Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ


Team Udayavani, Jul 2, 2024, 10:31 AM IST

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

ಬೆಂಗಳೂರು: ಆರು ದಿನಗಳ ಹಿಂದಷ್ಟೇ ನಾಪತ್ತೆಯಾ ಗಿದ್ದ ಮಡಿವಾಳ ಠಾಣೆಯ ಕಾನ್‌ಸ್ಟೇಬಲ್ ಶಿವರಾಜ್‌ (30) ಅವರ ಮೃತದೇಹ ಜ್ಞಾನಭಾರತಿ ಕ್ಯಾಂಪಸ್‌ನ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ‌

ರಾಯಚೂರಿನ ದೇವ ದುರ್ಗ ಮೂಲದ ಶಿವ ರಾಜ್‌, 2020ನೇ ಬ್ಯಾಚ್‌ನ ಪೊಲೀಸ್‌ ಕಾನ್‌ಸ್ಟೆàಬಲ್‌. ಕಳೆದ 4 ವರ್ಷಗಳಿಂದ ಮಡಿ ವಾಳ ಪೊಲೀಸ್‌ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸುಬ್ರ ಹ್ಮಣ್ಯಪುರ ಠಾಣೆ ವ್ಯಾಪ್ತಿಯ ಮನೆಯಲ್ಲಿ ವಾಸವಾಗಿ ದ್ದರು. ಈ ಮಧ್ಯೆ ಜೂನ್‌ 25ರಂದು ಕರ್ತವ್ಯಕ್ಕೆ ಹೋಗುವುದಾಗಿ ದ್ವಿಚಕ್ರ ವಾಹನ ತೆಗೆದುಕೊಂಡು ಮನೆಯಿಂದ ತೆರಳಿದ ಶಿವರಾಜ್‌ ಒಂದೆರಡು ದಿನಗಳಾದರೂ ಮನೆಗೆ ವಾಪಸ್‌ ಬಂದಿಲ್ಲ. ಮೊಬೈಲ್‌ ಸ್ವಿಚ್ಡ್ ಆಫ್ ಕೂಡ ಆಗಿತ್ತು. ಹೀಗಾಗಿ ಅವರ ತಂದೆ ಬಾಲಪ್ಪ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಶಿವರಾಜ್‌ಗಾಗಿ ಶೋಧ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದರು. ‌

ಸಿಸಿ ಕ್ಯಾಮೆರಾದಲ್ಲಿ ಶಿವರಾಜ್‌ ಪತ್ತೆ: ನಂತರ ನಗರದ ನಾನಾ ಪೊಲೀಸ್‌ ಠಾಣೆಗಳಿಗೆ ಶಿವರಾಜ್‌ ಬಗ್ಗೆ ಮಾಹಿತಿ ನೀಡಿ, ಶೋಧ ಕಾರ್ಯಕ್ಕೆ ಸಹಾಯ ಕೋರಿ ದ್ದರು. ಮೂರು ದಿನಗಳ ಹಿಂದೆ ಜಯನಗರದಲ್ಲಿ ಶಿವರಾಜ್‌ ಬೈಕ್‌ನಲ್ಲಿ ಚಲಿಸುತ್ತಿರುವುದು ಪತ್ತೆಯಾಗಿತ್ತು. ಬಳಿಕ ಆ ಬೈಕ್‌ನಲ್ಲಿ ಎಲ್ಲೆಲ್ಲಿ ಹೋಗಲಾಗಿದೆ ಎಂಬುದುನ್ನು ಪರಿಶೀಲಿಸುತ್ತಿರುವಾಗ ಸೋಮವಾರ ಬೆಳಗ್ಗೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ವಾಹನಗಳ ಪಾರ್ಕಿಂಗ್‌ನಲ್ಲಿ ಶಿವರಾಜ್‌ ಬೈಕ್‌ ಪತ್ತೆಯಾಗಿತ್ತು. ಬಳಿಕ ಪೊಲೀಸರು ಮೃತನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿಕೊಂಡು ಪರಿಶೀಲಿಸಿದಾಗ, ಪತ್ತೆಯಾದ ಬೈಕ್‌ ಶಿವರಾಜ್‌ದು ಎಂಬುದವನ್ನು ಖಾತ್ರಿ ಪಡಿಸಿದ್ದಾರೆ. ನಂತರ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಜ್ಞಾನಭಾರತಿ ಕ್ಯಾಂಪಸ್‌ನ ಒಳಗಡೆ ಹೋಗಿರುವುದು ಗೊತ್ತಾಗಿ, ಎಲ್ಲೆಡೆ ಶೋಧಿಸುವಾಗ, ಕ್ಯಾಂಪಸ್‌ನ ಮಧ್ಯ ಭಾಗದಲ್ಲಿದ್ದ ಪಾಳು ಬಿದ್ದ ಮನೆ ಪಕ್ಕದಲ್ಲಿದ್ದ ಬಾವಿಯಲ್ಲಿ ಶಿವರಾಜ್‌ನ ಅರೆ ಕೊಳತೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬಾವಿ ಮೇಲ್ಭಾಗದಲ್ಲಿ ಮೃತನ ಚಪ್ಪಲಿ ಹಾಗೂ ಕೆಲವೊಂದು ಕುರುಹುಗಳು ಪತ್ತೆಯಾಗಿದ್ದು, ಆತನೇ ಶಿವರಾಜ್‌ ಎಂದು ಕುಟುಂಬ ಸದಸ್ಯರು ಖಾತ್ರಿ ಪಡಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಸೋದರನ ಸೊಸೆ, ಕುಟುಂಬದಿಂದ ಕಿರುಕುಳಕೆ ಆತ್ಕ ಹತೆ¾ Â? ಮೂರು ತಿಂಗಳ ಹಿಂದಷ್ಟೇ ಶಿವರಾಜ್‌ಗೆ ಮದುವೆಯಾಗಿದ್ದು, ಕುಟುಂಬ ಜತೆ ಚೆನ್ನಾಗಿದ್ದರು. ಈ ಮಧ್ಯೆ ಕೆಲ ತಿಂಗಳ ಹಿಂದೆ ಶಿವರಾಜ್‌ ಸಹೋದರನ ಪುತ್ರನ ಪತ್ನಿ ವಾಣಿ, ವರದಕ್ಷಿಣಿ ಹಾಗೂ ದೌರ್ಜನ್ಯದ ಆರೋಪದಡಿ ತನ್ನ ಪತಿ, ಶಿವರಾಜ್‌ ಸೇರಿ 16 ಮಂದಿಯ ವಿರುದ್ಧ ದಾವಣಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಜತೆಗೆ ಇಡೀ ಕುಟುಂಬದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಎಲ್ಲಾ ವಿಚಾರಗಳಿಗೆ ಬೇಸತ್ತ ಶಿವರಾಜ್‌ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಡಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಅಲ್ಲದೆ, ಶಿವರಾಜ್‌ ತಂದೆ ಬಾಲಪ್ಪ, ತಮ್ಮ ಹಿರಿಯ ಪುತ್ರನ ಸೊಸೆ ವಾಣಿ ಮತ್ತು ಆಕೆಯ ಕುಟಂಬ ಸದಸ್ಯರ ಕಿರುಕುಳದಿಂದಲೇ ಪುತ್ರ ಶಿವರಾಜ್‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.