Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

ಫ್ರಾನ್ಸ್‌ ದೇಶದ ವಿದ್ಯಾರ್ಥಿಗಳ ತಂಡದಿಂದ ತ್ಯಾಜ್ಯ ಶೇಖರಣೆ; ಪ್ಲಾಸ್ಟಿಕ್‌ ಬಳಕೆ ನಿಷೇಧದ ಕುರಿತು ಜಾಗೃತಿ

Team Udayavani, Jul 3, 2024, 10:46 PM IST

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

ಮಹಾಲಿಂಗಪುರ: ಪ್ಲಾಸ್ಟಿಕ್‌ ಬಳಕೆ ಮಾಡಿ ಬಿಸಾಡಿದ ತ್ಯಾಜ್ಯದಿಂದ ಹಾನಿಕಾರಕ ರಾಸಾಯನಿಕಗಳು ಉತ್ಪತ್ತಿಯಾಗಿ ಮನುಕುಲಕ್ಕೆ ವಿವಿಧ ಕಾಯಿಲೆಗಳು ಬರುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಯನಗಳಿಂದ ದೃಢಪಟ್ಟಿದೆ ಎಂದು ಯು.ಎ.ಎಂ (ಆಯ್‌.ಎಸ್‌ಸಿ)ಅಂತಾರಾಷ್ಟ್ರೀಯ ಸಂಸ್ಥೆಯ ವಿದ್ಯಾರ್ಥಿ ಫ್ರಾನ್ಸ್‌ ದೇಶದ ಸೋರೇನ್‌ ಹೇಳಿದರು.

ಜತ್ತಿ ಫೌಂಡೇಷನ್‌, ಯ.ಎ.ಎಂ. ಕೆಎಲ್‌ಇ ಶಿಕ್ಷಣ ಸಂಸ್ಥೆ, ಕೆಜೆ ಸೋಮಯ್ಯ ಶಿಕ್ಷಣ ಸಂಸ್ಥೆ, ಸರ್ಕಾರಿ ಪ್ರೌಢಶಾಲೆ ಮತ್ತು ಪುರಸಭೆಯ ಸಹಯೋಗದಲ್ಲಿ ಬುಧವಾರ ಪ್ಲಾಸ್ಟಿಕ್‌ ಚೀಲಗಳ ನಿಷೇಧ ದಿನ ಮತ್ತು ಪ್ಲಾಸ್ಟಿಕ್‌ ಮುಕ್ತ ವಿಶ್ವ ಕಾರ್ಯಕ್ರಮದ ಅಂಗವಾಗಿ ಪ್ಲಾಗೋತ್ಥಾನ ಕಾರ್ಯಕ್ರಮ ನಡೆಯಿತು.

ಜತ್ತಿ ಫೌಂಡೇಶನ ಕಾರ್ಯಕರ್ತರು, ಸ್ಕೌಟ್ಸ್‌ ಮತ್ತು ಗೈಡ್ಸ್‌, ಕೆಎಲ್‌ಇ ಸಂಸ್ಥೆಯ ಪಿಯು ಮತ್ತು ಪದವಿ ಸೇರಿ 200 ವಿದ್ಯಾರ್ಥಿಗಳೊಂದಿಗೆ ಫ್ರಾನ್ಸ್‌ ದೇಶದ ಎಂಟು ಜನ ವಿದ್ಯಾರ್ಥಿಗಳ ಸಮೂಹವು ಹಲವು ತಂಡಗಳನ್ನು ರಚಿಸಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಶೇಖರಿಸಿ, ಸಾರ್ವಜನಿಕರಿಗೆ ಪ್ಲಾಸ್ಟಿಕ್‌ ಬಳಕೆಯ ನಿಷೇಧದ ಜಾಗೃತಿ ಮೂಡಿಸಿ, ನಂತರ ಕೆಎಲ್‌ಇ ಪದವಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಪ್ಲಾಸ್ಟಿಕ್‌ ತ್ಯಾಜ್ಯಗಳಿಂದ ಹೊರ ಸೂಸುವ ರಾಸಾಯನಿಕಗಳಿಂದ ವಾಯು ಮಂಡಲ ಕಲುಷಿತಗೊಂಡು ಮಾನವನ ಎಲುಬುಗಳಿಗೆ ಹಾನಿ, ಕ್ಯಾನ್ಸರ್‌, ಕಣ್ಣುಗಳಿಗೆ, ಚರ್ಮದ ಮೇಲೆ, ಉಸಿರಾಟಕ್ಕೆ, ತಲೆ ನೋವಿಗೆ, ದೇಹಕ್ಕೆ ಆಯಾಸ, ಬಂಜೆತನ ಹಾಗೂ ಪುರುಷತ್ವದ ಮೇಲೆ ಗಾಢ ಪ್ರಭಾವ ಬೀರುತ್ತದೆ. ಆದ್ದರಿಂದ ಪ್ರತಿಯೊಬ್ಬರು ತಮ್ಮ ಪರಿಸರವನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವಿಧ್ಯಾರ್ಥಿಗಳಿಗೆ ಕರೆ ನೀಡಿದರು.

ಜತ್ತಿ ಫೌಂಡೇಷನ್‌ನ ಧೃವ ಜತ್ತಿ ಮಾತನಾಡಿ, ಪ್ಲಾಸ್ಟಿಕ್‌ ನಿಂದ ತಯಾರಾದ ವಸ್ತುಗಳಿಂದ ನೀರಿನ ಮೂಲಗಳು, ನದಿ, ಹಳ್ಳ,ಕೊಳ್ಳಗಳು, ಸಸ್ಯ ರಾಶಿ ಹಾಗೂ ಕೃಷಿ ಭೂಮಿಗಳು ಹದಗೆಟ್ಟು ಹೋಗುತ್ತಿವೆ. 2050 ರ ಹೊತ್ತಿಗೆ ಸಮುದ್ರದಲ್ಲಿಯ ಒಟ್ಟಾರೆ ಮೀನುಗಳಿಗಿಂತ ಪ್ಲಾಸ್ಟಿಕ್‌ ತ್ಯಾಜ್ಯವೇ ತುಂಬಿ ಸಮುದ್ರ ಜೀವಿಗಳಿಗೆ ಕಂಟಕವಾಗಲಿದೆ. ನಾವು ಈಗಿನಿಂದಲೇ ಸಾರ್ವಜನಿಕರಲ್ಲಿ ಪ್ಲಾಸ್ಟಿಕ್‌ ಮುಕ್ತಕ್ಕಾಗಿ ಜಾಗೃತಿ ಅಭಿಯಾನ ಆರಂಭಿಸಬೇಕು. ಇದರಿಂದ ಭವಿಷ್ಯದಲ್ಲಿ ನೆಮ್ಮದಿ ಸಿಗಲಿದೆ. ಇಲ್ಲದಿದ್ದರೆ ಮುಂದಿನ ಪೀಳಿಗೆ ಘೋರ ಪರಿಣಾಮ ಎದುರಿಸುವುದು ನಿಶ್ಚಿತ ಎಂದರು.

ಈ ಸಂದರ್ಭದಲ್ಲಿ ಫ್ರಾನ್ಸ್‌ ದೇಶದ ವಿದ್ಯಾರ್ಥಿಗಳಾದ ಸೋರೇನ್‌, ಲಾರಾ, ಇಜಿಯಾ, ಲಿಯಾನ್‌, ಹೇಯೂಗೋ, ಲುರೆಂಜೋ, ಇನೇಜ್‌ ಮತ್ತು ಪುರಸಭೆ ಮುಖ್ಯಾ ಧಿಕಾರಿ ಈರಣ್ಣ ದಡ್ಡಿ, ವ್ಯವಸ್ಥಾಪಕ ಎಸ್‌.ಎನ್‌. ಪಾಟೀಲ, ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎಂ. ಮುಗಳಖೋಡ, ಕಿರಿಯ ಆರೋಗ್ಯ ನಿರೀಕ್ಷಕರಾದ ಸಿದ್ದು ಅಳ್ಳಿಮಟ್ಟಿ, ರಾಜು ಹೂಗಾರ, ಪದವಿ ಕಾಲೇಜಿನ ಪ್ರಾಚಾರ್ಯ ಕೆ.ಎಂ. ಅವರಾದಿ, ಉಪಪ್ರಾಚಾರ್ಯ ಬಿ.ಎನ್‌. ಅರಕೇರಿ, ಉಪನ್ಯಾಸಕರಾದ ಎಲ್‌.ಬಿ. ತುಪ್ಪದ, ಶಿವಲಿಂಗ ಸಿದ್ನಾಳ, ರವಿ ಕಲ್ಲೋಳ್ಳಿ, ಪುರಸಭೆಯ ಮಹಾಲಿಂಗಪ್ಪ ಮುಗಳಖೋಡ, ರಾಜು ಹೂಗಾರ, ಸಿದ್ದು ಅಳ್ಳಿಮಟ್ಟಿ, ಕಾನಿಪ ಅಧ್ಯಕ್ಷ ಮಹೇಶ ಮನ್ನಯ್ಯನವಮಠ, ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಸ್ವಪ್ನ ಅನಿಗೋಳ, ಶಿವಲಿಂಗಪ್ಪ ಜುಟ್ನಟ್ಟಿ, ಸದಾಶಿವ ಕವಟಗಿ, ಸುರೇಶ ಬಾಡಗಿ, ತನುಜಾ ಬಾಡಗಿ, ಜತ್ತಿ ಫೌಂಡೇಷನ್‌ ಗೋಪಾಲ ಕರೆಪ್ಪನ್ನವರ, ವಿಜಯ ಬಿರಾದಾರ, ಶಶಿಕಾಂತ ಖಂಡ್ರೆ, ಸುರೇಶ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

12-mudhol

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.