Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ


Team Udayavani, Jul 1, 2024, 10:20 AM IST

3

ಕನಕಪುರ: ದೋಷ ಪರಿಹಾರ ಮಾಡಿಕೊಡುವುದಾಗಿ ನಂಬಿಸಿ ಬುಡುಬುಡಿಕೆ ವೇಷಧಾರಿಗಳು 2.4 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಪಡೆದು ವಂಚನೆ ಮಾಡಿ ಪರಾರಿ ಆಗಿರುವ ಘಟನೆ ಸಾತನೂರು ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ಸಾತನೂರಿನ ಆಂಜನೇಯ ದೇವ ಸ್ಥಾನದ ರಸ್ತೆ ನಿವಾಸಿ ಕೆಂಪರಾಜಮ್ಮ ವಂಚನೆಗೊಳಗಾದ ಮಹಿಳೆ. ಕಳೆದ ಶುಕ್ರವಾರ ಕೆಂಪರಾಜಮ್ಮ ಅವರ ಮನೆ ಬಳಿ ಬಂದ ಇಬ್ಬರು ಬುಡಬುಡುಕೆ ವೇಷಧಾರಿಗಳು, “ನಿಮ್ಮ ಮನೆಯಲ್ಲಿ ನಿಮ್ಮ ಗಂಡ ಮತ್ತು ಮಗಳು ಇಬ್ಬರು ಒಂದು ವಾರದಲ್ಲಿ ಸಾವನ್ನಪ್ಪುತ್ತಾರೆ’ ಎಂದು ಹೆದರಿಸಿದ್ದಾರೆ.

ಬಳಿಕ ಅದಕ್ಕೆ ನಾವೇ ಪರಿಹಾರ ಮಾಡಿಕೊಡುತ್ತೇವೆ ಎಂದು ಹೇಳಿ 2 ಸಾವಿರ ರೂ. ಪಡೆದು ಮನೆ ಬಳಿ ಪೂಜೆ ಮಾಡಿದ್ದಾರೆ. ನಂತರ ಈ ಮನೆಯಲ್ಲಿ ದೋಷವಿದೆ. ಹೀಗಾಗಿ ನಿಮ್ಮ ಮಗಳಿಗೆ ವಿವಾಹವಾಗಿಲ್ಲ. ದೋಷ ಪರಿಹಾರವಾಗಬೇಕಾದರೆ ಪೂಜೆ ಮಾಡಬೇಕು. 28 ಸಾವಿರ ರೂ. ಕೊಟ್ಟರೆ ಅದನ್ನು ನಾವು ಪರಿಹರಿಸಿಕೊಡುತ್ತೇವೆ ಎಂದು ನಂಬಿಸಿದ್ದಾರೆ. ಬಳಿಕ ಅವರ ಹಣೆಗೆ ಭಸ್ಮ ಹಚ್ಚಿ ನೀವು ಬಳಸುವ ಚಿನ್ನಾಭರಣ ಕೊಟ್ಟರೆ ಅದಕ್ಕೆ ನಾವು ಪೂಜೆ ಮಾಡಿ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಮಾಡಿ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ.

ಅದನ್ನು ನಂಬಿದ ಕುಟುಂಬಸ್ಥರು 5 ಗ್ರಾಂ ಉಂಗುರ, 17 ಗ್ರಾಂ ಚೈನ್‌, 13.5 ಗ್ರಾಂ ಕಿವಿ ಓಲೆ ಸೇರಿ ಒಟ್ಟು 2.40 ಲಕ್ಷ ರೂ.ಬೆಲೆ ಬಾಳುವ ಚಿನ್ನಾಭರಣ ವಂಚಕರಿಗೆ ಕೊಟ್ಟಿದ್ದಾರೆ. ಅದನ್ನು ಒಂದು ಮಣ್ಣಿನ ಕುಡಿಕೆಯಲ್ಲಿ ಹಾಕಿ ದಾರ ಸುತ್ತಿ ಮತ್ತು ಪೂಜೆ ಮಾಡಿ ವಾಪಸ್‌ ಕೊಟ್ಟು, ನಾವು ನಾಳೆ ಬರುತ್ತೇವೆ ಇದನ್ನು ಪೂಜೆ ಸಲ್ಲಿಸಿ ತೆಗೆಯಬೇಕು. ಇಲ್ಲದಿದ್ದರೆ ನಿಮ್ಮ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ನಂಬಿಸಿ ಹೊರಭಾಗದಿಂದ ಮನೆ ಬಾಗಿಲನ್ನು ಹಾಕಿಕೊಂಡು ಪರಾರಿಯಾಗಿದ್ದಾರೆ. ಅದನ್ನು ನಂಬಿದ ಕೆಂಪರಾಜಮ್ಮನವರ ಕುಟುಂಬ ವಂಚಕರು ಕೊಟ್ಟ ಮಣ್ಣಿನ ಕುಡಿಕೆಯಲ್ಲಿ ಏನಿದೆ ಎಂದು ನೋಡಿರಲಿಲ್ಲ. ಮರುದಿನ ಬುಡ ಬುಡಕೆ ವೇಷಧಾರಿಗಳು ಮನೆ ಬಳಿ ಬರಲಿಲ್ಲ, ಅನುಮಾನಗೊಂಡು ಕುಡಿಕೆಗೆ ಪೂಜೆ ಸಲ್ಲಿಸಿ ತೆಗೆದು ನೋಡಿದಾಗ ಅದ ರಲ್ಲಿ ಒಡವೆಗಳು ಇರಲಿಲ್ಲ. ಮೋಸ ತಿಳಿದು ಸಾತನೂರು ಠಾಣೆಗೆ ದೂರು ದಾಖಲಿಸಿದ್ದಾರೆ.

 

ಟಾಪ್ ನ್ಯೂಸ್

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

Ramnagar: ಇಯರ್‌ ಫೋನ್‌ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು

Ramnagar: ಇಯರ್‌ ಫೋನ್‌ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.