Sadananda Gowda ಪಕ್ಷದ ವಿರುದ್ಧ ಮಾತನಾಡುವವರಿಗೆ ಬಿಜೆಪಿಯಲ್ಲಿ ಮಣೆ

ಲೋಕಸಭೆ ಚುನಾವಣೆ ನಿರೀಕ್ಷಿತ ಫ‌ಲಿತಾಂಶ ಸಿಕ್ಕಿಲ್ಲ ; ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಗೊತ್ತಿಲ್ಲ

Team Udayavani, Jul 2, 2024, 12:13 AM IST

Sadananda Gowda ಪಕ್ಷದ ವಿರುದ್ಧ ಮಾತನಾಡುವವರಿಗೆ ಬಿಜೆಪಿಯಲ್ಲಿ ಮಣೆ

ಬೆಂಗಳೂರು: ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ. ಬೇರೆ ಪಕ್ಷದಂತೆ ಬಿಜೆಪಿ ಆಗಬಾರದು. ನಾನು ಪಕ್ಷ ಶುದ್ಧೀಕರಣದ ದಾರಿಯಲ್ಲಿದ್ದೇನೆ. ಅದಕ್ಕಾಗಿ ಗುಂಪು ಕಟ್ಟುವುದಿಲ್ಲ. ಪಕ್ಷ ದ್ರೋಹವನ್ನೂ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.

ಸೋಮವಾರ ಬೆಂಗಳೂರಿನ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫ‌ಲಿತಾಂಶ ಸಿಕ್ಕಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾದಾಗಲೇ ಗಂಭೀರವಾಗಿ ಪರಿಗಣಿಸಬೇಕಿತ್ತು. ಕಾರ್ಯಕರ್ತರನ್ನು ಹುರಿದುಂಬಿಸುವ ಬದಲು ಮೋದಿ ಹೆಸರಿನಲ್ಲಿ ಅತಿಯಾದ ಆತ್ಮವಿಶ್ವಾಸದಿಂದ 9 ಸ್ಥಾನ ಕಳೆದುಕೊಂಡಿದ್ದೇವೆ ಎಂದರು.

ಕಾಂಗ್ರೆಸ್‌ ಪ್ರಬಲವಾಗಿ ಕಾರ್ಯಾಚರಣೆಗಿಳಿದಿದೆ ಎಂಬುದನ್ನು ಊಹಿಸಲು ನಾನೂ ಸೇರಿದಂತೆ ರಾಜ್ಯದ ಸಂಘಟನೆಯವರು ವಿಫ‌ಲರಾಗಿದ್ದೇವೆ. ಜೆಡಿಎಸ್‌ ಜತೆಗಿದ್ದ ಕಾರಣದಿಂದ ಗೆದ್ದಿದ್ದೇವೆ ಎಂದು ಜನ ಮಾತನಾಡಲಾರಂಭಿಸಿದ್ದಾರೆ. ಇದು ಬಿಜೆಪಿ ಸಂಘಟನೆಗೆ ಸವಾಲು. ಎಲ್ಲ ಕಡೆ ಮತಗಳ ಅಂತರ ಕಡಿಮೆ ಆಗಿರುವುದು ನಮಗೆ ಎಚ್ಚರಿಕೆಯ ಸಂದೇಶ ಎಂದರು.

ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಪ್ರಚಾರ ಇಲ್ಲದೆ ತಳಮಟ್ಟದಲ್ಲಿ ಕೆಲಸ ಮಾಡಬೇಕು. ಯಾರನ್ನೋ ಕೂರಿಸಿದರೆ ಸಂಘಟನೆ ಆಗುವುದಿಲ್ಲ. ನಾನು ರಾಜ್ಯಾಧ್ಯಕ್ಷರ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ಅವರು ಮೊನ್ನೆ ಮೊನ್ನೆ ಬಂದಿದ್ದಾರೆ. ಅವರು ಬಂದ ಕೂಡಲೇ ಚುನಾವಣೆಯೂ ಬಂದಿದೆ. ನಾಯಕತ್ವ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಚಾರ್ಜ್‌ಶೀಟ್‌ ಎಲ್ಲಿ ಹೋಗಬೇಕೋ ಅಲ್ಲಿ ಹೋಗುತ್ತದೆ. ನಾವೆಲ್ಲಾ ಎ3 ಅಥವಾ ಎ 4 ಆಗಿರಬಹುದು. ಜು. 4ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕಾರಿಣಿಯಲ್ಲಿ ಇವೆಲ್ಲವೂ ಚರ್ಚೆ ಆಗಬೇಕು ಎಂದರು.

ನಾನು ರಾಜ್ಯಾಧ್ಯಕ್ಷನಿದ್ದಾಗ ಪಕ್ಷದ ವಿರುದ್ಧ ಮಾತನಾಡಿದ್ದ ಜನಾರ್ದನ ರೆಡ್ಡಿ, ರೇಣುಕಾಚಾರ್ಯ, ಯತ್ನಾಳ್‌ ವಿರುದ್ಧ ಕೇಂದ್ರದ ಒಪ್ಪಿಗೆ ಪಡೆದು ಅಮಾನತು ಮಾಡಿದ್ದೆ. ಇದರಿಂದ ಪಕ್ಷ ಬೆಳೆಯಲು ಅನುಕೂಲ ಆಯಿತು. ಈಗ ಈ ಕೆಲಸ ಆಗುತ್ತಿಲ್ಲ. ಚೇಲಾಗಳನ್ನು ಬಿಟ್ಟು ಪಕ್ಷಕ್ಕಾಗಿ ಕೆಲಸ ಮಾಡುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದರೆ ಎಲ್ಲವೂ ಸರಿ ಹೋಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಶೋಕ್‌ ವಿರುದ್ಧವೂ ಅಸಮಾಧಾನ
ವಿಧಾನಸಭೆ ವಿಪಕ್ಷದ ನಾಯಕರಾಗಿರುವ ಆರ್‌. ಅಶೋಕ್‌ ವಿರುದ್ಧವೂ ಅಸಮಾಧಾನ ಹೊರಹಾಕಿದ ಡಿವಿಎಸ್‌, ಸಿದ್ದರಾಮಯ್ಯ ಅವರನ್ನು ಎದುರಿಸಲು ಸಾಮಾನ್ಯರಿಂದ ಸಾಧ್ಯವಿಲ್ಲ. ವಿಪಕ್ಷ ನಾಯಕ ಆದವರು ಅಧ್ಯಯನ ಮಾಡಬೇಕು. ಕೇವಲ ಜಗಳ ಮಾಡುವುದಲ್ಲ. ಓಡಾಟದಿಂದ ಪಕ್ಷದ ನಾಯಕರಾಗಿ ಬೆಳೆಯಬಹುದೇ ಹೊರತು, ವಿಪಕ್ಷ ನಾಯಕ ಆಗಲಾರರು. ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಅಧ್ಯಯನ, ಅಂಕಿ-ಅಂಶ ಹಾಗೂ ಸೂಕ್ತ ಸಮಯದಲ್ಲಿ ಪ್ರತಿರೋಧ ಒಡ್ಡುವ ನಾಯಕರ ಆವಶ್ಯಕತೆ ಇದೆ ಎಂದರು.

ನಾನು ಮತ್ತೊಬ್ಬ ಜಗದೀಶ್‌ ಶೆಟ್ಟರ್‌ ಆಗಲಾರೆ: ಡಿವಿಎಸ್‌
ಇತ್ತೀಚೆಗೆ ಕಾಂಗ್ರೆಸ್‌ ನಾಯಕರೊಬ್ಬರು ನನ್ನನ್ನು ಅವರ ಪಕ್ಷಕ್ಕೆ ಕರೆದಿದ್ದರು. ನಾಲ್ಕು ಪ್ಯಾಂಟ್‌, ಶರ್ಟ್‌ ಮಾತ್ರ ತನ್ನಿ. 28ರಲ್ಲಿ ಒಂದು ಕಡೆ ನಿಲ್ಲಿಸಿ ಗೆಲ್ಲಿಸುತ್ತೇವೆ ಎಂದು ಆಹ್ವಾನ ಕೊಟ್ಟಿದ್ದರು. ನಾನು ಮತ್ತೂಬ್ಬ ಜಗದೀಶ್‌ ಶೆಟ್ಟರ್‌ ಆಗಲು ಸಿದ್ಧನಿಲ್ಲ ಎಂದು ನೇರವಾಗಿ ಹೇಳಿದ್ದೆ ಎಂದು ಸದಾನಂದ ಗೌಡ ಹೇಳಿದರು.

ಸರಕಾರ ಬೀಳುತ್ತದೆ, ರಾಜಣ್ಣ ಶಿಷ್ಯತ್ವ ಸ್ವೀಕರಿಸಲಿ’
ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಕುಮಾರ ಚಂದ್ರ ಶೇಖರನಾಥ ಸ್ವಾಮೀಜಿ ಪರ ಬ್ಯಾಟ್‌ ಬೀಸಿದ ಡಿವಿಎಸ್‌, ಸಚಿವ ರಾಜಣ್ಣ ಅವರಿಗೆ ಒಂದು ಮಾತು ಹೇಳಲು ಇಷ್ಟಪಡುತ್ತೇನೆ. ಇಲ್ಲಿ ಸರಕಾರ ಬೀಳುತ್ತದೆ, ಅವರಲ್ಲಿ ಸ್ವಾಮೀಜಿ ಆಗುತ್ತಾರಾ ನೋಡಲಿ. ಕಾವಿ ಬಟ್ಟೆ ಬೇಕಾದರೆ ನಾವೇ ಕೊಡುತ್ತೇವೆ, ಶಿಷ್ಯತ್ವ ಸ್ವೀಕಾರ ಮಾಡುತ್ತಾರಾ ಎಂದು ಸವಾಲು ಹಾಕಿದರು.

ಟಾಪ್ ನ್ಯೂಸ್

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.