Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ


Team Udayavani, Jul 4, 2024, 2:44 PM IST

12-raichur

ಬಳಗಾನೂರು: ಗ್ರಾಮೀಣ ಭಾಗದಲ್ಲಿನ ಮಣ್ಣೆತ್ತಿನ ಹಬ್ಬಕ್ಕೆ ವಿಶೇಷತೆ ಇದೆ. ರೈತಾಪಿವರ್ಗ ಮಣ್ಣು ನಂಬಿ ಬದುಕು ಕಟ್ಟಿಕೊಂಡವರು. ಮಣ್ಣಿನ ಋಣ ತೀರಿಸಲು ಮತ್ತು ಎತ್ತಿನ ಋಣ ತೀರಿಸಲು ಶ್ರದ್ಧಾ ಭಕ್ತಿಯಿಂದ ಈ ಪದ್ಧತಿ ಅನುಸರಿಸಿಕೊಂಡಿದ್ದೇವೆ ಎಂಬುದು ಪೂರ್ವಿಕರ ಮಾತು.

ಅಂತಯೇ ಮಣ್ಣೆತ್ತಿನ ಅಮಾವಾಸ್ಯೆಯ ಆಚರಣೆ ಮಕ್ಕಳಿಗೆ ಸಂಭ್ರಮವೋ ಸಂಭ್ರಮ.

ಜನತೆಗೆಲ್ಲಾ ಅನ್ನ ನೀಡುವ ಅನ್ನದಾತನಿಗೆ ಕಾರ ಹುಣ್ಣಿಮೆ ಮತ್ತು ಮಣ್ಣೆತ್ತಿನ ಅಮವಾಸ್ಯೆ ಶ್ರೇಷ್ಠವಾದ ಸಂಭ್ರಮದ ಹಬ್ಬಗಳು. ಈ ಹಿನ್ನಲೆಯಲ್ಲಿ ರೈತರು ಮುಂಗಾರು ಹಂಗಾಮಿನಲ್ಲಿ ಬರುವ ಕಾರಹುಣ್ಣಿಮೆ ದಿನದಂದು ಎತ್ತುಗಳನ್ನು ಕರಿ ಹರಿಯುವುದು, ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣೆತ್ತುಗಳಿಗೆ ಪೂಜೆ ಗೈಯುತ್ತಾರೆ.

ರೈತನ ಸಂಗಾತಿಗಳಾದ ಎತ್ತುಗಳೊಂದಿಗೆ ಹೊಲದಲ್ಲಿ ಬಿತ್ತಿದ ಬೀಜ ಮೊಳಕೆಯೊಡೆದು ಸಣ್ಣದಾಗಿ ಬೆಳೆ ಚಿಗುರೆಡೆಯುತ್ತಿದ್ದಂತೆ ಕಾರ ಹುಣಿಮೆ ಬರುತ್ತದೆ. ಎತ್ತುಗಳನ್ನು ಶೃಂಗರಿಸಿ ಕರಿ ಹರಿದಿರುತ್ತಾರೆ. ಮಣ್ಣೆತ್ತಿನ ಅಮವಾಸ್ಯೆಯಂದು ಕುಂಬಾರರು ಮಾಡಿದ ಮಣ್ಣೆತ್ತುಗಳನ್ನು ಕೃಷಿಕರು ಸೇರಿ ಪ್ರತಿಯೊಂದು ಕುಟುಂಬಗಳು ಎತ್ತುಗಳನ್ನು ಖರೀದಿಸಿ ಮನೆಯ ದೇವರ ಜಗಲಿ ಮೇಲೆ ಪ್ರತಿಷ್ಠಾಪಿಸಿ ವಿವಿಧ ಭಕ್ಷ್ಯ-ಭೋಜನಗಳನ್ನು ತಯಾರಿಸಿ ನೈವೇದ್ಯ  ಸಮರ್ಪಿಸುತ್ತಾರೆ.

ಮಕ್ಕಳು ಸಾಯಂಕಾಲ ಶೃಂಗರಿಸಿ ಪೂಜಿಸಿದ್ದ ಮಣ್ಣೆತ್ತುಗಳನ್ನು ಸಾಮೂಹಿಕ ಪೂಜೆಗಾಗಿ ಭಾವಿಕಟ್ಟೆಗಳು ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆಗೈದು ಕರಿ ಹರಿದು ಮಣ್ಣೆತ್ತುಗಳನ್ನು ಮನೆ ಮಾಳಿಗೆಯ ಮೇಲಿಡುತ್ತಾರೆ. ಕಾರಣ ಮಳೆರಾಯನನ್ನು ಆ ಎತ್ತುಗಳು ಕರೆಯುತ್ತವೆಂದು ಅಪಾರ ನಂಬಿಕೆ ಇದೆ.

ಕುಂಬಾರರು ಮಣ್ಣೆತ್ತು ಮಾಡುವುದು ನಮ್ಮ ಕುಲ ಕಸುಬು. ಮೊದಲಿನಿಂದಲೂ ಮಣ್ಣಿನ ಗಡಿಗೆ ಇನ್ನಿತರ ವಸ್ತುಗಳನ್ನು ಮಾಡುವುದರ ಜೊತೆಗೆ ಮಣ್ಣೆತ್ತು ಮಾಡುತ್ತೇವೆ. ಪಟ್ಟಣ ಸೇರಿ ಸುತ್ತಮುತ್ತಲಿನ ಹಳ್ಳಿಗಳ ರೈತರು ಮಣ್ಣೆತ್ತುಗಳನ್ನು ತೆಗೆದುಕೊಂಡು ಪೂಜಿಸುತ್ತಾರೆ. ಪಟ್ಟಣದಲ್ಲಿ ವಿರುಪಾಕ್ಷಪ್ಪ ಕುಂಬಾರ, ಶರಭಣ್ಣ ಕುಂಬಾರ, ಪಂಪಣ್ಣ,  ಚಂದ್ರಮ,  ರೇಣುಕಮ್ಮ ಕುಟುಂಬಗಳು ಎತ್ತುಗಳನ್ನು ಮಾಡಿ ಸುಮಾರು 50 ರಿಂದ 60 ರೂಪಾಯಿಗಳಿಗೆ ಜೋಡಿ ಎತ್ತುಗಳನ್ನು ಮಾರಾಟ ಮಾಡಲಾಗುವುದು ಎನ್ನುತ್ತಾರೆ.

ಹುಟ್ಟಿನಿಂದ ಚಟ್ಟದವರೆಗೂ ಮಣ್ಣಿನೊಂದಿಗೆ ನಮ್ಮ ಬದುಕು. ಮಣ್ಣಿನಿಂದ ಆರಂಭವಾಗುವ ಮಣ್ಣೆತ್ತು ಅಮವಾಸ್ಯೆ ದಿನ ತಮ್ಮ ರಾಸುಗಳಿಗೆ ಮಳೆಯಿಂದ ಕೆಲ ಸಮಯ ಬಿಡುವು ಕೊಟ್ಟು ಅವುಗಳನ್ನು ಗೌರವಿಸುವ ಸಂಪ್ರದಾಯ ಇದಾಗಿದೆ.

ಜನತೆಗೆಲ್ಲಾ ಅನ್ನ ನೀಡುವ ಅನ್ನದಾತನಿಗೆ ಆಸರೆಯಾದ ಕುಂಬಾರರ ಕುಟುಂಬಗಳಿಗೆ ನೆರವು, ದೊರೆಯಬೇಕಿದೆ. ಸರಕಾರದ ಸೌಲಭ್ಯಗಳು ಈ ಕುಟುಂಬಗಳಿಗೆ ಅಷ್ಟಕಷ್ಟೆ. ಅಧಿಕಾರಿಗಳು ಜನಪ್ರತಿನಿಧಿಗಳು ಸಂಸ್ಕೃತಿ ಉಳಿವು ಹಾಗೂ ಸಂಭ್ರಮಕ್ಕೆ ಕಾರಣವಾಗಿರುವ ಸಮುದಯಕ್ಕೆ ನೆರವು ನೀಡಲು ಮುಂದಾಗಬೇಕಿದೆ.

-ಹನುಮೇಶ ಕಮ್ಮಾರ ಬಳಗಾನೂರು, ರಾಯಚೂರು

 

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

4-sirawara

Raichur: ಒಳ ಮೀಸಲಾತಿ ಜಾರಿಗಾಗಿ ಬಂದ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.