Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

ಬೆಂಗಳೂರಿನ ಜೆ.ಪಿ.ನಗರದ ಸುರಭಿ ನಗರದ ಮನೆಯಲ್ಲಿ ಬಂಧಿಸಿದ್ದಾರೆ.

Team Udayavani, Jul 4, 2024, 10:45 AM IST

Naxal chandru- Naxal Chandru arrested after 19 years; What is the case?

■ ಉದಯವಾಣಿ ಸಮಾಚಾರ
ಪಾವಗಡ(ತುಮಕೂರು): ತಾಲೂಕಿನ ನಾಗಲಮಡಿಕೆ ಹೋಬಳಿ ವೆಂಕಟಮ್ಮನಹಳ್ಳಿ ಗ್ರಾಮದ ಪೊಲೀಸ್‌ ಕ್ಯಾಂಪ್‌ ಮೇಲೆ ನಡೆದ ನಕ್ಸಲ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದಿಂದ ತಲೆ ಮರೆಸಿಕೊಂಡಿದ್ದ 75ನೇ ಆರೋಪಿಯನ್ನು ಪೊಲೀಸರು ಮಂಗಳವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆ, ಸಿಂಗಲಮಲ್ಲ ತಾಲೂಕು ಕೇಶವ ಪುರಂ ಗ್ರಾಮದ ಕೊಡಮುಲ ಮುತ್ಯಾಲಚಂದ್ರು ಬಿನ್‌ ಬಾಯನ್ನ (38) ಬಂಧಿತ ಆರೋಪಿ. ಮಂಗಳವಾರ ಆರೋಪಿಯನ್ನು ಪಾವಗಡ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.

ವೆಂಕಟಮ್ಮನಹಳ್ಳಿ ಪೊಲೀಸ್‌ ಹತ್ಯಾಕಾಂಡ ಪ್ರಕರಣ ಕುರಿತು ಪಾವಗಡ ಮತ್ತು ಮಧುಗಿರಿ ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ನಡೆಯುತ್ತಿದೆ. ಬಹುತೇಕ ಆರೋಪಿಗಳ ವಿರುದ್ಧ ಕೋರ್ಟ್‌ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ. ಕೆಲವು ಆರೋಪಿಗಳು ಆಂಧ್ರ ಪ್ರದೇಶ, ಬೆಂಗಳೂರಿನ ಬಿಬಿಎಂಪಿಯಲ್ಲಿ 12 ವರ್ಷದಿಂದ ಪತಿ, ಪತ್ನಿ ಇಬ್ಬರೂ ಪೌರ ಕಾರ್ಮಿಕರಾಗಿ ಜೀವನ ಸಾಗಿಸುತ್ತಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರು ಆರೋಪಿಗಳನ್ನು ಹಂತ ಹಂತವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು  ಪಡಿಸುತ್ತಿದ್ದಾರೆ.

ತುಮಕೂರು, ಬೆಂಗಳೂರು ಐಎಸ್‌ಡಿ ವಿಭಾಗದ ನಕ್ಸಲ್‌ ನಿಗ್ರಹ ಪಡೆ ಮಾಹಿತಿ ಮೇರೆಗೆ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿಗಳ ತಂಡ, ಸಿಐ ತಂಡವು ತಲೆ ಮರೆಸಿಕೊಂಡಿದ್ದ ಮುತ್ಯಾಲಚಂದ್ರುನನ್ನು ಬೆಂಗಳೂರಿನ ಜೆ.ಪಿ.ನಗರದ ಸುರಭಿ ನಗರದ ಮನೆಯಲ್ಲಿ ಬಂಧಿಸಿದ್ದಾರೆ.

ಏನಿದು ಪ್ರಕರಣ?
ಆಂಧ್ರಪ್ರದೇಶ -ಕರ್ನಾಟಕದ ಗಡಿ ಭಾಗದಲ್ಲಿ ಹೆಚ್ಚಾಗಿದ್ದ ನಕ್ಸಲರ ಹಾವಳಿ ನಿಯಂತ್ರಣಕ್ಕೆ ನಕ್ಸಲ್‌ ನಿಗ್ರಹ ಪಡೆ ವೆಂಕಟಮ್ಮನಹಳ್ಳಿಯಲ್ಲಿ ಕ್ಯಾಂಪ್‌ ಹೂಡಿತ್ತು. 2005, ಫೆ.10ರ ರಾತ್ರಿ 10.30ರ ವೇಳೆ ವೆಂಕಟಮ್ಮನಹಳ್ಳಿಯ ಪೊಲೀಸ್‌ ಕ್ಯಾಂಪ್‌ ಮೇಲೆ ಸುಮಾರು 300 ಜನ ನಕ್ಸಲರು ಬಂದೂಕು, ಬಾಂಬ್‌, ಹ್ಯಾಂಡ್‌ ಗ್ರಾನೈಡ್‌ಗಳೊಂದಿಗೆ ದಾಳಿ ನಡೆಸಿದ್ದರು. ಕರ್ತವ್ಯದಲ್ಲಿದ್ದ 7 ಮಂದಿ ಪೊಲೀಸರನ್ನು ಕೊಲೆ ಮಾಡಿ, 5 ಮಂದಿ ಪೊಲೀಸ್‌ ಸಿಬ್ಬಂದಿಯನ್ನು ಗಾಯಗೊಳಿಸಿ, ಖಾಸಗಿ ಬಸ್‌ ಕ್ಲೀನರ್‌ನ ನ್ನು ಕೊಲೆ ಮಾಡಿದ್ದರು. ಕ್ಯಾಂಪ್‌ನಲ್ಲಿದ್ದ ಅತ್ಯಾಧುನಿಕ ಬಂದೂಕು, ಮದ್ದು ಗುಂಡುಗಳನ್ನು ದೋಚಿ ಪರಾರಿಯಾಗಿ ದ್ದರು. ಈ ಬಗ್ಗೆ ತಿರುಮಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ 32 ಆರೋಪಿಗಳ ವಿರುದ್ಧ ಪಾವಗಡದ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಹೊರಡಿಸಿತ್ತು.

ಟಾಪ್ ನ್ಯೂಸ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.