Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ
5 ತಿಂಗಳು ಜೈಲಿನಲ್ಲಿ ಕಳೆದು ಮರಳಿದ್ದರು...
Team Udayavani, Jul 4, 2024, 5:39 PM IST
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ (JMM) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರು ಗುರುವಾರ ಸಂಜೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು.
ಕೋಟ್ಯಂತರ ಮೌಲ್ಯದ ಭೂ ಹಗರಣ ಆರೋಪ ಹೊತ್ತಿದ್ದ ಕಾರಣ ಜನವರಿಯಲ್ಲಿ ಜಾರಿ ನಿರ್ದೇಶನಾಲಯ ಬಂಧಿಸುವ ಕೆಲವೇ ನಿಮಿಷಗಳ ಮೊದಲು ಅವರು ರಾಜೀನಾಮೆ ನೀಡಿದ್ದರು. ಆಪಾದಿತ ಹಗರಣದಲ್ಲಿ “ನೇರ ಪಾಲ್ಗೊಳ್ಳುವಿಕೆ” ಇಲ್ಲ ಎಂದು ಹೈಕೋರ್ಟ್ ಜಾಮೀನು ನೀಡಿದ ಬಳಿಕ ಐದು ತಿಂಗಳ ರಾಜಕೀಯ ವನವಾಸ ಮುಗಿಸಿ ಮತ್ತೆ ಸಿಎಂ ಹುದ್ದೆ ಅಲಂಕರಿಸಿದ್ದಾರೆ.
ಸಮಾರಂಭದಲ್ಲಿ ಹೇಮಂತ್ ಅವರ ತಂದೆ, ಜಾರ್ಖಂಡ್ ಮುಕ್ತಿ ಮೋರ್ಚಾದ ಹಿರಿಯ ನಾಯಕ ಎರಡು ಬಾರಿಯ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್, ನಿಕಟಪೂರ್ವ ಸಿಎಂ ಚಂಪೈ ಸೊರೇನ್ ಸೇರಿ ಪ್ರಮುಖರು ಹಾಜರಿದ್ದರು.
ಹಿರಿಯ ಜೆಎಂಎಂ ನಾಯಕ ಚಂಪೈ ಸೊರೇನ್ ಅವರು ಹೇಮಂತ್ ಸೊರೆನ್ ಬದಲಿಗೆ ಸಿಎಂ ಆಗಿ ನೇಮಕವಾಗಿದ್ದರು. ಹುದ್ದೆಯಿಂದ ಕೆಳಗಿಳಿದು ಮತ್ತೆ ಹೇಮಂತ್ ಅವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.
“ನಾಯಕತ್ವ ಬದಲಾದಾಗ ನನಗೆ ಜವಾಬ್ದಾರಿ ನೀಡಲಾಯಿತು. ಘಟನೆಗಳ ಬಗ್ಗೆ ನಿಮಗೆ ತಿಳಿದಿದೆ. ಹೇಮಂತ್ ಸೊರೇನ್ ಅವರು ಹಿಂತಿರುಗಿದ ನಂತರ ನಾವು ಅವರನ್ನು ನಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದೇವೆ, ನಾನು ರಾಜೀನಾಮೆ ನೀಡಿದ್ದೇನೆ. ನಾನು ಮೈತ್ರಿಕೂಟದ ನಿರ್ಧಾರವನ್ನು ಅನುಸರಿಸುತ್ತಿದ್ದೇನೆ’ ಎಂದು ಚಂಪೈ ಸೊರೇನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
JMM ಕಾಂಗ್ರೆಸ್, ಆರ್ ಜೆಡಿ ಮತ್ತು ಎಡ ಪಕ್ಷಗಳ ಮೈತ್ರಿಕೂಟದ ಸರಕಾರವನ್ನು ನಡೆಸುತ್ತಿದೆ.
#WATCH | JMM executive president and former CM Hemant Soren takes oath as the Chief Minister of Jharkhand, at Raj Bhavan in Ranchi.
Governor CP Radhakrishnan administers him the oath to office. pic.twitter.com/b0LydgYuxb
— ANI (@ANI) July 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.