Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

ಸಮಸ್ತ ಹಿಂದೂ ಸಮಾಜ ಹಿಂಸಾತ್ಮಕ ಎನ್ನುವುದು ಗಂಭೀರ ವಿಷಯ: ಪ್ರಧಾನಿ ಕಿಡಿ

Team Udayavani, Jul 1, 2024, 5:22 PM IST

1-rahul

ಹೊಸದಿಲ್ಲಿ: ಲೋಕಸಭಾ ಕಲಾಪದಲ್ಲಿ ಸೋಮವಾರ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸುವ ವೇಳೆ ”ತಮ್ಮನ್ನು ತಾವು ಹಿಂದೂ ಎಂದು ಹೇಳಿಕೊಳ್ಳುವವರು ಹಗಲಿರುಳು ಹಿಂಸಾಚಾರ ಮತ್ತು ದ್ವೇಷದಲ್ಲಿ ತೊಡಗಿದ್ದಾರೆ” ಎಂದು ಹೇಳಿಕೆ ನೀಡಿದ್ದು ಕೋಲಾಹಲಕ್ಕೆ ಕಾರಣವಾಗಿದೆ. ಬಿಜೆಪಿ ಸಂಸದರು ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಸಮಸ್ತ ಹಿಂದೂ ಸಮಾಜವನ್ನು ಹಿಂಸಾತ್ಮಕ ಎಂದು ಕರೆಯುವುದು ಗಂಭೀರ ವಿಷಯ ಎಂದು ಪ್ರಧಾನಿ ಮೋದಿ ತಿರುಗೇಟು ನೀಡಿದರು. ರಾಹುಲ್ ಗಾಂಧಿ ಹೇಳಿಕೆ ನೀಡುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ಹೊರ ಹಾಕಿದರು.

ಹೇಳಿಕೆ ಸಮರ್ಥಿಸಿಕೊಂಡ ರಾಹುಲ್ ಗಾಂಧಿ ‘ನಾನು ಬಿಜೆಪಿ ಬಗ್ಗೆ ಮಾತನಾಡುತ್ತಿದ್ದೇನೆ. ಬಿಜೆಪಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅಥವಾ ಮೋದಿ ಇಡೀ ಹಿಂದೂ ಸಮಾಜವಲ್ಲ ಎಂದರು. ರಾಹುಲ್ ಅವರು ಶಿವನ ಚಿತ್ರವನ್ನು ಸಹ ತೋರಿಸಿ, ದೇವರ ಸಂದೇಶವು ನಿರ್ಭಯತೆ ಮತ್ತು ಅಹಿಂಸೆಯ ಬಗ್ಗೆ ಇದೆ. ಇದೇ ವಿಷಯವನ್ನು ತಿಳಿಯಲು ಇತರ ಧರ್ಮಗಳ ಬೋಧನೆಗಳನ್ನು ಸಹ ಉಲ್ಲೇಖಿಸಿದರು.ನಾವು ಎಲ್ಲಾ ಧರ್ಮಗಳು ಧೈರ್ಯದ ಬಗ್ಗೆ ಮಾತನಾಡುತ್ತವೆ, ಇಸ್ಲಾಂ, ಕ್ರಿಶ್ಚಿಯನ್ ಧರ್ಮ, ಬೌದ್ಧ ಧರ್ಮ, ಜೈನ ಮತ್ತು ಸಿಖ್ ಧರ್ಮಗಳನ್ನು ಉಲ್ಲೇಖಿಸಿ ನಿರ್ಭಯತೆಯ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತವೆ ಎಂದರು.

ರಾಹುಲ್ ಗಾಂಧಿಯವರು ಶಿವನ ಚಿತ್ರವನ್ನು ತೋರಿಸಿದ ಬಳಿಕ ಸ್ಪೀಕರ್ ಓಂ ಬಿರ್ಲಾ ಅವರು ‘ಸದನದಲ್ಲಿ ಫಲಕಗಳನ್ನು ಪ್ರದರ್ಶಿಸಲು ನಿಯಮಗಳು ಅನುಮತಿಸುವುದಿಲ್ಲ’ ಎಂದು ನೆನಪಿಪಿಸಿದರು.

ಬಿಜೆಪಿಯು ಸಂವಿಧಾನ ಮತ್ತು ಭಾರತದ ಮೂಲಭೂತ ಕಲ್ಪನೆಯ ಮೇಲೆ ವ್ಯವಸ್ಥಿತ ದಾಳಿಗಳನ್ನು ನಡೆಸುತ್ತಿದೆ ಎಂದು ಆರೋಪಿಸಿ, ಆಡಳಿತ ಪಕ್ಷವು ಪ್ರಸ್ತಾಪಿಸಿದ ವಿಚಾರಗಳನ್ನು ಲಕ್ಷಾಂತರ ಜನರು ವಿರೋಧಿಸಿದ್ದಾರೆ ಎಂದರು.

‘ಪ್ರಧಾನಿ ಮೋದಿಯವರ ಆದೇಶದ ಮೇರೆಗೆ ನನ್ನ ಮೇಲೆ ದಾಳಿ ನಡೆದಿದೆ. ನನ್ನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳು ಹಾಕಲಾಗಿದೆ. ನನ್ನ ಮನೆಯನ್ನು ಕಿತ್ತುಕೊಳ್ಳಲಾಯಿತು, ಇ.ಡಿ. 55 ಗಂಟೆಗಳ ವಿಚಾರಣೆ ನಡೆಸಿತು. ಈ ಸವಾಲುಗಳ ನಡುವೆಯೂ ಸಂವಿಧಾನವನ್ನು ರಕ್ಷಿಸುವ ಸಾಮೂಹಿಕ ಪ್ರಯತ್ನದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ರಾಹುಲ್ ಗಾಂಧಿ ಹೇಳಿದರು.

ನನ್ನ ನಂತರ ಬಿಜೆಪಿಯವರು ಈಗ ‘ಜೈ ಸಂವಿಧಾನ್’ ಎಂದು ಹೇಳುತ್ತಿರುವುದು ಸಂತಸ ತಂದಿದೆ. ವಿರೋಧ ಪಕ್ಷದಲ್ಲಿರುವುದಕ್ಕೆ ನನಗೆ ಸಂತೋಷ ಮತ್ತು ಹೆಮ್ಮೆ ಇದೆ. ನಮಗೆ ಅಧಿಕಾರಕ್ಕಿಂತ ಮಿಗಿಲಾದದ್ದು ಸತ್ಯ,” ಎಂದರು.

‘ಪ್ರಧಾನಿ ನೇರವಾಗಿ ದೇವರೊಂದಿಗೆ ಮಾತನಾಡುತ್ತಾರೆ. ನಾವೆಲ್ಲರೂ ಜೈವಿಕವಾಗಿದ್ದೇವೆ ಆದರೆ ಪ್ರಧಾನಮಂತ್ರಿ ಅವರು ಜೈವಿಕವಲ್ಲದ ಜೀವಿ ಎಂದು ಹೇಳಿಕೊಳ್ಳುತ್ತಾರೆ. ಗಾಂಧಿ ಸತ್ತಿದ್ದಾರೆ ಮತ್ತು ಅವರು ಚಲನಚಿತ್ರದಿಂದ ಪುನರುಜ್ಜೀವನಗೊಂಡಿದ್ದಾರೆ ಎಂದು ಪ್ರಧಾನಿ ಹೇಳಿದರು. ನೀವು ಅಜ್ಞಾನವನ್ನು ಅರ್ಥಮಾಡಿಕೊಳ್ಳಬಹುದೇ? ಗಾಂಧಿ ಸತ್ತಿಲ್ಲ. ಗಾಂಧಿ ಬದುಕಿದ್ದಾರೆ’ ಎಂದು ರಾಹುಲ್ ಕಿಡಿ ಕಾರಿದರು.

ಕ್ಷಮೆಗೆ ಶಾ ಪಟ್ಟು
‘ತಮ್ಮನ್ನು ಹಿಂದೂಗಳೆಂದು ಗುರುತಿಸಿಕೊಳ್ಳುವುದರಲ್ಲಿ ಹೆಮ್ಮೆ ಪಡುವ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರು ಸದನ ಮತ್ತು ದೇಶದ ಕ್ಷಮೆ ಯಾಚಿಸಬೇಕು’ ಎಂದು ಗೃಹ ಸಚಿವ ಅಮಿತ್ ಶಾ ಪಟ್ಟು ಹಿಡಿದರು.

ತುರ್ತು ಪರಿಸ್ಥಿತಿ ಮತ್ತು 1984 ರ ಸಿಖ್ ವಿರೋಧಿ ಗಲಭೆಗಳ ಬಗ್ಗೆ ಮಾತನಾಡಿದ ಶಾ, ಗಾಂಧಿ ಅವರಿಗೆ ತಿರುಗೇಟು ನೀಡಿ ‘ಕಾಂಗ್ರೆಸ್ ದೇಶದಲ್ಲಿ “ಉಗ್ರವಾದ” ಹರಡಿದ್ದು ಅಹಿಂಸೆಯ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ಹಕ್ಕಿಲ್ಲ ಎಂದರು.

ಎಂದಿಗೂ ಹಿಂದೂಗಳನ್ನು ಅವಮಾನಿಸುವುದಿಲ್ಲ
ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರ ‘ಹಿಂದೂ’ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ ‘ನನ್ನ ಸಹೋದರ ಎಂದಿಗೂ ಹಿಂದೂಗಳನ್ನು ಅವಮಾನಿಸುವುದಿಲ್ಲ. ಬಿಜೆಪಿ ಮತ್ತು ಅದರ ನಾಯಕರ ಬಗ್ಗೆ ಸ್ಪಷ್ಟವಾಗಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Exam

FMGE ಪರೀಕ್ಷೆ: ಮೋಸದ ಜಾಲಕ್ಕೆ ಬಲಿ ಆಗದಂತೆ ಕೇಂದ್ರ ಮನವಿ

congress

BRSಗೆ ಶಾಕ್‌: 6 ಎಂಎಲ್‌ಸಿಗಳು ಕಾಂಗ್ರೆಸ್‌ ಸೇರ್ಪಡೆ!

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

Suspended

Bihar ಸೇತುವೆ ಕುಸಿತ: 14 ಎಂಜಿನಿಯರ್‌ಗಳ ಸಸ್ಪೆಂಡ್‌

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.