Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

ಗದ್ದೆಗಳಲ್ಲಿ ಝಾರ್ಖಂಡ್‌, ಒಡಿಶಾದ ಕಾರ್ಮಿಕರು

Team Udayavani, Jul 3, 2024, 7:45 AM IST

Agriculture-Tracator

ಉಡುಪಿ: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಮುಂಗಾರು ಸಮಾಧಾನ ತಂದಿದ್ದು, ಕೃಷಿ ಚಟುವಟಿ ಕೆಗಳಿಗೂ ವೇಗ ಸಿಕ್ಕಿದೆ. ಆದರೂ ಭತ್ತ ಬೆಳೆಯುವ ಕೃಷಿಕರ ಮೊಗದಲ್ಲಿ ಖುಷಿ ಯಿಲ್ಲ. ಕಾರಣ, ನೇಜಿ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ.
ರೈತರು ಕೂಡಲೇ ಭತ್ತದ ಕೃಷಿ ಮಾಡಬೇಕಿರುವ ಕಾರಣ ದುಬಾರಿ ಹಣ ತೆತ್ತು ಖಾಸಗಿ ಮಾಲಕತ್ವದ ಯಂತ್ರಗಳನ್ನೇ ಆಶ್ರಯಿಸಬೇಕಿದೆ.
ಉಡುಪಿ ಜಿಲ್ಲೆಯಲ್ಲಿ 36, 509 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9,390 ಹೆಕ್ಟೇರ್‌ಗಳ ಬಿತ್ತನೆಯ ಗುರಿ ಹೊಂದಲಾಗಿದೆ. ಇದರಲ್ಲಿ ಸಾಂಪ್ರದಾ ಯಿಕ ಪದ್ಧತಿಯಲ್ಲಿ ಕೃಷಿ ಮಾಡುವ ರೈತರ ಸಂಖ್ಯೆ ಕಡಿಮೆ. ಉಳುಮೆಗೆ ಎತ್ತುಗಳನ್ನು ಬಳಸುವವರಿಲ್ಲ. ಗದ್ದೆ ಹದಗೊಳಿಸಲು, ನೇಜಿಗೆ ಯಂತ್ರ ಗಳೇ ಗತಿ. ಆದರೆ ಜಿಲ್ಲಾದ್ಯಂತ ಯಂತ್ರಗಳ ಕೊರತೆ ತೀವ್ರವಾಗಿದೆ.
ಹೋಬಳಿಗೆ ಒಂದರಂತೆ ಉಡುಪಿ ಜಿಲ್ಲೆಯ 9 ಹೋಬಳಿಗಳಲ್ಲಿ ಕೃಷಿ ಇಲಾಖೆಯ ಮೂಲಕ ರೈತರಿಗೆ ಕೈಗೆಟುಕುವ ದರದಲ್ಲಿ ಟ್ರ್ಯಾಕ್ಟರ್‌ ಹಾಗೂ ನೇಜಿ ಯಂತ್ರವನ್ನು ಬಾಡಿ ಗೆಗೆ ನೀಡುವ ವ್ಯವಸ್ಥೆ ಇತ್ತೀಚಿನ ವರ್ಷಗಳಲ್ಲಿ ಜಾರಿ ಮಾಡಲಾಗಿತ್ತು. 9 ರಲ್ಲಿ ಉಡುಪಿ ಹಾಗೂ ವಂಡ್ಸೆ ಹೋಬಳಿಯಲ್ಲಿ ತಲಾ ಒಂದು ಯಂತ್ರ ಕಾರ್ಯ ನಿರ್ವಹಿಸುತ್ತಿದೆ. ಉಳಿದ 7 ಹೋಬಳಿಗಳಲ್ಲಿ ಕೃಷಿ ಇಲಾಖೆಯ ಯಂತ್ರವಿಲ್ಲ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಬೈಂದೂರು, ಬ್ರಹ್ಮಾವರ, ಅಜೆಕಾರಿನಲ್ಲಿ ಬಾಡಿಗೆಗೆ ನೀಡಲಾ ಗುತ್ತದೆ. ಉಳಿದೆಲ್ಲೆಡೆ ರೈತರು ಖಾಸಗಿ ಯಂತ್ರಗಳ ಮೂಲಕವೇ ಭತ್ತದ ಕೃಷಿ ಮಾಡಬೇಕಾಗಿದೆ.
ಖಾಸಗಿ ದುಬಾರಿ
ಕೃಷಿ ಇಲಾಖೆಯ ಯಂತ್ರಕ್ಕೆ ಗಂಟೆಗೆ 800ರಿಂದ 850 ರೂ. ಬಾಡಿಗೆ ಇದ್ದರೆ, ಖಾಸಗಿ ಮಾಲಕತ್ವದ ಯಂತ್ರಗಳಿಗೆ 1,500 ರಿಂದ 1,600 ರೂ. ಇರುತ್ತದೆ. ಕೆಲವೆಡೆ ಇನ್ನೂ ದುಬಾರಿ. ಸ್ಥಳೀಯ ಬೇಡಿಕೆಯ ಆಧಾರದಲ್ಲಿ ದರ ಹೆಚ್ಚಳ ಮಾಡಲಾಗುತ್ತದೆ. ಕೆಲವು ಕಡೆಗಳಲ್ಲಿ ದುಬಾರಿ ಹಣ ನೀಡಿದರೂ ಯಂತ್ರಗಳಿಲ್ಲ ಎನ್ನುತ್ತಾರೆ ರೈತರು.
ಭತ್ತದ ಕೃಷಿಗೆ ಕಾರ್ಮಿಕರು ಸಿಗದಿರುವುದು ಹೊಸತಲ್ಲ. ಹೀಗಾ ಗಿ ಬಹುತೇಕ ರೈತರು ಯಂತ್ರದ ಮೊರೆ ಹೋಗಿದ್ದರು. ಈಗ ರೈತರಿಗೆ ಕೈಗೆಟುಕುವ ದರದಲ್ಲಿ ಯಂತ್ರವೂ ಸಿಗದ ಕಾರಣ ಪುನಃ ಕೃಷಿಗೆ ಕಾರ್ಮಿಕರ ಅಗತ್ಯವಿದೆ. ಈ ಹಿಂದೆ ಇತರೆ ಜಿಲ್ಲೆಯ ಕಾರ್ಮಿಕರು ಭತ್ತದ ಕೃಷಿ ಚಟುವಟಿಕೆಗೆ ಲಭ್ಯವಾಗು ತ್ತಿದ್ದರು. ಇದೀಗ ಝಾರ್ಖಂಡ್‌ ಹಾಗೂ ಒಡಿಶಾದ ಕಾರ್ಮಿಕರು ಹೆಚ್ಚಾಗಿ ಭತ್ತದ ಕೃಷಿಗೆ ಬರುತ್ತಿದ್ದಾರೆ. ಈ ರಾಜ್ಯಗಳಲ್ಲೂ ಭತ್ತದ ಕೃಷಿ ಇರುವ ಕಾರಣ ಸುಲಭವಾಗಿ ಒಗ್ಗಿ ಕೊಳ್ಳುತ್ತಾರೆ. ವಿಶೇಷ ತರಬೇತಿ ಅಗತ್ಯವಿಲ್ಲ. ಆದರೆ, ಜುಲೈ ಬಳಿಕ ಇವರು ಸಿಗುವುದಿಲ್ಲ. ಅವರ ರಾಜ್ಯಗಳಲ್ಲಿ ಕೃಷಿ ಚಟುವಟಿಕೆ ಆರಂಭವಾಗುವುದರಿಂದ ಅವರೆಲ್ಲ ಅಲ್ಲಿಗೆ ಮರಳುತ್ತಾರೆ. ಒಟ್ಟಿನಲ್ಲಿ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ. ಕಾರ್ಮಿಕರೂ ಸಿಗದಂತಾಗಿದೆ ಎನ್ನುತ್ತಾರೆ ರೈತರು.

“ಜಿಲ್ಲೆಯಲ್ಲಿ 2 ಯಂತ್ರ ಕಾರ್ಯ ನಿರ್ವ ಹಿಸುತ್ತಿವೆ. ಉಳಿದೆಡೆ ಆದಷ್ಟು ಬೇಗ ಯಂತ್ರಗಳ ಲಭ್ಯತೆಗೆ ಕ್ರಮ ಕೈಗೊಳ್ಳುತ್ತೇವೆ.”
-ಡಾ. ಸೀತಾ ಎಂ.ಸಿ., ಜಂಟಿ ನಿರ್ದೇಶಕರು, ಕೃಷಿ ಇಲಾಖೆ ಉಡುಪಿ

ನಿರ್ವಹಣೆ ಕೊರತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿ ಪ್ರಮಾಣ ಕಡಿಮೆಯಿದೆ. ಸುಮಾರು 9,390 ಹೆಕ್ಟೇರ್‌ಗೆ ಎಲ್ಲ ಹೋಬಳಿಗಳಲ್ಲೂ ಒಂದೊಂದು ಯಂತ್ರವಿದ್ದು, ಪರಿ ಣಾಮಕಾರಿಯಾಗಿ ಬಳಸಲಾಗುತ್ತಿದೆ. ಆದರೆ ಉಡುಪಿ ಜಿಲ್ಲೆಯಲ್ಲಿ 2 ಯಂತ್ರ ಮಾತ್ರ ಇದೆ. ಉಳಿದೆಡೆ ಕೃಷಿ ಇಲಾಖೆಯ ಯಂತ್ರ ಇದ್ದರೂ ನಿರ್ವಹಣೆ ಇಲ್ಲ.ಕೃಷಿ ಇಲಾಖೆಯ ಉನ್ನತಾಧಿಕಾರಿಗಳು ಈ ಬಗ್ಗೆ ತತ್‌ಕ್ಷಣ ಎಚ್ಚೆತ್ತು ಅಗತ್ಯವಿರುವ ಕಡೆ ಯಂತ್ರ ಲಭ್ಯತೆ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.