Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
Team Udayavani, Jul 4, 2024, 12:14 PM IST
ಬೆಂಗಳೂರು: ಯುವತಿಯೊಬ್ಬಳು ಅನುಮಾನಾಸ್ಪವಾಗಿ ಮೃತಪಟ್ಟಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿ ಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಾಸರಹಳ್ಳಿ ನಿವಾಸಿ ಶ್ರಾವಣಿ(23) ಮೃತ ಯುವತಿ.
8ನೇ ಮೈಲಿಯಲ್ಲಿರುವ ಗೋಲ್ಡನ್ ಜೀಮ್ನಲ್ಲಿ ಸ್ವಾಗತಕಾರಿಣಿ ಯಾಗಿ ಕೆಲಸ ಮಾಡುತ್ತಿದ್ದ ಶ್ರಾವಣಿ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕೆಲಸಕ್ಕೆ ಬಂದಿದ್ದು, ಕೆಲ ಹೊತ್ತಿನ ಬಳಿಕ ಏಕಾಏಕಿ ವಾಂತಿ ಶುರುವಾಗಿದೆ. ಅದನ್ನು ಕಂಡ ಜಿಮ್ನಲ್ಲಿದ್ದ ಕೆಲವರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪ್ಟಟಿದ್ದಾಳೆ ಎಂದು ಪೊಲೀಸರು ಹೇಳಿದರು.
ವಿಷ ಸೇವಿಸಿ ಆತ್ಮಹತ್ಯೆ?: ಶ್ರಾವಣಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದೆ. ಈ ಮಧ್ಯೆ ಆಕೆಯ ಮನೆಯವರು ಮದುವೆ ಮಾಡಲು ಬೇರೆ ಹುಡುಗನನ್ನು ಹುಡುಕುತ್ತಿದ್ದರು. ಆದರೆ, ಆಕೆ ಸದ್ಯ ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಪೋಷಕರಿಗೆ ಹೇಳಿದ್ದಾಳೆ. ಅದೇ ವಿಚಾರವಾಗಿ ಪೋಷಕರು ಹಾಗೂ ಆಕೆ ನಡುವೆ ಜಗಳ ನಡೆದಿದೆ ಎಂಬುದು ಗೊತ್ತಾಗಿದೆ. ಅದರಿಂದ ಬೇಸತ್ತ ಶ್ರಾವಣಿ ಸ್ಲೋ ಪಾಯಿಸನ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ. ಅದರಿಂದ ಸೋಮವಾರ ಬೆಳಗ್ಗೆ ವಾಂತಿ ಹೆಚ್ಚಾಗಿ, ಮೃತಪಟ್ಟಿರುವ ಸಾಧ್ಯತೆಯಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಘಟನೆಗೆ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದರು.
ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.