್ಟಿತು. ದಕ್ಷಿಣ ಆಫ್ರಿಕಾ 163 ರನ್‌ ಬಾರಿಸಿದ್ದರೆ, ಇಂಗ್ಲೆಂಡ್‌ ಕೂಡ ಗೆಲುವಿಗೆ ಹತ್ತಿರವಾಗಿತ್ತು. ಆದರೆ ಅಂತಿಮ ಓವರ್‌ನಲ್ಲಿ ಹ್ಯಾರಿ ಬ್ರೂಕ್‌ ಔಟಾಗಿದ್ದರಿಂದ 156 ರನ್‌ ಬಾರಿಸಿದ್ದ ಜೋಸ್‌ ಬಟ್ಲರ್‌ ಪಡೆ ಕೇವಲ 7 ರನ್‌ನಿಂದ ಪಂದ್ಯ ಕೈಚೆಲ್ಲಿತ್ತು.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.