Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

ಮಾಣಿ: ಮರ ಬಿದ್ದು ವಿದ್ಯುತ್‌ ಕಂಬಗಳಿಗೆ ಹಾನಿ

Team Udayavani, Jul 1, 2024, 1:37 AM IST

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

ಮಂಗಳೂರು: ಮುಂಗಾರು ಕ್ಷೀಣಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಬಿರುಸು ಕಡಿಮೆಯಾಗಿದೆ. ಮಂಗಳೂರು ಸಹಿತ ಜಿಲ್ಲಾದ್ಯಂತ ರವಿವಾರ ಸಾಧಾರಣ ಮಳೆಯಾಗಿದೆ.

ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜು.1ರಿಂದ ಜು.3ರ ವರೆಗೆ ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಈ ವೇಳೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮಂಗಳೂರಿನಲ್ಲಿ ರವಿವಾರ 27.4 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಕಡಿಮೆ ಮತ್ತು 24.3 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.7 ಡಿ.ಸೆ. ಏರಿಕೆ ಕಂಡಿತ್ತು.

ಕಾಳಜಿ ಕೇಂದ್ರದಲ್ಲಿ 23 ಮಂದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 23 ಮಂದಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಮಂಗಳೂರಿನ ಪಂಜಿಮೊಗರು ವಾರ್ಡ್‌ ಸಂಭವನೀಯ ಗುಡ್ಡ ಕುಸಿತ ಆಗುವಂತಹ ಮನೆ ಮಂದಿಗೆ ಉಳಿದುಕೊಳ್ಳಲು ಆಶ್ರಯ ಕೇಂದ್ರವನ್ನು ತೆರೆದಿದ್ದು, ನಾಲ್ಕು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ವಿಪತ್ತು ವಿಕೋಪದಿಂದ ಎಪ್ರಿಲ್‌ನಿಂದ ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 9 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. 8 ಮನೆಗೆ ಸಂಪೂರ್ಣ ಹಾನಿಯಾಗಿದ್ದು, 30 ಮನೆಗಳಿಗೆ ತೀವ್ರ ಹಾನಿ ಮತ್ತು 202 ಮನೆಗೆ ಭಾಗಶಃ ಹಾನಿಯಾಗಿದೆ. 6 ಪ್ರಾಣಿಗಳು ಸಾವನ್ನಪ್ಪಿದೆ. ಈವರೆಗೆ 2,546 ವಿದ್ಯುತ್‌ ಕಂಬ, 45 ಟ್ರಾನ್ಸ್‌ಫಾರ್ಮರ್‌, 127 ಕಿ.ಮೀ. ವಿದ್ಯುತ್‌ ತಂತಿ, 5.67 ಕಿ.ಮೀ. ಜಿಲ್ಲಾ ರಸ್ತೆ, 0.51 ಕಿ.ಮೀ. ರಾಜ್ಯ ರಸ್ತೆಗೆ ಹಾನಿ ಉಂಟಾಗಿದೆ.

ಬರೆ ಕುಸಿದು ಮನೆ ಅಪಾಯದಲ್ಲಿ
ಸುಳ್ಯ: ಬೆಳ್ಳಾರೆಯ ನವಗ್ರಾಮದಲ್ಲಿ ರವಿವಾರ ಬರೆ ಕುಸಿದು ಮನೆಯೊಂದು ಅಪಾಯ ದಲ್ಲಿದೆ. ಜಯರಾಮ ಉಮಿಕ್ಕಳ ಎಂಬವರ ಮನೆ ಇದಾಗಿದ್ದು, ಮಣ್ಣು ಜರಿದು ರಸ್ತೆಗೆ ಬಿದ್ದ ಪರಿಣಾಮ ಮನೆಗೆ ಹೋಗುವ ದಾರಿಯೂ ಮುಚ್ಚಿದೆ.

ಮಾಣಿ: ಮರ ಬಿದ್ದು ವಿದ್ಯುತ್‌ ಕಂಬಗಳಿಗೆ ಹಾನಿ
ಬಂಟ್ವಾಳ: ಮಾಣಿ ಜಂಕ್ಷನ್‌ನ ಪುತ್ತೂರು ಸಂಪರ್ಕ ರಸ್ತೆಯ ಬದಿಯಲ್ಲಿದ್ದ ಅರ್ಧ ಕಡಿದು ಬಿದ್ದಿದ್ದ ಬೃಹತ್‌ ಗಾತ್ರದ ಮರವೊಂದು ಬಿದ್ದು, 5-6 ವಿದ್ಯುತ್‌ ಕಂಬಗಳು ಹಾಗೂ ಕೋಳಿ ಶೆಡ್ಡೊಂದು ಹಾನಿಗೀಡಾದ ಘಟನೆ ರವಿವಾರ ಬೆಳಗ್ಗೆ 10.15ರ ಸುಮಾರಿಗೆ ಸಂಭವಿಸಿದೆ.

ಮೆಸ್ಕಾಂ ಸಿಬಂದಿ ವಿದ್ಯುತ್‌ ಕಂಬಗಳನ್ನು ಸರಿಪಡಿಸಿ ತಂತಿಗಳನ್ನು ಜೋಡಿಸಿದರು. ಘಟನೆ ನಡೆದಿರುವ ಸ್ಥಳವು ಜನನಿಬಿಡ ವಾಗಿದ್ದು, ಮರ ರಸ್ತೆಗೆ ಅಥವಾ ಪುಟ್‌ಪಾತ್‌ ಮೇಲೆ ಬಿದ್ದಿದ್ದರೆ ಹೆಚ್ಚು ಅಪಾಯವಾಗುವ ಸಾಧ್ಯತೆಯೂ ಇತ್ತು. ವಿದ್ಯುತ್‌ ತಂತಿಗಳು ಎಳೆದುಕೊಂಡು ಹೋಗುವ ರಭಸಕ್ಕೆ ಸ್ಥಳೀಯ ಅಂಗಡಿಯವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎನ್ನಲಾಗಿದೆ.

ಹಲವು ಸಮಯಗಳ ಹಿಂದೆಯೇ ಮರದ ಅರ್ಧ ಭಾಗವನ್ನು ಕಡಿಯಲಾಗಿತ್ತು. ಅದರ ಪಕ್ಕದಲ್ಲೇ ಸಾಕಷ್ಟು ವಿದ್ಯುತ್‌ ತಂತಿಗಳು ಹಾದುಹೋಗಿದ್ದವು. ಮರ ಅಪಾಯಕಾರಿಯಾಗಿದ್ದರಿಂದ ಅದನ್ನು ತೆರವು ಮಾಡಲೂ ಆಗ್ರಹಿಸಿದ್ದೆವು. ಆದರೂ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಜಾಲ್‌ ಪಲ್ಲಕರೆ: ಕಾಂಕ್ರೀಟ್‌ ತೋಡು ಕುಸಿತ
ಮಂಗಳೂರು: ಬಜಾಲ್‌ ಪಲ್ಲಕೆರೆ ಎಂಬಲ್ಲಿ ಲೇಔಟ್‌ ಒಂದರ ಕಾಂಕ್ರೀಟ್‌ ತೋಡು ಕುಸಿದು ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಹಾನಿಯಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ರವಿವಾರ ಮಧ್ಯಾಹ್ನ 2.45- 3 ಗಂಟೆ ವೇಳೆಗೆ ಘಟನೆ ನಡೆದಿದ್ದು, ಲೇಔಟ್‌ನಲ್ಲಿ ಹಿಟಾಚಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಂಕ್ರೀಟ್‌ನಿಂದ ಮಾಡಿದ ಸುಮಾರು 30-40 ಮೀ. ಉದ್ದದ ತೋಡು ಕುಸಿದಿದೆ. ಈ ವೇಳೆ ಅಲ್ಲೇ ಮರಗಳು ತೋಡು ಹಾಗೂ ಮಣ್ಣು ಜರಿದು ಮನೆ ಮೇಲೆ ಬೀಳದಂತೆ ತಡೆದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ. ಮನೆಯಲ್ಲಿ ದಂಪತಿ, ಇಬ್ಬರು ಮಕ್ಕಳನ್ನು ಒಳಗೊಂಡ ಕಾರ್ಮಿಕ ಕುಟುಂಬವೊಂದು ಬಾಡಿಗೆಗೆ ವಾಸವಾಗಿತ್ತು.

ಲೇಔಟ್‌ಗೆ ಸಂಬಂಧಿಸಿದವರೇ ಪಕ್ಕದ ಮಹಾದೇವಿ ನಗರಕ್ಕೆ ಮನೆಯವರನ್ನು ಸ್ಥಳಾಂತರಿಸಿದ್ದು, ಕುಸಿದ ಸ್ಥಳವನ್ನು ದುರಸ್ತಿ ಮಾಡುವ ಭರವಸೆ ನೀಡಿದ್ದಾರೆ. ಸ್ಥಳಕ್ಕೆ ಸ್ಥಳೀಯ ಮನಪಾ ಸದಸ್ಯ ಅಶ್ರಫ್‌ ಬಜಾಲ್‌, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

ಉಡುಪಿ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ
ಉಡುಪಿ: ಜಿಲ್ಲೆಯಲ್ಲಿ ರವಿವಾರ ಬೆಳಗ್ಗೆ ಮತ್ತು ಸಂಜೆಯ ವೇಳೆ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದೆ.

ಉಡುಪಿ-ಮಣಿಪಾಲ ಪರಿಸರದಲ್ಲಿ ಬೆಳಗ್ಗೆ ಮತ್ತು ಸಂಜೆ ಉತ್ತಮ ಮಳೆ ಸುರಿದಿದೆ. ಕೆಲವು ದಿನಗಳ ಬಳಿಕ ಸಿಡಿಲಿನ ಆರ್ಭಟವೂ ಜೋರಾಗಿತ್ತು. ಸ್ವಲ್ಪ ಸಮಯ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತ್ತು. ಯಾವುದೇ ನಷ್ಟ ಉಂಟಾದ ಬಗ್ಗೆ ವರದಿಯಾಗಿಲ್ಲ.

ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ರಭಸವಾಗಿ ಗಾಳಿ ಬೀಸಿದ್ದರಿಂದ ಮರಗಳು ಉರುಳಿ ಬಿದ್ದಿವೆ. ಬಸ್ರೂರಿನಲ್ಲಿ ಮರ ಬಿದ್ದು ಸುಮಾರು ಒಂದು ಗಂಟೆ ಅವಧಿ ಟ್ರಾಫಿಕ್‌ ಜಾಮ್‌ ಸಂಭವಿಸಿತು.

ಕಡಲಬ್ಬರ
ಕರಾವಳಿಯಾದ್ಯಂತ ರವಿವಾರವೂ ಕಡಲು ಅಬ್ಬರದಿಂದ ಕೂಡಿತ್ತು. ಬೃಹತ್‌ ಅಲೆಗಳು ಕಿನಾರೆಗೆ ಅಪ್ಪಳಿಸುತ್ತಿದ್ದುದರಿಂದ ಪಣಂಬೂರು, ಮಲ್ಪೆ, ಪಡುಬಿದ್ರಿ, ತ್ರಾಸಿ ಮೊದಲಾದೆಡೆ ಪ್ರವಾಸಿಗರು ಕಡಲಿಗೆ ಇಳಿಯದಂತೆ ಎಚ್ಚರಿಕೆ ವಹಿಸಲಾಗಿತ್ತು.

ಟಾಪ್ ನ್ಯೂಸ್

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.