ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ


Team Udayavani, Jul 1, 2024, 1:02 PM IST

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ರಬಕವಿ-ಬನಹಟ್ಟಿ: ಬನಹಟ್ಟಿಯ ಸದಾಶಿವ ತೇಲಿ ಬಹು ಪ್ರತಿಭೆಯ ಕಲಾವಿದರು. ನಟನೆ, ನಿರ್ದೇಶನ ಭಜನಾ ಹಾಡುಗಾರಿಕೆಯ ಜೊತೆಗೆ ತಾಳ ವಾದನ, ದಮಡಿ, ದಪ್ಪಗಳನ್ನು ನುಡಿಸುವುದರ ಜೊತೆಗೆ ನಮ್ಮಿಂದ ದೂರವಾಗುತ್ತಿರುವ ಕಾಲಪೆಟ್ಟಿಯ ಹಾರ್ಮೋನಿಯಂನ ಬೆರಳೆಣಿಕೆ ಕಲಾವಿದರಾಲ್ಲಿ ಒಬ್ಬರಾಗಿ ಗಮನ ಸೆಳೆದಿದ್ದಾರೆ.

ಕೆಲವು ದಶಕಗಳ ಹಿಂದ ಪಾರಿಜಾತ, ನಾಟಕ, ಸನ್ನಾಟ ಮತ್ತು ಭಜನಾ ಕಾರ್ಯಕ್ರಮಗಳಲ್ಲಿ ಕಾಲಪೆಟ್ಟಿಗೆ ಹಾರ್ಮೋನಿಯಂ ಬಳಸುತ್ತಿದ್ದರು. ಆದರೆ ಇಂದು ಆಧುನಿಕತೆಗೆ ತಕ್ಕಂತೆ ಸಂಗೀತ ಸಾಧನಗಳು ಕೂಡಾ ಬದಲಾಗ ತೊಡಗಿದವು. ಕಾಲಪೆಟ್ಟಿಗೆ ಹಾರ್ಮೋನಿಯಂ ಬದಲಾಗಿ ಹಾರ್ಮೋನಿಯಂ ಗಳನ್ನು ಬಳಸಲಾಗುತ್ತಿತ್ತು. ಈಗ ಹಾರ್ಮೋನಿಯಂಗಳ ಸ್ಥಾನವನ್ನು ಕ್ಯಾಸಿಯೋಗಳು ತುಂಬಿವೆ.

ಕಾಲಪೆಟ್ಟಿಗೆಯ ಹಾರ್ಮೋನಿಯಂ ವಿಶೇಷವಾದ ಸಂಗೀತ ಸಾಧನವಾಗಿದ್ದು, ಎರಡು ಕೈಗಳಿಂದ ಕೀಗಳನ್ನು ಒತ್ತುವುದರ ಜೊತೆಗೆ ಕೆಳಗಡೆ ಇರುವ ಪ್ಯಾಡ್ ಗಳನ್ನು ಕಾಲಿನಿಂದ ತುಳಿಯುತ್ತಿರಬೇಕು. ಶತಮಾನಗಳ ಹಿಂದೆ ಈ ಹಾರ್ಮೋನಿಯಂಗಳನ್ನು ಸಂಕೇಶ್ವರದಲ್ಲಿ ತಯಾರು ಮಾಡುತ್ತಿದ್ದರು. ಜರ್ಮನ್ ಸ್ವರಗಳನ್ನು ಹೊಂದಿರುವ ಕಾಲಪೆಟ್ಟಿಗೆಯ ಹಾರ್ಮೋನಿಯಂಗಳು ಉತ್ತಮ ವಾದವನ್ನು ಹೊರಡಿಸುತ್ತವೆ. ಇದರ ಶಬ್ದ ಜೋರಾಗಿಯೂ ಕೇಳುತ್ತದೆ. ಮೈಕ್ ಗಳು ಇಲ್ಲದೆ ಇರುವ ಸಂದರ್ಭದಲ್ಲಿ ಇವುಗಳನ್ನು ಬಳಸಲಾಗುತ್ತಿತ್ತು ಎನ್ನುತ್ತಾರೆ ಸದಾಶಿವ ತೇಲಿಯವರು.

ಈಗ ಕೇವಲ ಬೆರಣಿಕೆಯಷ್ಟು ಮಾತ್ರ ಕಾಲಪೆಟ್ಟಿಗೆಯ ಕಲಾವಿದರು ಉಳಿದುಕೊಂಡಿದ್ದಾರೆ. ಅವರಲ್ಲಿ ಸದಾಶಿವ ತೇಲಿಯವರು ಒಬ್ಬರು. ನಾಲ್ಕುವರೆ ದಶಕಗಳಿಂದ ಸದಾಶಿವ ತೇಲಿಯವರು ಈ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ.

ಸದಾಶಿವರ ತಂದೆ ಉಳ್ಳಪ್ಪ ಕೂಡಾ ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದರು. ತಂದೆಯಿಂದ ಬಳುವಳಿಯಾಗಿ ಬಂದ ಕಲೆಯನ್ನು ಮುಂದುವರೆಸಿಕೊAಡು ಬಂದಿದ್ದಾರೆ. ಆರವತ್ತರ ಆಸುಪಾಸಿನ ಸದಾಶಿವ ತೇಲಿಯವರು ಕಾಲಪೆಟ್ಟಿಯನ್ನು ಹೊತ್ತುಕೊಂಡೆ ನಾಡಿನ ಸುತ್ತ ಮುತ್ತಲಿನ ಪ್ರಮುಖ ಪ್ರದೇಶಗಳಲ್ಲಿ ಕಲೆಯನ್ನು ಪ್ರದರ್ಶನ ಮಾಡಿದ್ದಾರೆ.

ಈ ನಾಡಿನ ಪ್ರಮುಖ ಪಾರಿಜಾತ ಕಲಾವಿದರಾಗಿದ್ದ ರಾಚಯ್ಯ ಬರಗಿ, ಟಕ್ಕಳಕಿ ವಿಠ್ಠಲರಾವ, ಅಪ್ಪಲಾಲ ನದಾಫ್, ಮಲ್ಲಯ್ಯ ಸ್ವಾಮಿ ಅಥಣಿಯವರ ಪಾರಿಜಾತ ತಂಡಗಳಲ್ಲಿ ನಂತರ ರಬಕವಿ ಬನಹಟ್ಟಿ, ಮುಧೋಳ, ಲೋಕಾಪುರ ಹಾಗೂ ಬೇರೆ ಬೇರೆ ಪಾರಿಜಾತ ಮತ್ತು ನಾಟಕ ಕಂಪನಿಗಳಲ್ಲಿಯೂ ಕಾಲ ಪೆಟ್ಟಿಯ ಕಲಾವಿದರಾಗಿ ಗಮನ ಸೆಳೆದಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಮುಧೋಳ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ರಬಕವಿ ಬನಹಟ್ಟಿ ಜಮಖಂಡಿ, ಜಮಖಂಡಿ, ಅಥಣಿ ತಾಲ್ಲೂಕಿನ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಕರ್ನಾಟಕ ಮಹಾರಾಷ್ಟ್ರದ ಗಡಿ ಭಾಗದ ಅನೇಕ ಕಡೆಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶನ ಮಾಡಿದ್ದಾರೆ.

ಆಸಕ್ತರಿಗೆ ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲೆಯನ್ನು ಕಲಿಸುವುದರ ಜೊತೆಗೆ ಪಾರಿಜಾತ ಹಾಗೂ ಸಾಮಾಜಿಕ ನಾಟಕಗಳನ್ನು ನಿರ್ದೇಶನ ಮಾಡುವುದರ ಮೂಲಕ ನಮ್ಮಿಂದ ದೂರವಾಗುತ್ತಿರುವ ಕಲೆಗೆ ಜೀವಂತಿಕೆಯನ್ನು ನೀಡುತ್ತಾ, ಎಲೆ ಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವ ಸದಾಶಿವ ತೇಲಿಯವರನ್ನು ಕಲಾ ಜಗತ್ತು ಗುರುತಿಸದೆ ಇರುವುದು ಬೇಸರದ ಸಂಗತಿಯಾಗಿದೆ. ಇವರ ಸೇವೆ ಗುರುತಿಸಿ ಗೌರವಿಸಬೇಕಾಗಿದೆ.

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.