Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
Team Udayavani, Jul 3, 2024, 5:06 PM IST
ಪಾಟ್ನಾ: ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸದ್ಯ ನಿಲ್ಲುವ ಹಾಗೆ ಕಾಣುತ್ತಿಲ್ಲ ಇಂದು ಮತ್ತೆ ಹಳೆಯ ಸೇತುವೆಯೊಂದು ಕುಸಿದಿದ್ದು ಇದರೊಂದಿಗೆ ಕಳೆದ ಹದಿನೈದು ದಿನಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ಏಳನೇ ಘಟನೆಯಾಗಿದೆ.
ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಹಳೆಯ ಸೇತುವೆ ಕುಸಿದು ಬಿದ್ದಿದೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮಾರು 35 ವರ್ಷಗಳಷ್ಟು ಹಳೆಯದಾದ ಎರಡು ಸೇತುವೆಗಳು ಜಿಲ್ಲೆಯ ಡಿಯೋರಿಯಾ ಪ್ರದೇಶದಲ್ಲಿದ್ದು ಇದೀಗ ಎರಡು ಸೇತುವೆಗಳು ಕುಸಿದಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಸೇತುವೆ ಕುಸಿತದಿಂದ ವಾಹನ ಸಂಚಾರ ಹಾಗೂ ಜನ ಸಂಚಾರಕ್ಕೆ ಅಡ್ಡಿಯಾಗಿದೆ.
ಕುಸಿದಿರುವ ಎರಡು ಸೇತುವೆಗಳ ಪೈಕಿ ಒಂದನ್ನು 1998ರಲ್ಲಿ ಆಗಿನ ಸಂಸದ ಪ್ರಭುನಾಥ್ ಸಿಂಗ್ ಅವರ ನಿಧಿಯಿಂದ 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೊಂದು ಸೇತುವೆಯನ್ನು 2004ರಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ. ಈ ಸೇತುವೆಗಳು ನಿರ್ಮಾಣವಾದಂದಿನಿಂದ ಇಂದಿನವರೆಗೂ ಯಾವುದೇ ದುರಸ್ತಿ ಕಾರ್ಯ ನಡೆದಿಲ್ಲ ಎನ್ನಲಾಗಿದೆ.
ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್ಗಂಜ್ನಂತಹ ಜಿಲ್ಲೆಗಳಲ್ಲಿ ಇತ್ತೀಚೆಗೆ ಇದೇ ರೀತಿಯ ಹಲವು ಘಟನೆಗಳು ವರದಿಯಾಗಿವೆ ಅಲ್ಲದೆ ಸೇತುವೆ ಕುಸಿತ ಘಟನೆಗಳ ತನಿಖೆಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಬಿಹಾರ ಸರಕಾರಕ್ಕೆ ಆಗ್ರಹ ಮಾಡಿದ್ದಾರೆ.
ಇದನ್ನೂ ಓದಿ: Bollywood: 8 ವರ್ಷದ ಬಳಿಕ ಬಾಲಿವುಡ್ಗೆ ಪಾಕ್ ನಟ ಫವಾದ್ ಖಾನ್ ಕಂಬ್ಯಾಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.