Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
Team Udayavani, Jul 4, 2024, 11:17 AM IST
ಹೊಸದಿಲ್ಲಿ: ಐಸಿಸಿ ಟಿ20 ವಿಶ್ವಕಪ್ 2024ರ ಕೂಟದಲ್ಲಿ ವಿಕ್ರಮ ಸಾಧಿಸಿದ ಭಾರತ ತಂಡವು ಇಂದು ಭಾರತಕ್ಕೆ ವಾಪಾಸಾಗಿದೆ. ಬಾರ್ಬಡಾಸ್ ನಲ್ಲಿ ಚಂಡಮಾರುತದ ಕಾರಣದಿಂದ ತಂಡದ ಪ್ರಯಾಣ ನಿಗದಿತ ದಿನಕ್ಕಿಂತ ವಿಳಂಬವಾಗಿತ್ತು. ಇದೀಗ ವಿಶೇಷ ವಿಮಾನದಲ್ಲಿ ಟೀಂ ಇಂಡಿಯಾ ತಾಯ್ನಾಡಿಗೆ ಮರಳಿದೆ.
ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ತಾಯ್ನಾಡಿಗೆ ಮರಳಿದ ತಂಡವನ್ನು ಅಭಿಮಾನಿಗಳು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಮಳೆಯಿದ್ದರೂ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಕರಡಾತನದ ಮೂಲಕ ತಂಡವನ್ನು ಸ್ವಾಗತಿಸಿದರು.
ದೆಹಲಿ ಏರ್ ಪೋರ್ಟ್ ಗೆ ಬಂದಿಳಿದ ಆಟಗಾರರು, ಅವರ ಕುಟುಂಬಿಕರು ಮತ್ತು ಸಹಾಯಕ ಸಿಬ್ಬಂದಿ ಟೀಂ ಬಸ್ ನಲ್ಲಿ ಐಟಿಸಿ ಮೌರ್ಯ ಹೋಟೆಲ್ ಗೆ ತೆರಳಿದರು.
ಭಾರತೀಯ ಆಟಗಾರರನ್ನು ಸ್ವಾಗತಿಸಲು ಹೋಟೆಲ್ ಸಿಬ್ಬಂದಿ ವಿಶೇಷವಾಗಿ ತಯಾರಿಸಿದ ಕೇಕ್ ಮತ್ತು ತ್ರಿವರ್ಣದ ಸ್ವಾಗತ ಪಾನೀಯಗಳನ್ನು ಆಯೋಜಿಸಿದ್ದರು. ಆದರೆ, ಎಲ್ಲರ ಗಮನ ಸೆಳೆದ ಮತ್ತೊಂದು ವಿಷಯವೆಂದರೆ ಢೋಲ್ ವ್ಯವಸ್ಥೆ.
ಢೋಲ್ ನ ಬೀಟ್ ಗಳಿಗೆ ನಾಯಕ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಹೆಜ್ಜೆ ಹಾಕಿದರು. ಇದನ್ನು ಕಂಡ ಜನರು ಕರಾಡತನದ ಮೂಲಕ ಮೆಚ್ಚುಗೆ ಸೂಚಿಸಿದರು.
Captain Rohit Sharma dancing upon arrival to India. 😂🏆pic.twitter.com/lp2xkG73Yz
— Mufaddal Vohra (@mufaddal_vohra) July 4, 2024
ವಿಶ್ವಕಪ್ ವಿಜೇತ ತಂಡವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಅಲ್ಲಿಂದ ಮುಂಬೈಗೆ ತೆರಳಲಿರುವ ತಂಡ, ಟಿ20 ವಿಶ್ವಕಪ್ ವಿಜಯೋತ್ಸವ ಆಚರಿಸಲು ವಿಶೇಷ ಸಮಾರಂಭ ಆಯೋಜಿಸಲಾಗಿದೆ. ಆಟಗಾರರು ಮತ್ತು ಸಿಬ್ಬಂದಿಗಳು ಸಂಜೆ 4 ಗಂಟೆಗೆ ಮುಂಬೈಗೆ ಪ್ರಯಾಣಿಸುತ್ತಾರೆ, ನಂತರ ಅವರು ಮುಂದಿನ ಎರಡು ಗಂಟೆಗಳ ಕಾಲ ತೆರೆದ ಬಸ್ ಮೆರವಣಿಗೆಯಲ್ಲಿ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
2500 Cops: ಗ್ವಾಲಿಯರ್ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ
Women’s T20 World Cup 2024: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಆಘಾತ
Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Bengaluru: ವಂಡರ್ಲಾದಲ್ಲಿ 2 ಟಿಕೆಟ್ ಖರೀದಿಸಿದರೆ 1 ಟಿಕೆಟ್ ಫ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.