Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

ಎರಡು ತಂಡಗಳಾಗಿ ಸಿಎಂ ಮನೆ ಮುತ್ತಿಗೆಗೆ ಕಮಲ ನಾಯಕರ ಯತ್ನ

Team Udayavani, Jul 4, 2024, 12:29 AM IST

BJP-Member

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌, ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬುಧವಾರ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಯಿತು.

ಜತೆಗೆ ಮೈಸೂರಿನಲ್ಲಿ ಮುಡಾದಿಂದ ಹಂಚಿಕೆಯಾಗಿರುವ ನಿವೇಶನಗಳನ್ನು ರದ್ದುಪಡಿಸಬೇಕೆಂದು ಇದೇ ಸಂದರ್ಭದಲ್ಲಿ ಪ್ರತಿಭಟನ ನಿರತ ಬಿಜೆಪಿಗರು ಒಕ್ಕೊರಲಿನಿಂದ ಆಗ್ರಹಿಸಿ ಸಿಎಂ ರಾಜೀನಾಮೆಗೆ ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯೋಜಿಸಿದ್ದ ಬಿಜೆಪಿಯು 2 ತಂಡಗಳಾಗಿ ಸಿಎಂ ನಿವಾಸದ ರಸ್ತೆಯಲ್ಲಿ ಬಂದು ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಆರಂಭದಲ್ಲಿ ಕುಮಾರಕೃಪಾ ಅತಿಥಿಗೃಹದಲ್ಲಿದ್ದ ಶಾಸಕರಾದ ವಿ. ಸುನೀಲ್‌ ಕುಮಾರ್‌, ಸಿ.ಕೆ. ರಾಮಮೂರ್ತಿ, ಸುರೇಶ್‌ಗೌಡ ಸೇರಿದಂತೆ ಇನ್ನಿತರರು ಹೊರಬಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಅತಿಥಿಗೃಹದಿಂದ ಹೊರಬರುತ್ತಿದ್ದಂತೆ ತಡೆದ ಪೊಲೀಸರ ಜತೆಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದ ಪ್ರಸಂಗ ನಡೆಯಿತು.

ಬ್ಯಾರಿಕೇಡ್‌ ತಳ್ಳಿ ನುಗ್ಗಿದ ನಾಯಕರು
ಹೆಚ್ಚಿನ ಭದ್ರತೆಗಾಗಿ ಸಿಎಂ ನಿವಾಸದ ಬಳಿ ಹೆಚ್ಚುವರಿ ಬ್ಯಾರಿಕೇಡ್‌ಗಳನ್ನು ಹಾಕಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು. ಹೆಚ್ಚುವರಿ ಪೊಲೀಸ್‌ ಸಿಬಂದಿಯನ್ನೂ ನಿಯೋಜಿಸಲಾಗಿತ್ತು. ಸರಕಾರದ ವಿರುದ್ಧ ಯಾವುದೇ ಘೋಷಣೆಗಳನ್ನೂ ಕೂಗದೆ ಸಿಎಂ ನಿವಾಸದತ್ತ ಹೆಜ್ಜೆ ಹಾಕಿದ ನಾಯಕರನ್ನು ಪೊಲೀಸರು ತಡೆಯಲು ಯತ್ನಿಸುತ್ತಿದ್ದಂತೆ ಕೆರಳಿದ ನಾಯಕರು, ಬ್ಯಾರಿಕೇಡ್‌ಗಳನ್ನು ತಳ್ಳಿಕೊಂಡು ಹೊರಟರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ಕೂಡ ನಡೆಯಿತು.

ಪೊಲೀಸರು-ಕಾರ್ಯಕರ್ತರ ನಡುವೆ ಚಕಮಕಿ
ದಾರಿಯಲ್ಲಿ ನಡೆದುಕೊಂಡು ಹೊರಟಿದ್ದ ಶಾಸಕರ ಮೈಮುಟ್ಟಿದ್ದರಿಂದ ಗರಂ ಆದ ಶಾಸಕರು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು. ನಾವೇನು ಪ್ರತಿಭಟಿಸುತ್ತಿದ್ದೇವಾ? ನಮ್ಮನ್ನೇಕೆ ಮುಟ್ಟುತ್ತೀರಿ? ಅದೇನು ನಿಮ್ಮ ಮನೆ ಆಸ್ತಿಯೇ? ಸಿಎಂ ಮನೆ ಅಲ್ಲವೇ? ಸಿಎಂ ಮನೆಗೆ ಪ್ರವೇಶವಿಲ್ಲವೇ? ತಡೆಯೊಡ್ಡುತ್ತಿರುವುದೇಕೆ ಎಂದು ಶಾಸಕ ಸುನೀಲ್‌ ಕುಮಾರ್‌ ಪೊಲೀಸರಿಗೆ ಬಿಸಿ ಮುಟ್ಟಿಸಿದರು. ಅಷ್ಟರಲ್ಲಿ ಪ್ರತಿಭಟನಾಕಾರರನ್ನು ಒಬ್ಬೊಬ್ಬರಾಗಿಯೇ ಪೊಲೀಸರು ವಶಕ್ಕೆ ಪಡೆದು ಬಸ್‌ ಹತ್ತಿಸಿದರು.

ಬಂಧಿಸುವಷ್ಟರಲ್ಲಿ ರಸ್ತೆಗಿಳಿದ ಮತ್ತೊಂದು ತಂಡ
ಅಷ್ಟರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ಶಾಸಕರ ದೊಡ್ಡ ದಂಡೇ ಆಗಮಿಸಿತು. ಶಿವಾನಂದ ವೃತ್ತದ ಕಡೆಯಿಂದ ಆಗಮಿಸಿದ ಶಾಸಕರಾದ ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಡಾ. ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ, ಗುರುರಾಜ್‌ ಗಂಟಿಹೊಳೆ, ಯಶ್‌ಪಾಲ್‌ ಸುವರ್ಣ, ಪ್ರತಾಪಸಿಂಹ ನಾಯಕ್‌, ಭಾರತಿ ಶೆಟ್ಟಿ ಅವರು ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಟಾಪ್ ನ್ಯೂಸ್

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-Kanahosahalli

Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.