ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ


Team Udayavani, Jul 1, 2024, 6:05 PM IST

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು, ಜೂ: ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆ ಮಧ್ಯೆ ಅಲ್ಲಲ್ಲಿ ನೀರು ನಿಂತು ಕೊಂಡಿರುವ
ಪರಿಣಾಮ ಈ ವರ್ಷವೂ ಮಳೆಗಾಲದಲ್ಲಿ ಹೆದ್ದಾರಿ ಮೇಲಿನ ಸಂಚಾರ ವಾಹನ ಸವಾರರ ಪಾಲಿಗೆ ಸಂಚಕಾರವನ್ನುಂಟು ಮಾಡುತ್ತಿದೆ.

ರಸ್ತೆಯ ಇಕ್ಕೆಲಗಳಲ್ಲಿ ಕೆಲವೆಡೆ ಮಳೆ ನೀರನ್ನು ಅಂದಾಜಿಸಲಾಗದ ವಾಹನ ಸವಾರರು ಹತೋಟಿ ತಪ್ಪಿ ಡಿವೈಡರ್‌ ಮೇಲೇರುತ್ತಿದ್ದರೆ, ಕೆಲವೆಡೆಗಳಲ್ಲಿ ವಾಹನಗಳು ಓಡುವ ರಭಸಕ್ಕೆ ನೀರು ಎರಚಲ್ಪಟ್ಟು ವಾಹನ ಸವಾರರು ಕ್ಷಣಕಾಲ ತಬ್ಬಿಬ್ಟಾಗಿ ಹೆದ್ದಾರಿಯಲ್ಲೇ ನಿಂತು ಬಿಡಬೇಕಾದ ಅನಿವಾರ್ಯತೆಗೆ ಸಿಲುಕುವಂತಾಗಿದೆ.

ಎಲ್ಲೆಲ್ಲಿ ಸಮಸ್ಯೆ?: ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಉಚ್ಚಿಲ, ಮೂಳೂರು, ಕೊಪ್ಪಲಂಗಡಿ, ಕಾಪು, ಪಾಂಗಾಳದ ಕೆಲವು ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. ಅದರಲ್ಲೂ ಉಚ್ಚಿಲ – ಮೂಳೂರು ಡೈವರ್ಷನ್‌, ಹೊಟೇಲ್‌ ಕೆ -1 ಬಳಿಯ ಡೈವರ್ಷನ್‌ ಮತ್ತು ಕೋತಲಕಟ್ಟೆ – ಪಾಂಗಾಳ ಡೈವರ್ಷನ್‌ ಈ ಮೂರೂ ಜಂಕ್ಷನ್‌ಗಳಲ್ಲಿಯೂ ನಿರಂತರ ಅಪಘಾತಗಳು ಸಂಭವಿಸುತ್ತಿವೆ.

ಉಚ್ಚಿಲ ಪೇಟೆ, ಮೂಳೂರು ಕುಂಜೂರು ಆಟೋ ಮೊಬೈಲ್ಸ್‌ ಗ್ಯಾರೇಜ್‌ ಬಳಿ, ಮೂಳೂರು ಸಿಎಸ್‌ಐ ಶಾಲೆ ಬಳಿ, ಮೂಳೂರು ಅಲ್‌ಇಹ್ಸಾನ್‌ ಶಾಲೆ ಬಳಿಯೂ ಇದೇ ರೀತಿಯ ಸಮಸ್ಯೆ ಹಲವು ವರ್ಷಗಳಿಂದಲೂ ಇದೆ. ಪ್ರತೀ ವರ್ಷ ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯರು, ಮಾಧ್ಯಮಗಳು ಸಂಬಂಧಪಟ್ಟವರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದರೂ, ಸಮಸ್ಯೆಗೆ ಇಲ್ಲಿವರೆಗೂ ಸ್ಪಂದನೆ ಸಿಕ್ಕಿಲ್ಲ.

ದಿಲ್ಲಿ ನಿಯೋಗಕ್ಕೆ ಮಾಹಿತಿ
ಚತುಷ್ಪಥ ಯೋಜನೆಯ ಕಾಮಗಾರಿಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು, ಸಂಸದರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ತಾಲೂಕು ಮಟ್ಟದ ಮುಂಗಾರು ಮುಂಜಾಗ್ರತಾ ಸಭೆಯಲ್ಲೂ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಈ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಇಷ್ಟಾದರೂ ಮಳೆಗಾಲದಲ್ಲಿ ಉಂಟಾಗುತ್ತಿರುವ
ಸಮಸ್ಯೆಗಳನ್ನು ಬಗೆಹರಿಸಲು ಮೀನಾ ಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಹೆದ್ದಾರಿ ಇಲಾಖೆಯ ಸಚಿವರಿಗೆ ಪತ್ರ ಬರೆದು, ಜನರ ಸಮಸ್ಯೆಗಳನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಲಾಗುವುದು. ಕರಾವಳಿಯ ಸಂಸದರ ನೇತೃತ್ವದಲ್ಲಿ ಶಾಸಕರ ಜತೆಗೂಡಿ ದಿಲ್ಲಿಗೆ ನಿಯೋಗ ತೆರಳಿ ಇಲ್ಲಿನ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಸರಕಾರಕ್ಕೆ ವಿವರಿಸುವ ಮತ್ತು ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇವೆ.
*ಗುರ್ಮೆ ಸುರೇಶ್‌ ಶೆಟ್ಟಿ, ಶಾಸಕರು, ಕಾಪು

ಹೆದ್ದಾರಿ ಇಲಾಖೆಗೆ ಹಲವು ಬಾರಿ ಪತ್ರ ಮುಖೇನ ಮನವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಅಪಘಾತಕ್ಕೆ ಕಾರಣವಾಗುತ್ತಿದೆ. ದಾರಿ ದೀಪ ಕೆಟ್ಟು ಅಪಘಾತ, ಅಕ್ರಮ ಚಟುವಟಿಕೆಗಳಿಗೆ ಸಹಕಾರ ಕೊಟ್ಟಂತಾಗುತ್ತಿದೆ.
ಸರ್ವೀಸ್‌ ರಸ್ತೆಯಿಲ್ಲದೇ ರಾಂಗ್‌ ಸೈಡ್‌ಗಳಲ್ಲಿ ವಾಹನಗಳು ಓಡಾಡಿ ಸಮಸ್ಯೆಗಳಾಗುತ್ತಿವೆ. ಇವೆಲ್ಲದಕ್ಕೂ ಹೆದ್ದಾರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿಯೇ ಮುಖ್ಯ ಕಾರಣವಾಗಿದೆ. ಕಾಪು ಪರಿಸರದ ಸಮಸ್ಯೆಗಳ ಬಗ್ಗೆ ಹೆದ್ದಾರಿ ಇಲಾಖೆಗೆ ಹಲವು ಬಾರಿ ಪತ್ರ ಬರೆದಿದ್ದೇವೆ. ಆದರೂ ಸಮಸ್ಯೆ ಬಗೆಹರಿದಿಲ್ಲ. ಈ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಮೂಲಕವಾಗಿ ಮತ್ತೆ ಹೆದ್ದಾರಿ ಇಲಾಖೆಯ ಗಮನ ಸೆಳೆಯಲು ಪ್ರಯತ್ನಿಸಲಾಗುವುದು.
*ಅಬ್ದುಲ್‌ ಖಾದರ್‌ ಎಸ್ಸೈ, ಕಾಪು

*ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.