Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
Team Udayavani, Jul 4, 2024, 1:25 PM IST
ಕಲಬುರಗಿ: ವಾಹನಗಳಿಗೆ ಅತೀ ಪ್ರಕಾಶಮಾನ ಕಣ್ಣು ಕುಕ್ಕುವ (ಎಲ್ ಇಡಿ) ದೀಪ ಆಳವಡಿಕೆ ವಿರುದ್ದ ಜಾರಿಗೆ ತಂದಿರುವ ಹೊಸ ಕಾಯ್ದೆ ಅಡಿ ಕಳೆದ ಮೂರು ದಿನಗಳಲ್ಲಿ 3,700 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ಹಾಗೂ ತರಬೇತಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 1ರಿಂದ ಹೊಸ ಕಾಯ್ದೆ ಜಾರಿಗೆ ಬಂದಿದ್ದು, ಮೂರು ದಿನಗಳಲ್ಲಿ ರಾಜ್ಯದಾದ್ಯಂತ 3,700 ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ. ಕಣ್ಣು ಕುಕ್ಕುವ ದೀಪ ಅಳವಡಿಕೆಯಿಂದ ಅಪಘಾತ ಜತೆಗೆ ಹಲವರಿಗೆ ತೊಂದರೆ ಆಗುತ್ತಿರುವುದನ್ನು ಕಂಡು ಇದನ್ನು ಅಳವಡಿಸಿದ ವಾಹನಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರಿಂದ ಕಾರ್ಯಾಚರಣೆ ಮೂಲಕ ಇಷ್ಟೊಂದು ಪ್ರಕರಣ ಪತ್ತೆ ಹಚ್ಚಲಾಗಿದೆ ಎಂದು ವಿವರಣೆ ನೀಡಿದರು.
ಜುಲೈ 1ರಂದು 1188, 2ರಂದು 996 ಹಾಗೂ 3 ರಂದು 1518 ಪ್ರಕರಣ ದಾಖಲಾಗಿವೆ. ಪ್ರಥಮ ದಿನದಂದು ಬೆಂಗಳೂರಿನಲ್ಲಿ 311, ಮೈಸೂರಲ್ಲಿ ಜಿಲ್ಲೆಯಲ್ಲಿ 96, ತುಮಕೂರದಲ್ಲಿ 70, ಚಾಮರಾಜ ನಗರದಲ್ಲಿ 48, ಕೊಡಗುದಲ್ಲಿ 36, ಕಾರವಾರದಲ್ಲಿ 93, ವಿಜಯಪುರದಲ್ಲಿ 96, ಧಾರವಾಡದಲ್ಲಿ 50, ಬಾಗಲಕೋಟ ಜಿಲ್ಲೆಯಲ್ಲಿ 47 ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಒಟ್ಟಾರೆ ಹೆಚ್ಚುತ್ತಿರುವ ಅಪರಾಧ ಕಡಿಮೆಗೊಳಿಸುವ ಇರಾದೆ ಹೊಂದಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದರು.
ಅದೇ ರೀತಿ ಜುಲೈ 1ರಿಂದ ಜಾರಿಗೆ ಬಂದಿರುವ ಭಾರತೀಯ ನ್ಯಾಯ ಸಂಹಿತೆ (ಬಿಎನ್ ಎಸ್) ಕಾನೂನು ಕುರಿತಾಗಿ ಎಲ್ಲ ಸಿಬ್ಬಂದಿಗೆ ಮಾಹಿತಿಯ ತರಬೇತಿ ನೀಡಲಾಗಿದೆ. ಸಂಘಟಿತ ಅಪರಾಧ ತಡಗೆ ಈಗಾಗಲೇ ರಾಜ್ಯದಲ್ಲಿ ಕೋಕಾ ಕಾಯ್ದೆ ಇದೆ. ಅದೇ ರೀತಿ ಹೊಸದಾಗಿ ಯುಎಪಿ 113 ಜಾರಿಗೆ ಬಂದಿದೆ. ಯಾವುದರಡಿ ಈಗ ಪ್ರಕರಣ ದಾಖಲಿಸಿಕೊಳ್ಳಬೇಕು ಎಂಬ ಗೊಂದಲ ಕೆಲ ಕಾಲ ಇರುತ್ತದೆ. ಹೊಸ ಕಾಯ್ದೆಗಳು ಹಿಂದಿನಕ್ಕೂ ಸಾಮ್ಯತೆಯಿದ್ದರೂ ಹಲವಾರು ಬದಲಾವಣೆಗಳಿವೆ ಎಂದು ಎಡಿಜಿಪಿ ಅಲೋಕಕುಮಾರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.