ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
Team Udayavani, Jul 4, 2024, 2:47 PM IST
ಮುಂಬಯಿ: ಉದ್ಯಮಿ ಮುಕೇಶ್ – ನೀತಾ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮದುವೆ ಕಾರ್ಯಕ್ರಮಕ್ಕಾಗಿ ಖ್ಯಾತ ಪಾಪ್ ಗಾಯಕ ಜಸ್ಟಿನ್ ಬೀಬರ್ (Justin Bieber) ಮುಂಬಯಿಗೆ ಆಗಮಿಸಿದ್ದಾರೆ.
ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ಸಂಗೀತ್ ಕಾರ್ಯಕ್ರಮದಲ್ಲಿ ಪಾಪ್ ಗಾಯಕ ಜಸ್ಟಿನ್ ಬೀಬರ್ ಮ್ಯೂಸಿಕ್ ಪ್ರೋಗ್ರಾಂ ನೀಡಲಿದ್ದಾರೆ. ಇದಕ್ಕಾಗಿ ಅವರು ಗುರುವಾರ (ಜು.4 ರಂದು) ಮುಂಬಯಿಗೆ ಬಂದಿದ್ದಾರೆ. ಶುಕ್ರವಾರ(ಜು.5 ರಂದು) ಸಂಗೀತ್ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಖ್ಯಾತ ಉದ್ಯಮಿಗಳು, ಸೆಲೆಬ್ರಿಟಿಗಳು ಸೇರಿದಂತೆ ಖ್ಯಾತನಾಮರು ಭಾಗಿಯಾಗಲಿದ್ದಾರೆ.
ಜಸ್ಟಿನ್ 7 ವರ್ಷದ ಬಳಿಕ ಭಾರತಕ್ಕೆ ಬಂದಿದ್ದಾರೆ. 2022ರಲ್ಲಿ ಭಾರತದಲ್ಲಿ ಮ್ಯೂಸಿಕ್ ಕಾನ್ಸಾರ್ಟ್ ಅನೌನ್ಸ್ ಮಾಡಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಆ ಕಾರ್ಯಕ್ರಮ ರದ್ದಾಗಿತ್ತು.
ಕೋಟಿ ಕುಳ ಅಂಬಾನಿ ಪುತ್ರನ ಸಂಗೀತ್ನಲ್ಲಿ ಕಾರ್ಯಕ್ರಮ ನೀಡಲು ಜಸ್ಟಿನ್ ಬರೋಬ್ಬರಿ 83ಕೋಟಿ ರೂ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಆ ಮೂಲಕ ಪಾಪ್ ಗಾಯಕಿ ರಿಹಾನ್ನಾ ಅವರನ್ನೂ ಜಸ್ಟಿನ್ ಮೀರಿಸಿದ್ದಾರೆ.
ಗುಜರಾತ್ ನ ಜಾಮ್ ನಗರದಲ್ಲಿ ನಡೆದ ಅನಂತ್ – ರಾಧಿಕಾ ಅವರ ಮೊದಲ ಪ್ರೀ ವೆಡ್ಡಿಂಗ್ ನಲ್ಲಿ ಕಾರ್ಯಕ್ರಮ ನೀಡಿದ್ದ ರಿಹಾನ್ನಾ ಅವರು ಕಾರ್ಯಕ್ರಮಕ್ಕಾಗಿ 74 ಕೋಟಿ ರೂ. ಸಂಭಾವನೆ ಪಡೆದಿದ್ದರು ಎಂದು ವರದಿಯಾಗಿತ್ತು.
ಗಾಯಕ ಎಕಾನ್ ಸುಮಾರು 2 ರಿಂದ 4 ಕೋಟಿ ರೂ. ಪಡೆದಿದ್ದರು. ಗಾಯಕಿ ಶಕೀರಾ 10 ರಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು. ಕ್ರೂಸ್ ಬ್ಯಾಷ್ನಲ್ಲಿನ ಪ್ರೀ ವೆಡ್ಡಿಂಗ್ ಕೇಟಿ ಪೆರ್ರಿ 45 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ವರದಿಯಾಗಿತ್ತು.
ಅನಂತ್ ಮತ್ತು ರಾಧಿಕಾ ಅವರ ಸಂಗೀತ ಸಮಾರಂಭ ಜುಲೈ 5 ರಂದು ಮುಂಬೈಯ ಅವರ ನಿವಾಸ ಆಂಟಿಲಿಯಾದಲ್ಲಿ ನಡೆಯಲಿದೆ. ಜು.12 ರಂದು ಸಾಂಪ್ರದಾಯಿಕವಾಗಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.