![Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ](https://www.udayavani.com/wp-content/uploads/2024/07/COW-a-415x224.jpg)
Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ
ನಿಧಾನಗತಿಯಲ್ಲಿ ಸಾಗುವ ವಾಹನಗಳಿಂದಾಗಿ ಆಗಾಗ ಟ್ರಾಫಿಕ್ ಜಾಮ್
Team Udayavani, Jul 3, 2024, 12:55 AM IST
![Road](https://www.udayavani.com/wp-content/uploads/2024/07/Road-620x349.jpg)
ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರು ವುದರಿಂದ ಮಳೆಗೆ ಬಿ.ಸಿ.ರೋಡಿನಿಂದ ಕಲ್ಲಡ್ಕವರೆಗೂ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಇದರಿಂದಾಗಿ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಪದೇ ಪದೇ ಟ್ರಾಫಿಕ್ ಜಾಮ್ನ ಕಿರಿಕಿರಿ ಉಂಟಾಗುತ್ತಿದೆ.
ಹೆದ್ದಾರಿಯುದ್ದಕ್ಕೂ ಹೊಂಡ ಗುಂಡಿಗಳ ಜತೆಗೆ ಸಾಕಷ್ಟು ಭಾಗಗಳಲ್ಲಿ ರಸ್ತೆ ಅಗೆದು ಹಾಕಿರುವುದರಿಂದ ಮಣ್ಣು ಸವೆದು ಕೇವಲ ಕಲ್ಲುಗಳು ಉಳಿದುಕೊಂಡಿದೆ. ಇದರಿಂದ ಕಾರು, ಆಟೋ ರಿಕ್ಷಾ ಸೇರಿದಂತೆ ಸಣ್ಣಪುಟ್ಟ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ವಾಹನಗಳ ಓಡಾಟ ಹೆಚ್ಚಿದ್ದಾಗ ವಾಹನಗಳ ಸರತಿ ಕಂಡುಬರುತ್ತಿದೆ.
ಮೆಲ್ಕಾರಿನ ಬೋಳಂಗಡಿಯಿಂದ ನರಹರಿ ಪರ್ವತ-ಕಲ್ಲಡ್ಕ ಮಧ್ಯೆ ವಾಹನಗಳು ತೀರಾ ನಿಧಾನಗತಿಯಲ್ಲಿ ಸಾಗುತ್ತಿರುವ ಕಾರಣ ಹೆಚ್ಚಿನ ಹೊತ್ತು ಸಂಚಾರದೊತ್ತಡ ಕಂಡುರುತ್ತಿದೆ. ಕಲ್ಲಡ್ಕದ ಬಳಿಕ ಕುದ್ರೆಬೆಟ್ಟಿನಿಂದ ಹೆಚ್ಚಿನ ಕಡೆ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದ್ದು, ಅಲ್ಲಿ ಯಾವುದೇ ಆತಂಕವಿಲ್ಲ.
ಬಿ.ಸಿ.ರೋಡಿನಿಂದ ಹೆದ್ದಾರಿಯಲ್ಲಿ ಸಾಗಿದ ವಾಹನಗಳು ಮಾಣಿಯ ಬಳಿಕ ಪುತ್ತೂರು ಕಡೆಗೂ ಸಾಗುವುದರಿಂದ ಹೆದ್ದಾರಿಯಲ್ಲಿ ಯಾವುದೇ ರೀತಿಯ ಸಂಚಾರದೊತ್ತಡ ಇರುವುದಿಲ್ಲ. ಆದರೆ ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹೆದ್ದಾರಿ ಅವ್ಯವಸ್ಥೆಯಿಂದ ವಾಹನಗಳು ಬಹಳ ನಿಧಾನವಾಗಿ ಚಲಿಸಿ ತೊಂದರೆಯಾಗುತ್ತಿದೆ ಎಂದು ಬಂಟ್ವಾಳ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಬಿ.ಸಿ.ರೋಡು ಸರ್ಕಲ್: ಸಂಚಾರ ಪಥ ಬದಲಾವಣೆ
ಕಾಮಗಾರಿಯ ಹಿನ್ನೆಲೆಯಲ್ಲಿ ಬಿ.ಸಿ.ರೋಡು ಸರ್ಕಲ್ನಲ್ಲಿ ಪದೇ ಪದೇ ಸಂಚಾರದ ಪಥ ಬದಲಾಗುವುದರಿಂದ ವಾಹನ ಚಾಲಕರು/ಸವಾರರು ಗೊಂದಲಕ್ಕೆ ಒಳಗಾಗುತ್ತಿದ್ದು, ಜತೆಗೆ ಕಾಮಗಾರಿಗಾಗಿ ರಸ್ತೆಯನ್ನು ಕಿರಿದಾಗಿಸಿರುವುದರಿಂದ ಬಸ್ ಸೇರಿದಂತೆ ಘನ ವಾಹನ ತಿರುಗಲು ಕಷ್ಟವಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಮಳೆಗೆ ಹೊಂಡಗಳು ಸೃಷ್ಟಿಯಾಗಿ ಹೊಂಡ, ನೀರು ನಿಂತಿರುವುದನ್ನು ತಪ್ಪಿಸಲು ವಾಹನದವರು ಅಡ್ಡಾದಿಡ್ಡಿ ತಿರುಗಿಸುವುದರಿಂದಲೂ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಟಾಪ್ ನ್ಯೂಸ್
![Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ](https://www.udayavani.com/wp-content/uploads/2024/07/COW-a-415x224.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ](https://www.udayavani.com/wp-content/uploads/2024/07/COW-a-150x81.jpg)
Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-150x105.jpg)
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
![Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ](https://www.udayavani.com/wp-content/uploads/2024/07/ravikumar-150x86.jpg)
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
![ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು](https://www.udayavani.com/wp-content/uploads/2024/07/9-4-150x90.jpg)
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
![CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ](https://www.udayavani.com/wp-content/uploads/2024/07/courts-150x102.jpg)
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
MUST WATCH
ಹೊಸ ಸೇರ್ಪಡೆ
![Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು](https://www.udayavani.com/wp-content/uploads/2024/07/flower-150x75.jpg)
Yellapur ಒಂದೇ ಮೊಗ್ಗಲ್ಲಿ ಹೂವೆರಡು; ಇದು ಪ್ರಕೃತಿಯ ಸೊಬಗು
![Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ](https://www.udayavani.com/wp-content/uploads/2024/07/COW-a-150x81.jpg)
Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ
![Kharajola](https://www.udayavani.com/wp-content/uploads/2024/07/Kharajola-150x90.jpg)
MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ
![Dravid–gavskar](https://www.udayavani.com/wp-content/uploads/2024/07/Dravid-gavskar-150x90.jpg)
Indian Cricket; ರಾಹುಲ್ ದ್ರಾವಿಡ್ಗೆ ಭಾರತ ರತ್ನ ಕೊಡಿ: ಗವಾಸ್ಕರ್
![rain 21](https://www.udayavani.com/wp-content/uploads/2024/07/rain-21-150x95.jpg)
Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.