Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

ಪ್ರಿಯಕರನ ಜತೆ ಸೇರಿ 2.50 ಲ.ರೂ.ಗಳಿಗೆ ಸುಪಾರಿ ನೀಡಿದ್ದ ಮಹಿಳೆ

Team Udayavani, Jul 3, 2024, 7:30 AM IST

Court-Symbol

ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
ಘಟನೆ 2016ರಲ್ಲಿ ನಡೆದಿತ್ತು. ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾವೂರು ನಿವಾಸಿ ಇಸ್ಮಾಯಿಲ್‌ (59) ಕೊಲೆಯಾದವರು. ಅವರ ಪತ್ನಿ ನೆಬಿಸಾ(40), ಆಕೆಯ ಪ್ರಿಯಕರ ಕುತ್ತಾರುಪದವಿನ ಜಮಾಲ್‌ ಅಹಮ್ಮದ್‌ (38), ಉಳ್ಳಾಲದ ಅಬ್ದುಲ್‌ ಮುನಾಫ್ ಆಲಿಯಾಸ್‌ ಮುನ್ನ (41), ಉಳ್ಳಾಲದ ಅಬ್ದುಲ್‌ ರೆಹಮಾನ್‌ (36) ಮತ್ತು ಬೋಳಿಯಾರ್‌ನ ಶಬೀರ್‌ (31) ಶಿಕ್ಷೆಗೊಳಗಾದವರು.
ಅನೈತಿಕ ಸಂಬಂಧ ಕಾರಣ
ಇಸ್ಮಾಯಿಲ್‌ ಅವರು ನೆಬಿಸಾಳನ್ನು ಎರಡನೇ ವಿವಾಹವಾಗಿದ್ದು ಅವರು ನಾಲ್ವರು ಮಕ್ಕಳನ್ನು ಹೊಂದಿದ್ದರು. ನೆಬಿಸಾ ಮತ್ತು ಜಮಾಲ್‌ನಿಗೆ ಅನೈತಿಕ ಸಂಬಂಧವಿತ್ತು. ಇದು ಇಸ್ಮಾಯಿಲ್‌ಗೆ ಗೊತ್ತಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದೇ ಕಾರಣಕ್ಕೆ ಆಗಾಗ್ಗೆ ಪತಿ -ಪತ್ನಿಯರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲಿ ನೆಬಿಸಾ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಳು.
ಬಾಡಿಗೆ ನೆಪದಲ್ಲಿ ಕರೆದೊಯ್ದಿದ್ದರು
ಜಮೀಲ್‌ನ ಜತೆ ಸೇರಿ ಪತಿ ಇಸ್ಮಾಯಿಲ್‌ನನ್ನು ಕೊಲೆ ಮಾಡಲು ನೆಬಿಸಾ ಸಂಚು ರೂಪಿಸಿದ್ದಳು. ಜಮಾಲ್‌ ತನ್ನ ಸ್ನೇಹಿತ ಆಟೋರಿಕ್ಷಾ ಚಾಲಕ ಅಬ್ದುಲ್‌ ರೆಹಮಾನ್‌ ಜತೆ ಅಬ್ದುಲ್‌ ಮುನಾಫ್ ಬಳಿ ತೆರಳಿ 2.50 ಲ.ರೂ.ಗಳಿಗೆ ಕೊಲೆ ಸುಪಾರಿ ನೀಡಿದ್ದರು. ಇಸ್ಮಾಯಿಲ್‌ ಫ‌ರಂಗಿಪೇಟೆಯಲ್ಲಿ ಮೂರು ವಾಹನಗಳನ್ನು ಹೊಂದಿ ಬಾಡಿಗೆ ನಡೆಸುತ್ತಿದ್ದರು. ಆರೋಪಿಗಳು 2016ರ ಫೆ. 16ರಂದು ಸಂಜೆ ಇಸ್ಮಾಯಿಲ್‌ ಬಳಿ ಹೋಗಿ ಬೆಂಗಳೂರಿಗೆ ಬಾಡಿಗೆ ಇದೆ ಎಂದು ಕರೆದುಕೊಂಡು ಹೋಗಿದ್ದರು. ಅದರಂತೆ ಏಸ್‌ ವಾಹನದಲ್ಲಿ ತೆರಳಿದ್ದರು. ಇವರ ಜತೆ ಇನ್ನೋರ್ವ ಆರೋಪಿ ಚಾಲಕ ಶಬೀರ್‌ ಕೂಡ ಜತೆಯಾಗಿದ್ದ. ದಾರಿ ಮಧ್ಯೆ ನೆಲ್ಯಾಡಿ ಬಳಿ ಬಾರ್‌ನಲ್ಲಿ ಇಸ್ಮಾಯಿಲ್‌ಗೆ ಮದ್ಯ ಕುಡಿಸಿದ್ದರು. ಅನಂತರ ಮುಂದಕ್ಕೆ ಶಿರಾಡಿ ರಕ್ಷಿತಾರಣ್ಯದ ಕೆಂಪುಹೊಳೆ ತಲುಪಿದಾಗ ವಾಹನ ಕೆಟ್ಟು ಹೋಯಿತು. ಅಲ್ಲಿ ಆರೋಪಿಗಳು ಮತ್ತೆ ಇಸ್ಮಾಯಿಲ್‌ಅವರಿಗೆ ಮದ್ಯಪಾನ ಮಾಡಿಸಿದರು. ಕಾಡಿನಲ್ಲಿ ಯುವತಿಯೋರ್ವಳು ಇದ್ದಾಳೆ ಎಂದು ಆಮಿಷವೊಡ್ಡಿ ರಾತ್ರಿ 11.30ರ ಸುಮಾರಿಗೆ ಕಾಡಿನ ನಡುವೆ ಕರೆದುಕೊಂಡು ಹೋಗಿ ತಾವು ತಂದಿದ್ದ ಚೂರಿಯಿಂದ ಇಸ್ಮಾಯಿಲ್‌ ಅವರನ್ನು ಇರಿದು ಕೊಲೆ ಮಾಡಿದ್ದರು. ಮೃತದೇಹವನ್ನು ಅಲ್ಲಿಯೇ ತಗ್ಗಾದ ಸ್ಥಳದಲ್ಲಿಟ್ಟು ತರೆಗೆಲೆ, ಮಣ್ಣು ಹಾಕಿ ಮುಚ್ಚಿಟ್ಟಿದ್ದರು. ವಾಹನವನ್ನು ಮರಳಿ ಉಪ್ಪಿನಂಗಡಿ ಬಜತ್ತೂರಿನ ನೀರಕಟ್ಟೆಗೆ ತಂದು ನಿಲ್ಲಿಸಿದ್ದರು. ಇಸ್ಮಾಯಿಲ್‌ನ ಮೊಬೈಲ್‌ ಮತ್ತು ಬಟ್ಟೆಯನ್ನು ತಂದು ನೇತ್ರಾವತಿ ನದಿಗೆ ಎಸೆದಿದ್ದರು.
ಪತ್ನಿಯಿಂದ ನಾಪತ್ತೆ ದೂರು
ಒಂದೆಡೆ ಸುಪಾರಿಯ ಹಣವನ್ನು ನೀಡುವುದಕ್ಕಾಗಿ ಚಿನ್ನವನ್ನು ಗಿರವಿ ಇಟ್ಟ ನೆಬಿಸಾ, ಇನ್ನೊಂದೆಡೆ ಪತಿ ಇಸ್ಮಾಯಿಲ್‌ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದಳು.
ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ ಪರವಾಗಿ ಆರಂಭದಲ್ಲಿ ಸರಕಾರಿ ಅಭಿಯೋಜಕರಾದ ವಿ.ಶೇಖರ ಶೆಟ್ಟಿ ವಾದ ನಡೆಸಿದ್ದರು. ಅನಂತರ ಸರಕಾರಿ ಅಭಿಯೋಜಕರಾದ ಚೌಧರಿ ಮೋತಿಲಾಲ್‌ ಅವರು ವಾದ ಮಂಡಿಸಿದ್ದರು. ಸರಕಾರಿ ಅಭಿಯೋಜಕರಾದ ಜುಡಿತ್‌ ಎಂ.ಒ.ಕ್ರಾಸ್ತಾ ಮತ್ತು ಜ್ಯೋತಿ ಪಿ. ನಾಯಕ್‌ ಅವರು ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಕೊಣಾಜೆ ಠಾಣೆಯ ಇನ್‌ಸ್ಪೆಕ್ಟರ್‌ ಅಶೋಕ್‌ ಪಿ. ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಒಂದು ದಿನದ ಬಳಿಕ ವಾಹನ ಪತ್ತೆ
ಇಸ್ಮಾಯಿಲ್‌ನ ವಾಹನ ಬಜತ್ತೂರಿನ ನೀರಕಟ್ಟೆಯಲ್ಲಿ ಫೆ.18ರಂದು ಪತ್ತೆಯಾಗಿ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ವಾಹನದೊಳಗೆ ರಕ್ತದ ಕಲೆಗಳು ಕೂಡ ಇದ್ದವು. ಇದನ್ನು ಗಮನಿಸಿದ ಇಸ್ಮಾಯಿಲ್‌ ಅವರ ಪುತ್ರ (ಮೊದಲನೇ ಪತ್ನಿಯ ಪುತ್ರ) ನೆಬಿಸಾ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನೆಬಿಸಾಳನ್ನು ತನಿಖೆಗೆ ಒಳಪಡಿಸಿದಾಗ ಪ್ರಕರಣ ಬಯಲಿಗೆ ಬಂದಿತ್ತು.

ಶಿಕ್ಷೆ ಪ್ರಕಟ
ನ್ಯಾಯಾಧೀಶರಾದ ಕಾಂತಜಾರು ಎಸ್‌.ವಿ. ಅವರು ಆರೋಪಿಗಳ ಅಪರಾಧ ಸಾಬೀತಾಗಿರುವುದರಿಂದ ಐಪಿಸಿ 302ರಂತೆ ಜೀವಾವಧಿ ಹಾಗೂ 2 ಲ.ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಮತ್ತೆ ಹೆಚ್ಚುವರಿ 2 ವರ್ಷ ಕಾರಾಗೃಹ, ಐಪಿಸಿ 201ರಡಿ 7 ವರ್ಷ ಕಠಿನ ಸಜೆ, 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಕಾರಾಗೃಹ, ಐಪಿಸಿ 120ರಡಿ 7 ವರ್ಷ ಕಠಿನಸಜೆ ಮತ್ತು 50,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಇಸ್ಮಾಯಿಲ್‌ ಅವರ ಮಕ್ಕಳಿಗೆ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ಮಾಡಿದ್ದಾರೆ.

ಟಾಪ್ ನ್ಯೂಸ್

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

ವಿಹಿಂಪ ರಾ.ಪ್ರ.ಕಾರ್ಯದರ್ಶಿ ಪರಾಂಡೆ ಮಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ‌

ವಿಹಿಂಪ ರಾ.ಪ್ರ.ಕಾರ್ಯದರ್ಶಿ ಪರಾಂಡೆ ಮಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.