Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!


Team Udayavani, Jul 1, 2024, 10:10 AM IST

2

ಬೆಂಗಳೂರು: ರಾಜ್ಯದಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಒಂದೆಡೆ ಡೆಂಘೀ ಪ್ರಕರಣಗಳಲ್ಲಿ ಗಣನೀಯ ವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲಿಯೇ, ಸದ್ದಿಲ್ಲದೇ ಮಕ್ಕಳಲ್ಲಿ ಫ‌ೂಟ್‌- ಮೌತ್‌ ಆ್ಯಂಡ್‌ ಹ್ಯಾಂಡ್‌ ಡಿಸೀಸ್‌ (ಕಾಲು ಬಾಯಿ ರೋಗ) ಏರಿಕೆಯಾಗುತ್ತಿದೆ.

ಫ‌ೂಟ್‌ ಆ್ಯಂಡ್‌ ಮೌತ್‌ ಡಿಸೀಸ್‌ ಸಾಮಾನ್ಯವಾಗಿ 10 ವರ್ಷದ ಒಳಗಿನ ಮಕ್ಕಳಲ್ಲಿ ಸೋಂಕು ದೃಢವಾಗುತ್ತಿದೆ. ಇದು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಕಾಕ್ಸ್‌ಸಾಕಿ ವೈರಸ್‌ ದೇಹ ಸೇರುವುದರಿಂದ ಸೋಂಕು ದೃಢವಾಗುತ್ತದೆ. ಇದು ಲಾಲಾರಸ, ಮಲ, ಉಸಿರಾಟದ ಹಾಗೂ ಸೋಂಕಿತ ಮಗುವಿನ ಸಂಪರ್ಕದ ಮೂಲಕವೂ ಕಾಲು ಬಾಯಿ ರೋಗ ಹರಡಬಹುದಾಗಿದೆ. ಅತ್ಯಂತ ಸುಲುಭವಾಗಿ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಹರಡುತ್ತದೆ. ಕಳೆದ ಒಂದು ವಾರದಿಂದ ಬೆಂಗಳೂರು ಸೇರಿ ದಂತೆ ಇತರೆ ಜಿಲ್ಲೆಗಳ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗೆ ಬರುವ 20 ಜ್ವರದ ಪ್ರಕರಣದಲ್ಲಿ 12 ಪ್ರಕರಣಗಳು ಕಾಲುಬಾಯಿ ರೋಗಕ್ಕೆ ಸಂಬಂಧಿಸಿದೆ. ಈ ಸಂಖ್ಯೆ ಮುಂದಿನ ದಿನದಲ್ಲಿ ಹೆಚ್ಚಾಗುವ ಸಾಧ್ಯತೆಗಳಿವೆ. 10 ವರ್ಷದೊಳಗಿನ ಮಕ್ಕಳಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ. 10 ವರ್ಷ ಮೇಲ್ಪಟ್ಟವರಲ್ಲಿ ಈ ವೈರಸ್‌ ತೀವ್ರತೆ ಪ್ರಮಾಣ ತುಂಬಾ ಕಡಿಮೆ ಇರಲಿದೆ. ಕೆಲವೊಂದು ಶಾಲೆಗಳಲ್ಲಿ ಕಾಲು ಬಾಯಿ ರೋಗವಿದ್ದ ಮಕ್ಕ ಳನ್ನು ಶಾಲೆಗೆ ಕಳುಹಿಸದಂತೆ ಪೋಷಕರಿಗೆ ಶಾಲಾ ಶಿಕ್ಷಕರು ಮನವಿ ಮಾಡಿದ್ದಾರೆ. ಕಾಲು ಬಾಯಿ ರೋಗವು ಮಾರಣಾಂತಿಕ ವಲ್ಲ ದಿದ್ದರೂ, ಪೋಷಕರು ಎಚ್ಚರಿಕೆ ವಹಿಸಬೇಕು. ಸೋಂಕು ಸೌಮ್ಯವಾಗಿದೆ. ಆದರೆ, ಹೆಚ್ಚು ವೇಗವಾಗಿ ಹರಡುತ್ತದೆ. ಮಕ್ಕಳಲ್ಲಿ ರೋಗಕ್ಕೆ ಕಾರಣವಾಗುವ ವೈರಸ್‌ಗಳ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿಯಿಲ್ಲದ ಕಾರಣದಿಂದ ಮಕ್ಕಳು ಸಾಮಾನ್ಯವಾಗಿ ಸೋಂಕು ಹೆಚ್ಚಾಗಿ ಕಂಡು ಬರುತ್ತದೆ. 5 ವರ್ಷ ದೊಳಗಿನ ಮಕ್ಕಳಲ್ಲಿ ಅಪರೂಪದ ಪ್ರಕರಣದಲ್ಲಿ ಕೆಲವೊಬ್ಬರು ಮೆದುಳು ಸೋಂಕು ಹಾಗೂ ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳಲಿದೆ ಎನ್ನುತ್ತಾರೆ ವೈದ್ಯರು.

ಸೋಂಕಿನ ಲಕ್ಷಣಗಳೇನು?: ಫ‌ೂಟ್‌ ಆ್ಯಂಡ್‌ ಮೌತ್‌ ಡಿಸೀಸ್‌ಗೆ ದೃಢವಾಗುವ ಮಕ್ಕಳಲ್ಲಿ ಪ್ರಾರಂ ಭದ 2 ದಿನಗಳ ಕಾಲ ತೀವ್ರ ಜ್ವರ ಇರಲಿದೆ. ಜತೆಗೆ ಬಾಯಿ ಹೊರ ಹಾಗೂ ಒಳಭಾಗದಲ್ಲಿ ಹುಣ್ಣುಗಳು, ಕೈ-ಕಾಲು-ಪಾದ, ಪೃಷ್ಟದ ಮೇಲೆ ಕೆಂಪು ಬಣ್ಣದ ಕೀವಿನಿಂದ ಕೂಡಿದ ದದ್ದುಗಳು, ನೋವು ಹಾಗೂ ತುರಿಕೆ ಸಹ ಇರಲಿದೆ. ಇದು ಗುಣಮುಖವಾಗಲು ಸುಮಾರು 5ರಿಂದ 10ದಿನಗಳು ಬೇಕಾಗುತ್ತದೆ. ಮುನ್ನೆಚ್ಚರಿಕೆ ಅಗತ್ಯ: ಕಾಲ ಬಾಯಿ ರೋಗಕ್ಕೆ ತುತ್ತಾದ ಮಕ್ಕಳನ್ನು ಗುಣಮುಖರಾಗುವ ವರೆಗೆ ಶಾಲೆಗೆ ಕಳುಹಿಸಬಾರದು. ಕೈ ಸ್ವತ್ಛತೆಗೆ ಗಮನ, ಸೋಂಕಿತರಿಂದ ದೂರ ಉಳಿಯಬೇಕು. ಉಪ್ಪು, ಖಾರ, ಮಸಾಲೆ ಪದಾರ್ಥ ನೀಡಲೇಬಾರದು.

ಈ ವೈರಸ್‌ ಹೇಗೆ ಹರಡುತ್ತದೆ?:

 ಬಾಯಿಯ ಲಾಲಾರಸ

ಗುಳ್ಳೆಗಳು

 ಮಲ

 ಕೆಮ್ಮು

 ಸೀನು

ಲಕ್ಷಣಗಳೇನು?:

 ತೀವ್ರ ಜ್ವರ

 ಕೆಂಪು ಬಣ್ಣದ ಕೀವಿನಿಂದ ಕೂಡಿದದದ್ದು

 ಮೈ ಕೈ ನೋವು

 ಬಾಯಿ ಒಳಗೆ ಹೊರಗೆ ಹುಣ್ಣು

ಫ‌ೂಟ್‌, ಮೌತ್‌ ಆ್ಯಂಡ್‌ ಡಿಸೀಸ್‌ ಸಾಮಾನ್ಯವಾಗಿ ಮಕ್ಕಳಲ್ಲಿ ಕಂಡು ಬರುತ್ತಿದೆ. ಇದಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇಲ್ಲ.ಆದರೆ, ನಿರಂತರವಾಗಿ ಕೈ ಸ್ವತ್ಛತೆ ಹಾಗೂ ಸೋಂಕಿತ ಮಕ್ಕಳಿಂದ ದೂರ ಇದ್ದರೆ ರೋಗವನ್ನು ತಡೆಗಟ್ಟ ಬಹುದು. ●ಡಾ.ರಂದೀಪ, ಆಯುಕ್ತರು ಆರೋಗ್ಯ ಇಲಾಖೆ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

6-bng

ನಿಯಮಗಳ ಉಲ್ಲಂಘನೆ, ಹೈಬೀಮ್‌ ಲೈಟ್‌ಗಳ ಬಳಕೆ: 5.79 ಲಕ್ಷ ದಂಡ

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.