Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
Team Udayavani, Jul 4, 2024, 1:28 PM IST
ಸಾಗರ: ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಆರಿದ್ರಾ ಮಳೆ ಬುಧವಾರ ಸಂಜೆಯಿಂದ ಇನ್ನಷ್ಟು ಪ್ರಖರವಾಗಿ ಸುರಿಯುತ್ತಿದ್ದು, ತುಮರಿ ಭಾಗ ಅಕ್ಷರಶಃ ದ್ವೀಪವಾಗಿ ಪರಿಣಮಿಸಿದೆ.
ಹೊಳೆಬಾಗಿಲು ಭಾಗದ ಕಳಸವಳ್ಳಿ ತುಮರಿ ರಸ್ತೆಯಲ್ಲಿ ತಿಮ್ಮಪ್ಪ ಅವರ ಮನೆ ಹತ್ತಿರ ವಿದ್ಯುತ್ ಕಂಬಗಳು ಸಂಪೂರ್ಣ ಬಾಗಿ ರಸ್ತೆಯ ಮೇಲೆಯೇ ವಿದ್ಯುತ್ ತಂತಿಗೂ ಹರಡಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದು ವಾರದಿಂದಲೇ ತುಮರಿ ಸಿಗಂದೂರು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬಹುತೇಕ ಕಡೆ ವಿದ್ಯುತ್ ಕಂಬಗಳು ಮುರಿದು ಸಂಪೂರ್ಣ ಪ್ರದೇಶ ಕತ್ತಲಿನಲ್ಲಿದೆ.
ಈ ನಡುವೆ ಮಳೆ ಅಬ್ಬರದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಅಥವಾ ಗುರುವಾರ ಮುಂಜಾನೆ ಶಾಲೆಗಳಿಗೆ ರಜೆ ಘೋಷಿಸುವ ಬದಲು ಬೆಳಿಗ್ಗೆ ಎಂಟೂಮೂವತ್ತರ ವೇಳೆಗೆ ರಜೆ ಕೊಡಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡಿದ ಆದೇಶದ ಕುರಿತಾಗಿ ಪೋಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈವೇಳೆಗೆ ಬಹುಪಾಲು ಮಕ್ಕಳು ಶಾಲಾ ವ್ಯಾನ್ಗಳಲ್ಲಿ ಹೊರಟಾಗಿದೆ. ಅದಲ್ಲದೆ ರಜೆಯನ್ನು ಎಸ್ಡಿಎಂಸಿ ಜೊತೆ ಮುಖ್ಯ ಶಿಕ್ಷಕರು ಚರ್ಚಿಸಿ ತೀರ್ಮಾನಿಸಬೇಕು ಎಂದು ಹೇಳಲಾಗಿದೆ.
ಇದು ಮತ್ತಷ್ಟು ಗೊಂದಲ, ವಿಳಂಬಕ್ಕೆ ಕಾರಣವಾಗುತ್ತದೆ. ಜವಾಬ್ದಾರಿಯನ್ನು ಹೊತ್ತುಕೊಂಡು ತಾಲೂಕಿನಾದ್ಯಂತ ರಜೆ ಕೊಡುವುದಿದ್ದರೆ ಬಿಇಓ ತೀರ್ಮಾನಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ತಾಲೂಕಿನ ಬಹುತೇಕ ಶಾಲೆಗಳಲ್ಲಿ ಗುರುವಾರ ರಜೆ ಘೋಷಿಸಿಲ್ಲದಿರುವುದು ಕಂಡುಬಂದಿದೆ.
ಇದನ್ನೂ ಓದಿ: Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.