Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ


Team Udayavani, Jul 4, 2024, 2:44 PM IST

12-raichur

ಬಳಗಾನೂರು: ಗ್ರಾಮೀಣ ಭಾಗದಲ್ಲಿನ ಮಣ್ಣೆತ್ತಿನ ಹಬ್ಬಕ್ಕೆ ವಿಶೇಷತೆ ಇದೆ. ರೈತಾಪಿವರ್ಗ ಮಣ್ಣು ನಂಬಿ ಬದುಕು ಕಟ್ಟಿಕೊಂಡವರು. ಮಣ್ಣಿನ ಋಣ ತೀರಿಸಲು ಮತ್ತು ಎತ್ತಿನ ಋಣ ತೀರಿಸಲು ಶ್ರದ್ಧಾ ಭಕ್ತಿಯಿಂದ ಈ ಪದ್ಧತಿ ಅನುಸರಿಸಿಕೊಂಡಿದ್ದೇವೆ ಎಂಬುದು ಪೂರ್ವಿಕರ ಮಾತು.

ಅಂತಯೇ ಮಣ್ಣೆತ್ತಿನ ಅಮಾವಾಸ್ಯೆಯ ಆಚರಣೆ ಮಕ್ಕಳಿಗೆ ಸಂಭ್ರಮವೋ ಸಂಭ್ರಮ.

ಜನತೆಗೆಲ್ಲಾ ಅನ್ನ ನೀಡುವ ಅನ್ನದಾತನಿಗೆ ಕಾರ ಹುಣ್ಣಿಮೆ ಮತ್ತು ಮಣ್ಣೆತ್ತಿನ ಅಮವಾಸ್ಯೆ ಶ್ರೇಷ್ಠವಾದ ಸಂಭ್ರಮದ ಹಬ್ಬಗಳು. ಈ ಹಿನ್ನಲೆಯಲ್ಲಿ ರೈತರು ಮುಂಗಾರು ಹಂಗಾಮಿನಲ್ಲಿ ಬರುವ ಕಾರಹುಣ್ಣಿಮೆ ದಿನದಂದು ಎತ್ತುಗಳನ್ನು ಕರಿ ಹರಿಯುವುದು, ಮಣ್ಣೆತ್ತಿನ ಅಮವಾಸ್ಯೆಯಂದು ಮಣ್ಣೆತ್ತುಗಳಿಗೆ ಪೂಜೆ ಗೈಯುತ್ತಾರೆ.

ರೈತನ ಸಂಗಾತಿಗಳಾದ ಎತ್ತುಗಳೊಂದಿಗೆ ಹೊಲದಲ್ಲಿ ಬಿತ್ತಿದ ಬೀಜ ಮೊಳಕೆಯೊಡೆದು ಸಣ್ಣದಾಗಿ ಬೆಳೆ ಚಿಗುರೆಡೆಯುತ್ತಿದ್ದಂತೆ ಕಾರ ಹುಣಿಮೆ ಬರುತ್ತದೆ. ಎತ್ತುಗಳನ್ನು ಶೃಂಗರಿಸಿ ಕರಿ ಹರಿದಿರುತ್ತಾರೆ. ಮಣ್ಣೆತ್ತಿನ ಅಮವಾಸ್ಯೆಯಂದು ಕುಂಬಾರರು ಮಾಡಿದ ಮಣ್ಣೆತ್ತುಗಳನ್ನು ಕೃಷಿಕರು ಸೇರಿ ಪ್ರತಿಯೊಂದು ಕುಟುಂಬಗಳು ಎತ್ತುಗಳನ್ನು ಖರೀದಿಸಿ ಮನೆಯ ದೇವರ ಜಗಲಿ ಮೇಲೆ ಪ್ರತಿಷ್ಠಾಪಿಸಿ ವಿವಿಧ ಭಕ್ಷ್ಯ-ಭೋಜನಗಳನ್ನು ತಯಾರಿಸಿ ನೈವೇದ್ಯ  ಸಮರ್ಪಿಸುತ್ತಾರೆ.

ಮಕ್ಕಳು ಸಾಯಂಕಾಲ ಶೃಂಗರಿಸಿ ಪೂಜಿಸಿದ್ದ ಮಣ್ಣೆತ್ತುಗಳನ್ನು ಸಾಮೂಹಿಕ ಪೂಜೆಗಾಗಿ ಭಾವಿಕಟ್ಟೆಗಳು ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆಗೈದು ಕರಿ ಹರಿದು ಮಣ್ಣೆತ್ತುಗಳನ್ನು ಮನೆ ಮಾಳಿಗೆಯ ಮೇಲಿಡುತ್ತಾರೆ. ಕಾರಣ ಮಳೆರಾಯನನ್ನು ಆ ಎತ್ತುಗಳು ಕರೆಯುತ್ತವೆಂದು ಅಪಾರ ನಂಬಿಕೆ ಇದೆ.

ಕುಂಬಾರರು ಮಣ್ಣೆತ್ತು ಮಾಡುವುದು ನಮ್ಮ ಕುಲ ಕಸುಬು. ಮೊದಲಿನಿಂದಲೂ ಮಣ್ಣಿನ ಗಡಿಗೆ ಇನ್ನಿತರ ವಸ್ತುಗಳನ್ನು ಮಾಡುವುದರ ಜೊತೆಗೆ ಮಣ್ಣೆತ್ತು ಮಾಡುತ್ತೇವೆ. ಪಟ್ಟಣ ಸೇರಿ ಸುತ್ತಮುತ್ತಲಿನ ಹಳ್ಳಿಗಳ ರೈತರು ಮಣ್ಣೆತ್ತುಗಳನ್ನು ತೆಗೆದುಕೊಂಡು ಪೂಜಿಸುತ್ತಾರೆ. ಪಟ್ಟಣದಲ್ಲಿ ವಿರುಪಾಕ್ಷಪ್ಪ ಕುಂಬಾರ, ಶರಭಣ್ಣ ಕುಂಬಾರ, ಪಂಪಣ್ಣ,  ಚಂದ್ರಮ,  ರೇಣುಕಮ್ಮ ಕುಟುಂಬಗಳು ಎತ್ತುಗಳನ್ನು ಮಾಡಿ ಸುಮಾರು 50 ರಿಂದ 60 ರೂಪಾಯಿಗಳಿಗೆ ಜೋಡಿ ಎತ್ತುಗಳನ್ನು ಮಾರಾಟ ಮಾಡಲಾಗುವುದು ಎನ್ನುತ್ತಾರೆ.

ಹುಟ್ಟಿನಿಂದ ಚಟ್ಟದವರೆಗೂ ಮಣ್ಣಿನೊಂದಿಗೆ ನಮ್ಮ ಬದುಕು. ಮಣ್ಣಿನಿಂದ ಆರಂಭವಾಗುವ ಮಣ್ಣೆತ್ತು ಅಮವಾಸ್ಯೆ ದಿನ ತಮ್ಮ ರಾಸುಗಳಿಗೆ ಮಳೆಯಿಂದ ಕೆಲ ಸಮಯ ಬಿಡುವು ಕೊಟ್ಟು ಅವುಗಳನ್ನು ಗೌರವಿಸುವ ಸಂಪ್ರದಾಯ ಇದಾಗಿದೆ.

ಜನತೆಗೆಲ್ಲಾ ಅನ್ನ ನೀಡುವ ಅನ್ನದಾತನಿಗೆ ಆಸರೆಯಾದ ಕುಂಬಾರರ ಕುಟುಂಬಗಳಿಗೆ ನೆರವು, ದೊರೆಯಬೇಕಿದೆ. ಸರಕಾರದ ಸೌಲಭ್ಯಗಳು ಈ ಕುಟುಂಬಗಳಿಗೆ ಅಷ್ಟಕಷ್ಟೆ. ಅಧಿಕಾರಿಗಳು ಜನಪ್ರತಿನಿಧಿಗಳು ಸಂಸ್ಕೃತಿ ಉಳಿವು ಹಾಗೂ ಸಂಭ್ರಮಕ್ಕೆ ಕಾರಣವಾಗಿರುವ ಸಮುದಯಕ್ಕೆ ನೆರವು ನೀಡಲು ಮುಂದಾಗಬೇಕಿದೆ.

-ಹನುಮೇಶ ಕಮ್ಮಾರ ಬಳಗಾನೂರು, ರಾಯಚೂರು

 

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.