Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

 ಚಂದಿರನ ವಾತಾವರಣ, ಶಿಲೆಗಳ ಹಂಚಿಕೆ, ಮೂಲ ತಿಳಿಯಲು ಸಹಕಾರಿ

Team Udayavani, Jul 2, 2024, 11:32 PM IST

Fragment of rocks discovered by Pragyan at Moon Shivashakti Point!

ನವದೆಹಲಿ: ಚಂದ್ರನ ಕುರಿತ ಅನ್ವೇಷಣೆಯಲ್ಲಿ ಮಹತ್ವದ ಹೆಜ್ಜೆಯೆಂಬಂತೆ, ಭಾರತದ ಚಂದ್ರಯಾನ-3ರ ಪ್ರಜ್ಞಾನ್‌ ರೋವರ್‌ ಪತ್ತೆ ಹಚ್ಚಿದ್ದ ಕೆಲವು ಪ್ರಮುಖ ಅಂಶಗಳು ಇತ್ತೀಚೆಗೆ ಬಹಿರಂಗಗೊಂಡಿವೆ.

ಚಂದಿರನ ಒಂದು ದಿನ (ಭೂಮಿಯ 29.5 ದಿನ)ದಲ್ಲಿ ರೋವರ್‌ ಶಶಾಂಕನ ದಕ್ಷಿಣ ಮೇಲ್ಮೈನಲ್ಲಿ ಸುಮಾರು 103 ಮೀಟರ್‌ನಷ್ಟು ಸುತ್ತಾಡಿದೆ. ವಿಕ್ರಂ ಲ್ಯಾಂಡರ್‌ ಇಳಿದಿದ್ದಂತಹ ಸ್ಥಳದಲ್ಲಿರುವ ಸಣ್ಣ ಕುಳಿಯಲ್ಲಿ ಹಾಗೂ ಆ ಕುಳಿಯ ಗೋಡೆಗಳಲ್ಲಿ ಮತ್ತು ಅಂಚಿನ ಸುತ್ತಲೂ ಸಣ್ಣದಾದ ಶಿಲೆಗಳ ತುಣುಕು (1ರಿಂದ 11.5 ಸೆ.ಮೀ. ಗಾತ್ರದವು) ಗಳನ್ನು ರೋವರ್‌ ಪತ್ತೆಹಚ್ಚಿತ್ತು. ಗ್ರಹದ ತಳಪಾಯವನ್ನು ಆವರಿಸಿರುವ ಘನ ಪದರದಲ್ಲಿನ ಶಿಲೆಗಳು ಕ್ರಮೇಣ ಒರಟಾಗುತ್ತವೆ ಎಂಬ ಈ ಹಿಂದಿನ ಅಧ್ಯಯನಗಳಿಗೆ ಇದು ಪೂರಕವಾಗಿದೆ.

ಶಿವಶಕ್ತಿ ಪಾಯಿಂಟ್‌ನ ಸುಮಾರು 30 ಮೀಟರ್‌ನಷ್ಟು ಪಶ್ಚಿಮಕ್ಕೆ ಹೋದಂತೆ ಶಿಲೆಗಳ ತುಣುಕುಗಳ ಪ್ರಮಾಣ ಹಾಗೂ ಗಾತ್ರವೂ ಹೆಚ್ಚಿರುವುದನ್ನು ರೋವರ್‌ ಗುರುತಿಸಿತ್ತು. ಇವುಗಳ ಪೈಕಿ 2 ಶಿಲೆಗಳು ಅವನತಿಯ ಕುರುಹನ್ನು ಪ್ರದರ್ಶಿಸಿದೆ. ಅಂದರೆ, ಕಾಲಗಳು ಉರುಳಿದಂತೆ ಚಂದಿರನ ಮೇಲ್ಮೈನಲ್ಲಿರುವ ವಸ್ತುಗಳ ಮೇಲೆ ವಾತಾವರಣವು ಹೇಗೆ ಪ್ರಭಾವ ಬೀರುತ್ತವೆ ಎನ್ನುವುದರ ಮಾಹಿತಿಯನ್ನು ಇದು ನೀಡುತ್ತದೆ. ಶಿಲೆಗಳ ತುಣುಕುಗಳ ಹಂಚಿಕೆ ಮತ್ತು ಮೂಲವನ್ನು ತಿಳಿಯಲು ಇದು ಸಹಾಯಕವಾಗಲಿದೆ.

ಟಾಪ್ ನ್ಯೂಸ್

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

1-rasht-aa

Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ

1-rasht-aa

Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.