Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
ಈ ಸೇತುವೆ ಸರನ್ ಹಾಗೂ ನೆರೆಯ ಸಿವಾನ್ ಜಿಲ್ಲೆಯ ಗ್ರಾಮಗಳಿಗೆ ಸಂಪರ್ಕ ಕೊಂಡಿಯಾಗಿತ್ತು.
Team Udayavani, Jul 4, 2024, 1:33 PM IST
ಪಾಟ್ನಾ: ಬಿಹಾರದಲ್ಲಿ ಸೇತುವೆ ಕುಸಿದು ಬೀಳುವ ಘಟನೆ ಮುಂದುವರಿದಿದ್ದು, ಗುರುವಾರ (ಜುಲೈ 04) ಸರನ್ ಜಿಲ್ಲೆಯಲ್ಲಿನ ಸೇತುವೆಯೊಂದು ಕುಸಿದು ಬಿದ್ದಿದ್ದು, ಕಳೆದ 24 ಗಂಟೆಗಳಲ್ಲಿ ಸರನ್ ಜಿಲ್ಲೆಯಲ್ಲಿ ಮೂರು ಸೇತುವೆ ಕುಸಿದು ಬಿದ್ದ ಘಟನೆ ನಡೆದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮಾನ್ ಸಮೀರ್ ತಿಳಿಸಿದ್ದಾರೆ.
ಇದನ್ನೂ ಓದಿ:Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
ಕಳೆದ 15 ದಿನಗಳಲ್ಲಿ ಬಿಹಾರದಲ್ಲಿ ಹತ್ತು ಸೇತುವೆ ಕುಸಿದು ಬಿದ್ದಿದೆ. ಇಂದು ಕುಸಿದು ಬಿದ್ದ ಸೇತುವೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಗಂಡಕಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ 15 ವರ್ಷಗಳಷ್ಟು ಹಳೆಯ ಸೇತುವೆ ಕುಸಿದು ಬಿದ್ದಿದ್ದು, ಈ ಸೇತುವೆ ಸರನ್ ಹಾಗೂ ನೆರೆಯ ಸಿವಾನ್ ಜಿಲ್ಲೆಯ ಗ್ರಾಮಗಳಿಗೆ ಸಂಪರ್ಕ ಕೊಂಡಿಯಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ, ತುರ್ತು ನಿಗಾ ವಹಿಸಬೇಕಾದ ಸೇತುವೆಗಳ ಕುರಿತು ವರದಿ ನೀಡುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.
ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ವಹಣೆ ಕುರಿತ ನೀತಿಯನ್ನು ಸುಧಾರಣೆಗೊಳಿಸುವಂತೆ ಸಿಎಂ ನಿತೀಶ್ ಅಧಿಕಾರಿಗಳಿಗೆ ಸೂಚಿಸಿದ್ದರು. ಭಾರೀ ಮಳೆಯಿಂದಾಗಿ ಬಿಹಾರದಲ್ಲಿ ಕಳಪೆ ಕಾಮಗಾರಿಯ ಹಳೆ ಸೇತುವೆಗಳು ಕುಸಿದು ಬೀಳುತ್ತಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.