ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?

ವಸಾಹತುಶಾಹಿ ಬ್ರಿಟಿಷ್‌ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ತಿಲಾಂಜಲಿ

Team Udayavani, Jul 1, 2024, 6:47 AM IST

ಇಂದಿನಿಂದ 3 ದೇಸಿ ಕಾನೂನು ಜಾರಿ

ಹೊಸದಿಲ್ಲಿ: ವಸಹಾತುಶಾಹಿಯ ಪಳೆಯುಳಿಕೆಯಂತಿದ್ದ ಮೂರು ಕ್ರಿಮಿನಲ್‌ ಕಾಯ್ದೆಗಳಿಗೆ ಬದಲಾವಣೆ ತಂದು ಪರಿಚಯಿಸ ಲಾದ ಹೊಸ ಕಾನೂನುಗಳು ಸೋಮವಾರದಿಂದ ದೇಶಾದ್ಯಂತ ಜಾರಿಯಾಗಲಿವೆ.

ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಬದಲಿಗೆ ಭಾರ ತೀಯ ನ್ಯಾಯ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರ ತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಸಾಕ್ಷ್ಯ ಕಾಯ್ದೆಯ ಬದಲಿಗೆ ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಗೆ ಬರಲಿವೆ.

ಈ ಮೊದಲು ಜಾರಿಯಲ್ಲಿದ್ದ ಕ್ರಿಮಿನಲ್‌ ಕಾನೂನುಗಳು ಬ್ರಿಟಿಷ್‌ ಕಾಲದವುಗಳಾಗಿದ್ದವು. ಇವುಗಳಲ್ಲಿ ವಸಾಹಾತುಶಾಹಿ ಮನಃಸ್ಥಿತಿ ತುಂಬಿತ್ತು ಎಂಬ ಕಾರಣಕ್ಕೆ ಹಾಗೂ ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸಬೇಕು ಎಂಬ ಉದ್ದೇಶ ದಿಂದ ಹೊಸ ಕಾನೂನುಗಳನ್ನು ರಚನೆ ಮಾಡ ಲಾಗಿತ್ತು. ಯಾವುದೇ ಠಾಣೆಯಲ್ಲಿ ಎಫ್ಐಆರ್‌ ರಚನೆ ಮಾಡಬಹುದಾದ ಅವಕಾಶ (ಜೀರೋ ಎಫ್ಐಆರ್‌), ಅಪರಾಧ ಪ್ರಕರಣಗಳಲ್ಲಿ ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ, ಆನ್‌ಲೈನ್‌ನಲ್ಲಿ ದೂರು ದಾಖಲು, ಎಸ್‌ಎಂಎಸ್‌ ಮೂಲಕ ಎಲೆಕ್ಟ್ರಾನಿಕ್‌ ಸಮನ್ಸ್‌ ಮುಂತಾದ ಅವಕಾಶಗಳನ್ನು ಈ ಹೊಸ ಕಾನೂನುಗಳು ನೀಡುತ್ತವೆ.

45 ದಿನಗಳಲ್ಲಿ ಶಿಕ್ಷೆ ಘೋಷಣೆ
ವಿಚಾರಣೆ ಮುಗಿದ 45 ದಿನಗಳ ಒಳಗೆ ಅಪರಾಧಿಗಳಿಗೆ ಶಿಕ್ಷೆ ಘೋಷಣೆ ಮಾಡಬೇಕು. ಅಲ್ಲದೆ ಮೊದಲ ವಿಚಾರಣೆ ನಡೆದ 60 ದಿನಗಳ ಒಳಗೆ ಆರೋಪಗಳನ್ನು ಪಟ್ಟಿ ಮಾಡಬೇಕು ಎಂಬುದನ್ನು ಹೊಸ ಕಾನೂನುಗಳಲ್ಲಿ ಸೇರ್ಪಡೆ ಮಾಡಲಾಗಿದೆ. ಇದು ತ್ವರಿತ ನ್ಯಾಯದಾನಕ್ಕೆ ಸಹಾಯಕವಾಗಲಿದೆ. ಜತೆಗೆ ಅತ್ಯಾಚಾರಕ್ಕೆ ತುತ್ತಾದ ಮಹಿಳೆಯ ಹೇಳಿಕೆಯನ್ನು ಮಹಿಳಾ ಪೊಲೀಸರೇ ದಾಖಲಿಸಬೇಕು ಎಂಬುದನ್ನು ಇದರಲ್ಲಿ ಸೇರಿಸಲಾಗಿದೆ. ಐಪಿಸಿಯಲ್ಲಿ ದಾಖಲಾದ ಅಪರಾಧಗಳಾದ ಮದುವೆಯಾಗುವುದಾಗಿ ಸುಳ್ಳು ಭರವಸೆ, ಅಪ್ರಾಪ್ತ ವಯಸ್ಸಿನವರ ಮೇಲೆ ಸಾಮೂಹಿಕ ಅತ್ಯಾಚಾರ, ಗುಂಪುಹಲ್ಲೆ ಮತ್ತು ಸರಗಳ್ಳತನಗಳನ್ನು ಅಪರಾಧಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.

ಮೂರು ಹೊಸ ಕಾನೂನುಗಳನ್ನು ಜಾರಿ ಮಾಡಲು ಕೇಂದ್ರ ಸರಕಾರ ಭರದ ಸಿದ್ಧತೆಗಳನ್ನು ಕೈಗೊಂಡಿದೆ. ಎನ್‌ಸಿಆರ್‌ಬಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತರಬೇತಿಯನ್ನು ನೀಡಲಾಗಿದೆ. ಸಹಾಯಕ ತಂಡಗಳು ಮತ್ತು ಕಾಲ್‌ ಸೆಂಟರ್‌ಗಳನ್ನು ತೆರೆಯಲಾಗಿದೆ. ದೇಶದ 17,500ಕ್ಕೂ ಹೆಚ್ಚು ಪೊಲೀಸ್‌ ಠಾಣೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಏನಿತ್ತು? ಏನಾಯಿತು?
-ಭಾರತೀಯ ದಂಡ ಸಂಹಿತೆ – ಭಾರತೀಯ ನ್ಯಾಯ ಸಂಹಿತೆ
-ಅಪರಾಧ ಪ್ರಕ್ರಿಯಾ ಸಂಹಿತೆ – ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ
-ಸಾಕ್ಷ್ಯ ಕಾಯ್ದೆ – ಭಾರತೀಯ ಸಾಕ್ಷ್ಯ ಅಧಿನಿಯಮ

ಏನೆಲ್ಲ ಹೊಸತು?
-ಶೂನ್ಯ ಎಫ್ಐಆರ್‌
-ಕಡ್ಡಾಯ ವೀಡಿಯೋ ಚಿತ್ರೀಕರಣ
-ಆನ್‌ಲೈನ್‌ ಮೂಲಕ ದೂರು ದಾಖಲು
-ಎಸ್‌ಎಂಎಸ್‌ ಮೂಲಕ ಸಮನ್ಸ್‌
-45 ದಿನಗಳ ಒಳಗೆ ಶಿಕ್ಷೆ ಘೋಷಣೆ
-60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಕೆ

ಟಾಪ್ ನ್ಯೂಸ್

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

1-bhole-baba

America ಶ್ವೇತ ಭವನದಂತಿದೆ ಭೋಲೆ ಬಾಬಾ ಭವ್ಯ ಆಶ್ರಮ

Exam

6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!

jairam 2

Election; ದಿಲ್ಲಿ, ಹರಿಯಾಣ ಚುನಾವಣೆಯಲ್ಲಿ ಆಪ್‌ ಜತೆಗಿಲ್ಲ ಮೈತ್ರಿ: ಕಾಂಗ್ರೆಸ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.