Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
ಸಿಹಿನೀರಿನ ಮೂಲಗಳಲ್ಲಿ ಕಂಡು ಬರುವ ಸೂಕ್ಷ್ಮ ಜೀವಿಯಾಗಿದೆ.
Team Udayavani, Jul 4, 2024, 2:55 PM IST
ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
ಚಿಕ್ಕ ಕೊಳವೊಂದರಲ್ಲಿ ಈಜಾಡಿದ ನಂತರ ಬಾಲಕನಿಗೆ ಈ ಸೋಂಕು ಹರಡಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ಬಹಿರಂಗಪಡಿಸಿವೆ. ಅಪರೂಪದ ಮೆದುಳು ತಿನ್ನುವ ಅಮೀಬಾದಿಂದಾಗಿ ಸಾವನ್ನಪ್ಪಿರುವ ಮೂರನೇ ಘಟನೆ ಇದಾಗಿದೆ.
ಮೇ 21ರಂದು ಮಲಪ್ಪುರಂನ ಐದು ವರ್ಷದ ಪುಟ್ಟ ಬಾಲಕಿ ಈ ಸೋಂಕಿನಿಂದ ಮೃತಪಟ್ಟಿದ್ದು, ಜೂನ್ 25ರಂದು ಕಣ್ಣೂರ್ ನ 13 ವರ್ಷದ ಬಾಲಕಿಯೊಬ್ಬಳು ಕೊನೆಯುಸಿರೆಳೆದಿದ್ದಳು. ಇದೀಗ ಮೂರನೇ ಘಟನೆ ನಡೆದಿದೆ.
ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ನೆಗ್ಲೇರಿಯಾ ಫೌಲೆರಿಯಿಂದ ಜನ್ಮತಳೆಯುತ್ತವೆ. ಇದು ಸರೋವರ, ನದಿಗಳಂತಹ ಬೆಚ್ಚಗಿನ ಸಿಹಿನೀರಿನ ಮೂಲಗಳಲ್ಲಿ ಕಂಡು ಬರುವ ಸೂಕ್ಷ್ಮ ಜೀವಿಯಾಗಿದೆ.
ಈ ಸೂಕ್ಷ್ಮ ಅಮೀಬಾ ನೀರಿನಲ್ಲಿ ನಾವು ಈಜಾಡಿದಾಗ, ಅಥವಾ ಆಟವಾಡುವ ಸಂದರ್ಭದಲ್ಲಿ ಮೂಗಿನ ಒಳಗಿನಿಂದ ದೇಹವನ್ನು ಪ್ರವೇಶಿಸುತ್ತದೆ. ಈ ಮೂಲಕ ಮೆದುಳಿಗೆ ಹೋಗಿ ಅಲ್ಲಿ ಮೆದುಳನ್ನು ತಿನ್ನಲು ಪ್ರಾರಂಭಿಸುತ್ತದೆ. ಇದು ಮಾರಣಾಂತಿಕವಾಗಿ ಸಾವು ಸಂಭವಿಸುತ್ತದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.