![SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ](https://www.udayavani.com/wp-content/uploads/2024/07/2-4-415x249.jpg)
Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್ ಸಂಗ್ರಹ
Team Udayavani, Jul 2, 2024, 1:35 AM IST
![Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್ ಸಂಗ್ರಹ](https://www.udayavani.com/wp-content/uploads/2024/07/water-a-620x350.jpg)
ಪಡುಬಿದ್ರಿ: ನಂದಿಕೂರು ವಿಶೇಷ ಆರ್ಥಿಕ ವಲಯ ಬಳಿ ಸ್ಥಾಪನೆಯಾಗಿರುವ ಎಂ 11 ಬಯೋ ಡೀಸೆಲ್ ತಾಳೆಎಣ್ಣೆ ತಯಾರಿ ಘಟಕದಿಂದ ಹೊರ ಸೂಸುವ ದುರ್ವಾಸನೆಯು ಪರಿಸರದ ಜನತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ದೂರಿನ ಹಿನ್ನೆಲೆಯಲ್ಲಿ ಪರಿಸರ ಅಧಿಕಾರಿಗಳು ಸೋಮವಾರ ಘಟಕದ ಸುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಘಟಕದಿಂದ ಸುತ್ತಮುತ್ತಲಿನ 3 ಕಿ. ಮೀ. ವ್ಯಾಪ್ತಿಯಲ್ಲಿ ಜಿಡ್ಡು ವಾಸನೆ ಹರಡುತ್ತಿದ್ದು, ಇದರಿಂದಾಗಿ ಪರಿಸರದ ಮನೆಗಳಲ್ಲಿರುವ ಮತ್ತು ಶಾಲಾ ಮಕ್ಕಳು ವಾಕರಿಕೆಯೊಂದಿಗೆ ಉಸಿರಾಟದ ತೊಂದರೆ ಅನುಭವಿಸುವಂತಾಗಿದೆ. ಸಮಸ್ಯೆ ಬಗ್ಗೆ ತಾಲೂಕು ಆಡಳಿತ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿತ್ತು.
ಸಮಸ್ಯೆಗೊಳಗಾದ ಕಂಪೆನಿಯ ಸುತ್ತಮುತ್ತಲಿನ ಮನೆಗಳಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪಪರಿಸರಾಧಿಕಾರಿ ಅಮೃತಾ, ತಾಲೂಕು ಆರೋಗ್ಯಾಧಿಕಾರಿ ವಾಸುದೇವ ರಾವ್, ಹಿರಿಯ ಆರೋಗ್ಯಾಧಿ ಕಾರಿ ಬಸವರಾಜ್, ಡಾ| ಸುಬ್ರಹ್ಮಣ್ಯ ರಾವ್ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದರು. ಈ ಸಂದರ್ಭ ಸ್ಥಳೀಯರಾದ ಅಮಣಿ, ಶಂಕರ ರಾವ್, ಅಂಗನವಾಡಿ ಕಾರ್ಯಕರ್ತೆ ಗೀತಾ, ರಾಮ ಮಂದರ ಬಳಿಯ ನಿವಾಸಿಗಳೊಂದಿಗೆ ಸಮಸ್ಯೆ ಬಗ್ಗೆ ಮಾಹಿತಿ ಪಡೆದರು.
ಉಪ ಪರಿಸರಾಧಿಕಾರಿ ಅಮೃತಾ ಮಾಹಿತಿ ನೀಡಿ, ಇಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ದ್ದೇವೆ. ಸ್ಥಳೀಯರ ದೂರುಗಳನ್ನೂ ಆಲಿಸಿದ್ದೇವೆ. ಈ ಬಗ್ಗೆ ವರದಿಯನ್ನು ಮೇಲಾಧಿಕಾರಿಗೆ ಮಾಹಿತಿ ನೀಡ ಲಾಗುವುದು. ಶಂಕರ ರಾವ್ ಮನೆಯ ಕೊಳವೆ ಬಾವಿಯ ನೀರನ್ನು ಸಂಗ್ರಹಿಸಲಾಗಿದ್ದು ಇದನ್ನೂ ಪರೀಕ್ಷೆ ನಡೆಸಲಾಗುವುದು ಎಂದರು.
ವಿದ್ಯಾರ್ಥಿನಿ ಅಸ್ವಸ್ಥ ?
ಒಂದು ವಾರದಿಂದ ಪರಿಸರದಲ್ಲಿ ದುರ್ವಾಸನೆ ಬೀರು ತ್ತಿದ್ದು, ಇದರಿಂದಾಗಿ ಶಾಲಾ ವಿದ್ಯಾರ್ಥಿ ಯೊಬ್ಬಳು ಅನಾರೋಗ್ಯಕ್ಕೆ ತುತ್ತಾಗಿರುವು ದಾಗಿಯೂ ಸ್ಥಳೀಯರು ತಿಳಿಸಿದ್ದಾರೆ. ಘಟಕದಿಂದ ಪರಿಸರದಲ್ಲಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಾರ್ವಜನಿಕವಾಗಿ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜೂ. 18ರಂದು ಘಟಕಕ್ಕೆ ಭೇಟಿ ನೀಡಿದ್ದು, 15 ದಿನಗಳೊಳಗೆ ಸಮಸ್ಯೆ ಪರಿಹರಿಸು ವಂತೆ ತಾಕೀತು ಮಾಡಿ ದ್ದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ನಿಯೋಗ ಕೂಡ ಭೇಟಿ ನೀಡಿತ್ತು. ಆದರೂ ಈಗ ಸಮಸ್ಯೆ ಮತ್ತೆ ಉಲ್ಬಣಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
![SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ](https://www.udayavani.com/wp-content/uploads/2024/07/2-4-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kota-Shrinivas](https://www.udayavani.com/wp-content/uploads/2024/07/Kota-Shrinivas-150x90.jpg)
Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
![Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ](https://www.udayavani.com/wp-content/uploads/2024/07/Udupi-DC-Dr.-vidya-kumari-1-150x106.jpg)
Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ
![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-150x93.jpg)
Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು
![Yaakshagana-Artist](https://www.udayavani.com/wp-content/uploads/2024/07/Yaakshagana-Artist-150x90.jpg)
Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ
![Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್ ನಿಲ್ಲಿಸಿ ಹೋದ ಚಾಲಕ!](https://www.udayavani.com/wp-content/uploads/2024/07/BUSAAA-150x90.jpg)
Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್ ನಿಲ್ಲಿಸಿ ಹೋದ ಚಾಲಕ!
MUST WATCH
ಹೊಸ ಸೇರ್ಪಡೆ
![SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ](https://www.udayavani.com/wp-content/uploads/2024/07/2-4-150x90.jpg)
SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ
![ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್](https://www.udayavani.com/wp-content/uploads/2024/07/dinesh-150x84.jpg)
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್
![rahul gandhi (2)](https://www.udayavani.com/wp-content/uploads/2024/07/rahul-gandhi-2-1-150x90.jpg)
Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್
![1—–wewqewq](https://www.udayavani.com/wp-content/uploads/2024/07/1-wewqewq-1-150x84.jpg)
Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ
![Kulgam: Gunfight between Army-Militants in Kashmir; A Soldier martyred](https://www.udayavani.com/wp-content/uploads/2024/07/kulgam-150x83.jpg)
Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.