Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

60ರಿಂದ 70 ಮಂದಿಯಿಂದ ಸಲ್ಮಾನ್‌ ಮೇಲೆ ನಿಗಾ

Team Udayavani, Jul 2, 2024, 11:07 AM IST

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಐವರು ಆರೋಪಿಗಳ ವಿರುದ್ಧ ದಾಖಲಾಗಿರುವ ಹೊಸ ಚಾರ್ಜ್ ಶೀಟ್ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ.

ನವಿ ಮುಂಬೈ ಪೊಲೀಸರ ಪ್ರಕಾರ, ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಆರೋಪಿಗಳ ಮೇಲೆ ಕೊಲೆಗೆ ಸಂಚು ಮತ್ತು ಇತರ ಗಂಭೀರ ಅಪರಾಧಗಳ ಆರೋಪ ಹೊರಿಸಲಾಗಿದೆ.

ಚಾರ್ಜ್ ಶೀಟ್ ಪ್ರಕಾರ, ನಟನನ್ನು ಹತ್ಯೆ ಮಾಡಲು ಬಿಷ್ಣೋಯ್ ಗ್ಯಾಂಗ್ 25 ಲಕ್ಷ ಮೊತ್ತದ ಗುತ್ತಿಗೆ ನೀಡಿತ್ತು. 2023ರ ಆಗಸ್ಟ್‌ನಿಂದ 2024ರ ಏಪ್ರಿಲ್‌ವರೆಗೆ ಹಲವು ತಿಂಗಳುಗಳ ಕಾಲ ಈ ಯೋಜನೆ ರೂಪಿಸಲಾಗಿತ್ತು. ಆರೋಪಿಗಳು ಎಕೆ 47, ಎಕೆ 92 ಮತ್ತು ಎಂ 16 ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಪಾಕಿಸ್ತಾನದಿಂದ ಖರೀದಿಸಲು ಸಿದ್ಧತೆ ನಡೆಸಿದ್ದರು. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾದ ಟರ್ಕಿ ನಿರ್ಮಿತ ಜಿಗ್ನಾ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಯಸಿದ್ದರು. ಈ ಆಯುಧಗಳನ್ನು ಬಳಸಿ ಆರೋಪಿಗಳು ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಮಾಹಿತಿಯನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿದೆ.

60ರಿಂದ 70 ಮಂದಿಯಿಂದ ಸಲ್ಮಾನ್‌ ಮೇಲೆ ನಿಗಾ:
ಆಗಸ್ಟ್ 2023 ಮತ್ತು ಏಪ್ರಿಲ್ 2024 ರ ನಡುವೆ ಸಲ್ಮಾನ್ ಖಾನ್ ಹತ್ಯೆಯ ಯೋಜನೆ ರೂಪಿಸಲಾಗಿತ್ತು ಎಂದು ನವಿ ಮುಂಬೈ ಪೊಲೀಸರ ಚಾರ್ಜ್ ಶೀಟ್‌ನಲ್ಲಿ ಹೇಳಲಾಗಿದೆ. ಇದಕ್ಕಾಗಿ ಸುಮಾರು 60 ರಿಂದ 70 ಮಂದಿ ನಟ ಸಲ್ಮಾನ್ ಖಾನ್ ಅವರ ಚಲನವಲನದ ಮೇಲೆ ನಿಗಾ ಇಡುತ್ತಿದ್ದರು. ತನಿಖೆಯ ವೇಳೆ ಸಲ್ಮಾನ್ ಖಾನ್ ಅವರ ಮುಂಬೈನ ಮನೆ, ಪನ್ವೇಲ್‌ನಲ್ಲಿರುವ ಫಾರ್ಮ್ ಹೌಸ್ ಮತ್ತು ಗೋರೆಗಾಂವ್‌ನ ಫಿಲ್ಮ್ ಸಿಟಿಯಲ್ಲಿನ ಪ್ರತಿಯೊಂದು ಚಲನವಲನವನ್ನು ಗಮನಿಸುತ್ತಿದ್ದರು ಎನ್ನಲಾಗಿದೆ. ಅಷ್ಟು ಮಾತ್ರವಲ್ಲದೆ ಆರೋಪಿಗಳು ಸಲ್ಮಾನ್ ಖಾನ್ ಅವರನ್ನು ಕೊಲ್ಲಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರನ್ನು ನೇಮಿಸಿಕೊಂಡಿದ್ದರು ಎಂದು ಪೊಲೀಸರು ಚಾರ್ಜ್ ಶೀಟ್‌ನಲ್ಲಿ ತಿಳಿಸಿದ್ದಾರೆ.

ಗೋಲ್ಡಿ ಬ್ರಾರ್ ಮತ್ತು ಅನ್ಮೋಲ್ ಬಿಷ್ಣೋಯ್ ಆದೇಶಕ್ಕೆ ಕಾಯುತಿದ್ದರು:
ಎಲ್ಲಾ ಶೂಟರ್‌ಗಳು ಗೋಲ್ಡಿ ಬ್ರಾರ್ ಮತ್ತು ಅನ್ಮೋಲ್ ಬಿಷ್ಣೋಯ್ ಅವರ ಆದೇಶಕ್ಕಾಗಿ ಕಾಯುತ್ತಿದ್ದರು ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆದೇಶ ಬಂದ ತಕ್ಷಣ ಪಾಕಿಸ್ತಾನದಿಂದ ತಂದ ಆಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ ಸಲ್ಮಾನ್ ಖಾನ್ ಮೇಲೆ ದಾಳಿ ನಡೆಸಲು ತಯಾರಿ ನಡೆಸಲಾಗಿತ್ತು. ಈ ಎಲ್ಲಾ ಶೂಟರ್‌ಗಳು ಪುಣೆ, ರಾಯಗಢ, ನವಿ ಮುಂಬೈ, ಥಾಣೆ ಮತ್ತು ಗುಜರಾತ್‌ನಲ್ಲಿ ನೆಲೆಸಿದ್ದರು ಎನ್ನಲಾಗಿದ್ದು ಬಳಿಕ ಸಲ್ಮಾನ್ ಖಾನ್ ಹತ್ಯೆ ನಡೆಸಿ ಇವರೆಲ್ಲರೂ ಕನ್ಯಾಕುಮಾರಿಗೆ ತೆರಳಿ ಅಲ್ಲಿ ಒಟ್ಟಾಗಿ ಬಳಿಕ ಅಲ್ಲಿಂದ ಬೋಟ್ ಮೂಲಕ ಶ್ರೀಲಂಕಾ ಕಡೆಗೆ ತೆರಳಿ ಅಲ್ಲಿಂದ ಯಾವ ಯಾವ ದೇಶಕ್ಕೆ ಹೋಗಬೇಕು ಎಂದು ಪ್ಲಾನ್ ಮಾಡಲಾಗಿತ್ತು.

ಇದನ್ನೂ ಓದಿ: Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.