Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

78 ಮಾದರಿಗಳಲ್ಲಿ 18 ಸೇವನೆಗೆ ಯೋಗ್ಯವಲ್ಲ ಎಂಬ ವರದಿ

Team Udayavani, Jul 1, 2024, 7:40 AM IST

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

ಬೆಂಗಳೂರು: ಆಹಾರ ಸುರಕ್ಷೆ ಹಾಗೂ ಗುಣಮಟ್ಟದ ಇಲಾಖೆ ಪರೀಕ್ಷೆ ಒಳಪಡಿಸಲಾದ ಪಾನಿಪುರಿ(Pani puri) ಮಾದರಿಯ ವರದಿಯಲ್ಲಿ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಸೋಮವಾರ ಸಭೆ ನಡೆಸಿ ಅಸುರಕ್ಷಿತ ಪಾನಿಪೂರಿ ಮಾರಾಟವನ್ನು ನಿಷೇಧಿಸುವ ಸಾಧ್ಯತೆಗಳಿವೆ. ಪಾನಿಪೂರಿ(Pani puri) ತಯಾರಿಗೆ ಬಳಸುವ ಸಾಸ್‌ ನಿಷೇಧಕ್ಕೆ ಒಳಪಡುವ ಸಾಧ್ಯತೆಯಂತೂ ದಟ್ಟವಾಗಿದೆ.

ಆಹಾರ ಮತ್ತು ಸುರಕ್ಷೆ ಗುಣಮಟ್ಟ ಇಲಾಖೆ ರಾಜ್ಯಾದ್ಯಂತ 78 ಪಾನಿಪುರಿಯ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿತ್ತು. ಅವುಗಳಲ್ಲಿ 18 ಮಾದರಿಗಳು ಮನುಷ್ಯರು ಸೇವಿಸಲು ಅಯೋಗ್ಯ ಎಂಬ ವರದಿ ಇಲಾಖೆಯ ಅಧಿಕಾರಿಗಳ ಕೈ ಸೇರಿಸಿದೆ.

ಹೀಗಾಗಿ ಈ ಸಂಬಂಧ ಸೋಮವಾರ ನಡೆಸುವ ಸಭೆಯಲ್ಲಿ ಈ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಪಾನಿಪೂರಿ ಹಾಗೂ ಮಸಾಲಪೂರಿಯಲ್ಲಿ ರುಚಿ ಹೆಚ್ಚಿಸುವ ಖಟ್ಟಾ-ಮೀಠಾ ಸಾಸ್‌ನಲ್ಲಿ ಆರೋಗ್ಯಕ್ಕೆ ಹಾನಿಕರವಾದ ಕೆಮಿಕಲ್‌ ಇರುವುದು ವರದಿಯಾಗಿದೆ. ಇದರಲ್ಲಿ ಕೃತಕ ಬಣ್ಣ ಬಳಕೆಯಾಗುತ್ತಿದೆ. ಇದರ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಇನ್ನು ಪೂರಿಯ ಮಾದರಿಗಳು ಮೈಕ್ರೋ ಬ್ಯಾಕ್ಟೀರಿಯ ಪರೀಕ್ಷೆ ಒಳಪಡಿಸಿದ್ದು, ಇದರಲ್ಲಿ ಯಾವುದೇ ಬ್ಯಾಕ್ಟೀರಿಯಾ ಇರುವ ವರದಿಯಾಗಿಲ್ಲ ಎಂದು ತಿಳಿದುಬಂದಿದೆ.

ವಿಶೇಷವಾಗಿ ಕೃತಕ ಬಣ್ಣಕ್ಕೆ ಬಳಕೆಯಾಗುವ “ಸನ್‌ಸೆಟ್‌ ಯಲ್ಲೋ’ ಅಂಶವು ಚಿಕ್ಕ ಮಕ್ಕಳ ಜೀರ್ಣಾಂಗದ ಮೇಲೆ ಪರಿಣಾಮ ಬೀರಿ, ಹೈಪರ್‌ ಆಕ್ವೀವ್‌ನೆಸ್‌ಗೆ ಕಾರಣವಾಗುತ್ತದೆ. ದೊಡ್ಡವರ ಆರೋಗ್ಯದ ಮೇಲೆಯೂ ನೇರವಾದ ದುಷ್ಪರಿಣಾಮ ಬೀರಲಿದೆ.

ಟಾಪ್ ನ್ಯೂಸ್

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

Karnataka ಗ್ರಾಮಗಳಲ್ಲಿ 100 ಕಟ್ಟೆ ಪಂಚಾಯತ್‌ಗೆ ಅಸ್ತು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.