Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ


Team Udayavani, Jul 3, 2024, 2:59 PM IST

koo

ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್‌ಗೆ (ಈಗಿನ ಎಕ್ಸ್) ಪೈಪೋಟಿ ನೀಡಲು ಅಸ್ತಿತ್ವಕ್ಕೆ ಬಂದಿದ್ದ ದೇಶಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಕಂಪೆನಿಯ ಸಂಸ್ಥಾಪಕರು ಅಧಿಕೃತ ಹೇಳಿಕೆ ನೀಡಿದ್ದಾರೆ.

ಟ್ವಿಟರ್ ಗೆ ಪರ್ಯಾಯವಾಗಿ ಕಳೆದ ನಾಲ್ಕು ವರ್ಷದ ಹಿಂದೆ ಅಸ್ತಿತ್ವಕ್ಕೆ ತಂದಿದ್ದ ಕೂ ಆ್ಯಪ್ ಆರಂಭದಲ್ಲಿ 20 ಲಕ್ಷ ದೈನಂದಿನ ಸಕ್ರಿಯ ಬಳಕೆದಾರರನ್ನು ಒಳಗೊಂಡಂತೆ 1 ಕೋಟಿ ಮಾಸಿಕ ಬಳಕೆದಾರರನ್ನು ಹೊಂದಿತ್ತು ಎನ್ನಲಾಗಿದೆ. ಅಲ್ಲದೆ ಈ ಆ್ಯಪ್ ನಲ್ಲಿ ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಬಳಕೆದಾರರರನ್ನು ಹೊಂದಿತ್ತು ಆದರೆ ಬಳಕೆದಾರರನ್ನು ಉಳಿಸಿಕೊಳ್ಳುವಲ್ಲಿ ‘ಕೂ’ ವಿಫಲವಾಗಿದೆ.

ಇದಾದ ಬಳಿಕ 5 ಬಿಲಿಯನ್ ಡಾಲರ್ ಮೌಲ್ಯಕ್ಕೆ ಕೂ ಅನ್ನು ಮಾರಾಟ ಮಾಡುವ ಕುರಿತು ಮಾತುಕತೆ ಕೂಡ ನಡೆದಿತ್ತು ಆದರೆ ಕೊನೆಯಲ್ಲಿ ಈ ಮಾತುಕತೆ ಕೂಡ ವಿಫಲವಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರು ಹೇಳಿಕೊಂಡಿದ್ದಾರೆ.

ಕೂ ಆ್ಯಪ್ ಸ್ವಾಧೀನದ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೆಯುತ್ತಿತ್ತು ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಕೂ ಕಂಪನಿಯ ಸಹ-ಸಂಸ್ಥಾಪಕ ಮಯಾಂಕ್ ಬಿಡವಟ್ಕಾ ಅವರು ಇತ್ತೀಚೆಗೆ ಲಿಂಕ್ಡ್‌ಇನ್‌ನಲ್ಲಿ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದು, ನಾವು ಅನೇಕ ದೊಡ್ಡ ಇಂಟರ್ನೆಟ್ ಕಂಪನಿಗಳು, ಮಾಧ್ಯಮ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿದ್ದೇವೆ ಆದರೆ ನಾವು ಬಯಸಿದ ಫಲಿತಾಂಶ ಸಿಗಲಿಲ್ಲ ಹಾಗಾಗಿ ಕೊನೆಗೆ ಈ ನಿರ್ಧಾರಕ್ಕೆ ಬರಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.

2020ರಲ್ಲಿ ಉದ್ಯಮಿಗಳಾದ ಅಪ್ರಮೇಯ ರಾಧಾಕೃಷ್ಣ ಹಾಗೂ ಮಯಾಂಕ್ ಬಿಡವಟ್ಕಾ ಎಂಬುವವರು ‘ಕೂ’ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದ್ದರು ಅಷ್ಟು ಮಾತ್ರವಲ್ಲದೆ ಹತ್ತು ಭಾಷೆಗಳಲ್ಲಿ ಬಳಕೆದಾರರಿಗೆ ಲಭ್ಯವಾಗುತ್ತಿತ್ತು. ಹಳದಿ ಬಣ್ಣದ ಹಕ್ಕಿಯ ಲೋಗೊ ಹೊಂದಿತ್ತು. ಇಲ್ಲಿಯವರೆಗೆ ಈ ಅಪ್ಲಿಕೇಶನ್ 60 ಮಿಲಿಯನ್ ಅಂದರೆ 6 ಕೋಟಿಗೂ ಹೆಚ್ಚು ಬಾರಿ ಡೌನ್‌ಲೋಡ್ ಆಗಿದೆ ಎಂದು ಹೇಳಲಾಗಿದೆ.

‘ಕೂ’ ಪ್ರತಿ ತಿಂಗಳು 10 ಮಿಲಿಯನ್ ಸಕ್ರಿಯ ಬಳಕೆದಾರರು, 2.1 ಮಿಲಿಯನ್ ದೈನಂದಿನ ಸಕ್ರಿಯ ಬಳಕೆದಾರರು, ಪ್ರತಿ ತಿಂಗಳು 10 ಮಿಲಿಯನ್ ಪೋಸ್ಟ್‌ಗಳು ಮುಖ್ಯವಾಗಿ ಕೂ ಅಪ್ಲಿಕೇಶನ್‌ನಲ್ಲಿ 9 ಸಾವಿರಕ್ಕೂ ಹೆಚ್ಚು ವಿಐಪಿ ಖಾತೆಗಳು ಇದ್ದವು ಎಂದು ಕಂಪನಿಯ ಸಹ-ಸಂಸ್ಥಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

1-car

SU7; ಭಾರತಕ್ಕೂ ಶೀಘ್ರ ಬರಲಿದೆ ಶಿಯೋಮಿ ಎಲೆಕ್ಟ್ರಿಕ್‌ ಕಾರು!

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.