![1-rewewewe](https://www.udayavani.com/wp-content/uploads/2024/07/1-rewewewe-415x234.jpg)
Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ
Team Udayavani, Jul 2, 2024, 1:46 AM IST
![Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ](https://www.udayavani.com/wp-content/uploads/2024/07/Arrest-kar-620x465.jpg)
ಸುಳ್ಯ: ಎರಡು ವರ್ಷಗಳ ಹಿಂದೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಎಡಮಂಗಲದಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ, ಬೆಳ್ತಂಗಡಿ ಮೂಲದ ಶರತ್ (26) ಅವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
2022ರ ಮಾರ್ಚ್ನಲ್ಲಿ ರಾತ್ರಿ ಸಮಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿನ ಮನೆಯೊಂದರ ಬಾಗಿಲು ಮುರಿದು ನುಗ್ಗಿದ ಆರೋಪಿ ಮನೆಯೊಳಗಿದ್ದ ಕಬ್ಬಿಣದ ಕಪಾಟಿನ ಬೀಗದ ಕೀ ಬಳಸಿ ಕಪಾಟು ತೆರೆದು 30 ಸಾವಿರ ನಗದು ಹಾಗೂ 1.48 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಅಂದಾಜು 1.78 ಲಕ್ಷ ಮೌಲ್ಯ ಕಳವು ನಡೆಸಲಾಗಿತ್ತು. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಡಮಂಗಲದಲ್ಲಿ ಕಳ್ಳತನ ನಡೆಸಿದ್ದ ಆರೋಪಿ ಚಿಕ್ಕಮಗಳೂರಿನಲ್ಲಿ ಲ್ಯಾಪ್ಟಾಪ್ ಕಳ್ಳತನ ಪ್ರಕರಣದಲ್ಲಿ ಜೈಲು ಪಾಲಾಗಿದ್ದ. ಎಡಮಂಗಲದಲ್ಲಿ ನಡೆದಿದ್ದ ಕಳ್ಳತನದ ವೇಳೆ ಬೆಳ್ಳಾರೆ ಪೊಲೀಸರಿಗೆ ಲಭಿಸಿದ್ದ ತಾಂತ್ರಿಕ ಸುಳಿವಿನ ಮೇರೆಗೆ ಚಿಕ್ಕಮಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಶರತ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆತ ಕಳ್ಳತನ ನಡೆಸಿದ ಬಗ್ಗೆ ಒಪ್ಪಿಕೊಂಡಿದ್ದು, ಕಳ್ಳತನ ನಡೆಸಿದ ಬಳಿಕ ಮಾರಾಟ ಮಾಡಿದ್ದ ಸೊತ್ತುಗಳನ್ನು ಅಲ್ಲಿಂದ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
![1-rewewewe](https://www.udayavani.com/wp-content/uploads/2024/07/1-rewewewe-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್](https://www.udayavani.com/wp-content/uploads/2024/07/dinesh-150x84.jpg)
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್
![1-saddsa](https://www.udayavani.com/wp-content/uploads/2024/07/1-saddsa-150x107.jpg)
Bantwal; ನೇಲ್ಯಪಲ್ಕೆಯಲ್ಲಿ ಬಿರುಗಾಳಿಗೆ ಹಾರಿದ ಅಂಗಡಿಗಳ ಮೇಲ್ಛಾವಣಿ ಶೀಟುಗಳು
![Harish-Poonja](https://www.udayavani.com/wp-content/uploads/2024/07/Harish-Poonja-150x90.jpg)
Belthangady ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ
![High-Court](https://www.udayavani.com/wp-content/uploads/2024/07/High-Court-1-150x90.jpg)
Belthangady: ನೆರಿಯ ಪ್ಲಾಂಟೇಷನ್ ಜಮೀನು ದಶಕಗಳ ವಿವಾದಕ್ಕೆ ತೆರೆ
![Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್ ಇಲ್ಲ](https://www.udayavani.com/wp-content/uploads/2024/07/separate-ward-150x103.jpg)
Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್ ಇಲ್ಲ
MUST WATCH
ಹೊಸ ಸೇರ್ಪಡೆ
![1-rewewewe](https://www.udayavani.com/wp-content/uploads/2024/07/1-rewewewe-150x84.jpg)
Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ
![ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ](https://www.udayavani.com/wp-content/uploads/2024/07/3-5-150x90.jpg)
ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ
![Nirmala-Budget](https://www.udayavani.com/wp-content/uploads/2024/07/Nirmala-Budget-150x90.jpg)
Union Budget: ಜು.22ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ](https://www.udayavani.com/wp-content/uploads/2024/07/2-4-150x90.jpg)
SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.